ಬರ ನಿರ್ವಹಣೆಗೆ ಅಂತರ್ಜಲ ಸುಧಾರಣೆಯೇ ಪರಿಹಾರ: ಬೋಸರಾಜು
ಜಲ ಮೂಲಗಳ ಸಂರಕ್ಷಣೆ, ಕೆರೆಗಳ ಒತ್ತುವರಿ ತೆರವು, ಹೂಳೆತ್ತಲು ಕ್ರಮ
Team Udayavani, Sep 28, 2023, 12:22 AM IST
ಬೆಂಗಳೂರು: ಸರಕಾರಕ್ಕೆ ಅತಿವೃಷ್ಟಿ ಮತ್ತು ಅನಾವೃಷ್ಟಿ ಗಳೆರಡನ್ನೂ ನಿರ್ವಹಿಸುವುದು ಸವಾಲಿನ ಸಂಗತಿ. ಪ್ರಸ್ತುತ ಬರ ನೀಗಲು ಜಲ ಮೂಲಗಳ ಸಂರಕ್ಷಣೆ ಮತ್ತು ಅಂತರ್ಜಲ ಮಟ್ಟ ಸುಧಾರಣೆಯೇ ಪರಿಹಾರ. ರಾಜ್ಯದ 40 ಸಾವಿರ ಜಲಮೂಲಗಳ ಸಂರಕ್ಷಣೆ ಹಾಗೂ ಪುನಃಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅಭಿಪ್ರಾಯಪಟ್ಟರು.
“ಉದಯವಾಣಿ’ ಬೆಂಗಳೂರು ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತಿವೃಷ್ಟಿ ಸಂದರ್ಭದಲ್ಲಿ ಪ್ರವಾಹ ಉಂಟಾಗಿ ನೀರು ವ್ಯರ್ಥವಾಗುವುದಲ್ಲದೆ, ರೈತರ ಬೆಳೆ ನಷ್ಟ, ಜನ-ಜಾನುವಾರುಗಳಿಗೆ ಸಂಕಷ್ಟ ಎದುರಾಗುತ್ತವೆ. ವ್ಯರ್ಥವಾಗುವ ನೀರನ್ನು ಹೇಗೆಲ್ಲ ಸದ್ಬಳಕೆ ಮಾಡಿ ಕೊಳ್ಳಬಹುದು ಎಂಬ ಆಲೋಚನೆ ಒಂದೆಡೆಯಿದ್ದರೆ, ಬರಗಾಲದಂತಹ ಸನ್ನಿವೇಶಗಳನ್ನು ಎದುರಿಸುವುದು ಹೇಗೆ ಎಂಬ ಚಿಂತನೆಗಳೂ ಇನ್ನೊಂದೆಡೆ ಇವೆ. ಹೀಗಾಗಿ ಲಭ್ಯವಿರುವ ಜಲಮೂಲ ಗಳನ್ನು ಸಂರಕ್ಷಿಸಿದರೆ ಅಂತರ್ಜಲ ವೃದ್ಧಿಯಾಗಿ ಬರಗಾಲ ನಿರ್ವಹಣೆ ಸುಲಭವಾಗಲಿದೆ. ಈ ನಿಟ್ಟಿನಲ್ಲಿ ತಮ್ಮ ಸರಕಾರ ಕಾರ್ಯೋನ್ಮುಖವಾಗಿದೆ ಎಂದರು.
ಸದ್ಯಕ್ಕೆ ರಾಜ್ಯದ 195ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಈ ಸಂಖ್ಯೆ ಮತ್ತಷ್ಟು ಏರಿಕೆಯೂ ಆಗಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.