Politics: ಒಂದೇ ಕುಟುಂಬ ಅಧಿಕಾರದಲ್ಲಿ ಇರಬೇಕೆಂಬ ಕಾರಣಕ್ಕಾಗಿ ಕೈ ರಾಜಕಾರಣ: ದೇವೇಗೌಡ
Team Udayavani, Sep 27, 2023, 10:44 PM IST
ಬೆಂಗಳೂರು: ರಾಜಕೀಯ ಲಾಭಕ್ಕಾಗಿ ಒಂದು ಕುಟುಂಬ ಇಡಿಯ ರಾಜಕಾರಣವನ್ನೇ ನಿಯಂತ್ರಿಸುವ ಪ್ರಯತ್ನ ಮಾಡುತ್ತಿದೆ. ಒಂದೇ ಕುಟುಂಬ ಅಧಿಕಾರದಲ್ಲಿ ಇರಬೇಕೆಂಬ ಕಾರಣಕ್ಕಾಗಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಆರೋಪಿಸಿದರು.
ಪಕ್ಷದ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ನಾನು ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಿದ್ದವನು. ನನ್ನನ್ನು ಬಿಜೆಪಿಯ ಬಿ ಟೀಮ್ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ನನಗೇ ಪ್ರಮಾಣಪತ್ರ ಕೊಟ್ಟಿದ್ದರು. ಯಡಿಯೂರಪ್ಪ ವಿರುದ್ಧ ಎರಡೇ ದಿನಕ್ಕೆ ಅವಿಶ್ವಾಸ ನಿರ್ಣಯ ತಂದರು. ಬಿ.ಎಂ. ಫಾರೂಕ್ ಅವರನ್ನು ರಾಜ್ಯಸಭೆ ಅಭ್ಯರ್ಥಿಯಾಗಿ ಕಣಕ್ಕಿಳಿಸಿದಾಗ 8 ಜನ ಸೇರಿಕೊಂಡು ಸೋಲಿಸಿದರು. ಅವರ ಹೈಕಮಾಂಡ್ ಕ್ರಮ ಜರಗಿಸಲಿಲ್ಲ. ಕಾಸಿಗಾಗಿ ರಾಜಕಾರಣ (ಪೇಯ್ಡ ಪಾಲಿಟಿಕ್ಸ್) ಮಾಡಿದವರ್ಯಾರು? ದೇಶದ ಜನರನ್ನು ಮೂರ್ಖರನ್ನಾಗಿ ಮಾಡುತ್ತೀರಾ? ಎಂದು ಪ್ರಶ್ನಿಸಿದರಲ್ಲದೆ, ನಾವು ಜಾತ್ಯತೀತ ಪ್ರಜಾಪ್ರಭುತ್ವವಾದಿಗಳು ಎಂದು ಪ್ರತಿಪಾದಿಸಿದರು.
ಪ್ರಾದೇಶಿಕ ಪಕ್ಷ ಉಳಿಸಲೇಬೇಕಿದೆ
ಮೊರಾರ್ಜಿ ದೇಸಾಯಿ ಅವರು ಪಕ್ಷವನ್ನು ನನ್ನ ಕೈಗೆ ಕೊಟ್ಟ ಅನಂತರ 40 ವರ್ಷ ಹೋರಾಡಿದ್ದೇನೆ. ನೋವಿದೆ. ಪ್ರಾದೇಶಿಕ ಪಕ್ಷವನ್ನು ಉಳಿಸಲೇಬೇಕಿದೆ. ಇದು ಅವಕಾಶವಾದಿ ರಾಜಕಾರಣ ಅಲ್ಲ. ಬಿಜೆಪಿ ಜತೆಗೆ ಬೇರೆ ಯಾವ ಪಕ್ಷಗಳೂ ಹೊಂದಾಣಿಕೆ ಮಾಡಿಕೊಂಡೇ ಇಲ್ಲವೇ? ಕೇರಳದ ಮುಖಂಡರಿಗೆ ಬೇಕಿದ್ದರೆ ಪಕ್ಷದ ಅಧ್ಯಕ್ಷ ಸ್ಥಾನವನ್ನೇ ಬಿಟ್ಟುಕೊಡುತ್ತೇನೆಂದು ನೇರವಾಗಿ ಹೇಳಿದರು. ಈ ಎಲ್ಲ ಕಾರಣದಿಂದಲೇ 10 ವರ್ಷದಲ್ಲಿ ಮೊದಲ ಬಾರಿಗೆ ನಾನೇ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತನಾಡಿದೆ. ಕದ್ದು ಮುಚ್ಚಿ ಮಾತನಾಡುವ ಆವಶ್ಯಕತೆ ಇಲ್ಲ. ಕರ್ನಾಟಕ ರಾಜಕಾರಣದ ಸ್ಥಿತಿ ಏನು ಎಂಬುದನ್ನು ಅವರೊಂದಿಗೆ ಮಾತನಾಡಿದ ಬಳಿಕವೇ ಕುಮಾರಸ್ವಾಮಿ ಅವರು ಮಾತು ಮುಂದವರಿಸಿದ್ದು, ಪಕ್ಷದ 19 ಶಾಸಕರು, ಮೇಲ್ಮನೆಯ 8 ಸದಸ್ಯರು, ಸೋತ ಅಭ್ಯರ್ಥಿಗಳು, ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಪಡೆದು ಬಿಜೆಪಿ ಜತೆ ಸೇರಿದ್ದೇವೆ ಎಂದು ಪುನರುತ್ಛರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.