Rabies: ಎರಡು ವರ್ಷದಲಿ 66 ಜೀವಗಳು ರೇಬಿಸ್‌ಗೆ ಬಲಿ


Team Udayavani, Sep 28, 2023, 1:58 PM IST

tdy-10

ಬೆಂಗಳೂರು: ರಾಜ್ಯದಲ್ಲಿ ಎರಡು ವರ್ಷಗಳಲ್ಲಿ 66 ಮಂದಿ ರೇಬಿಸ್‌ನಿಂದ ಸಾವನ್ನಪ್ಪಿದ್ದು, ಇವುಗಳಲ್ಲಿ 15 ವರ್ಷದೊಳಗಿನ ಮಕ್ಕಳ ಪ್ರಮಾಣ ಹೆಚ್ಚಿರುವುದು ಆತಂಕಕ್ಕೀಡು ಮಾಡಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ, ರೇಬಿಸ್‌ ರೋಗ ನಿರ್ಮೂಲನೆಗೆ ರಾಜ್ಯದಲ್ಲಿ ಸಮರ್ಪಕವಾಗಿ ಲಸಿಕೆಗಳು, ಔಷಧಿಗಳು, ಎಲ್ಲ ವಿಧದ ಚಿಕಿತ್ಸಾ ಸೇವೆ ಒದಗಿಸಲು ಮುಂದಾಗಿದೆ.

2022ರಲ್ಲಿ 41 ಹಾಗೂ 2023ರಲ್ಲಿ (ಜನವರಿಯಿಂದ ಜುಲೈವರಗೆ) 25 ಮಂದಿ ರೇಬಿಸ್‌ಗೆ ಬಲಿಯಾಗಿರುವುದನ್ನು ಆರೋಗ್ಯ ಇಲಾಖೆಯೇ ದೃಢಪಡಿಸಿದೆ. ಈ ಪೈಕಿ 15 ವರ್ಷದೊಳಗಿನ ಮಕ್ಕಳೇ ಹೆಚ್ಚಿನ ಪ್ರಮಾಣದಲ್ಲಿದ್ದಾರೆ. ಮಕ್ಕಳಿಗೆ ನಾಯಿ ಕಚ್ಚಿದರೆ ಹೆಚ್ಚಿನ ಸಂದರ್ಭಗಳಲ್ಲಿ ಪೋಷಕರ ಅಥವಾ ಸಂಬಂಧಪಟ್ಟವರ ಗಮನಕ್ಕೆ ಬರುವುದಿಲ್ಲ. ಇದು ಕೂಡ ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ವಿಶ್ವಾದ್ಯಂತ ಸಂಭವಿಸುವ ರೇಬಿಸ್‌ ಸಾವಿನ ಪ್ರಕರಣಗಳಲ್ಲಿ ಶೇ.36ರಷ್ಟು ಭಾರತದಲ್ಲೇ ಸಂಭವಿಸುತ್ತಿವೆ. 18 ರಿಂದ 20 ಸಾವಿರ ಮಂದಿ ಪ್ರತಿ ವರ್ಷ ದೇಶದಲ್ಲಿ ರೇಬಿಸ್‌ ರೋಗದಿಂದ ಸಾವನ್ನಪ್ಪುತ್ತಿರುವುದನ್ನು ರಾಷ್ಟ್ರೀಯ ರೋಗ ನಿಯಂತ್ರ ಣದ ಸಂಸ್ಥೆಯ ರಾಷ್ಟ್ರೀಯ ರೇಬಿಸ್‌ ನಿರ್ಮೂಲನ ಕ್ರಿಯಾ ಯೋಜನೆ ವರದಿಯಿಂದ ತಿಳಿದು ಬಂದಿದೆ.

ನಾಯಿ ಕಡಿತದಿಂದ ಶೇ.99ರಷ್ಟು ರೇಬಿಸ್‌: ಮನುಷ್ಯರಿಗೆ ರೇಬಿಸ್‌ ರೋಗವು ಶೇ.99 ನಾಯಿ ಕಡಿತದಿಂದ ಬರುತ್ತದೆ. ಇನ್ನುಳಿದಂತೆ ಬೆಕ್ಕು, ತೋಳ, ನರಿ, ಕಾಡು ಇಲಿಗಳ ಕಡಿತದಿಂದ ಶೇ.1 ಪ್ರಮಾಣದಷ್ಟು ಹರಡುತ್ತದೆ. ರೇಬಿಸ್‌ ಶೇ.100ರಷ್ಟು ಮಾರಣಾಂತಿಕ ಕಾಯಿಲೆ ಯಾಗಿದೆ. ಆದರೆ ಸಮಯೋಚಿತ ವೈದ್ಯಕೀಯ ಚಿಕಿತ್ಸೆಯ ಮೂಲಕ ಈ ರೋಗ ತಡೆಗಟ್ಟಬಹುದು.

ನಿಯಂತ್ರಣಕ್ಕೆ ಸರ್ಕಾರ ಕೈಗೊಂಡ ಕ್ರಮಗಳು: ರೇಬಿಸ್‌ ನಿರ್ಮೂಲನೆಗೆ ಮಾರ್ಗದರ್ಶನ ನೀಡಲು ರಾಜ್ಯ, ಜಿಲ್ಲಾ ಹಾಗೂ ಬಿಬಿಎಂಪಿ ವಲಯಗಳಲ್ಲಿ ಜಂಟಿ ಚಾಲನಾ ಸಮಿತಿ ರಚಿಸಲಾಗಿದೆ. ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳನ್ನು ರೇಬಿಸ್‌ ಮುಕ್ತ ಜಿಲ್ಲೆಗಳಾಗಿಸಲು ಕ್ರಿಯಾಯೋಜನೆ ರೂಪಿಸಲಾಗುತ್ತಿದೆ. ರಾಷ್ಟ್ರೀಯ ರೇಬಿಸ್‌ ನಿಯಂತ್ರಣ ಕಾರ್ಯಕ್ರಮವು ಮಾನವ ಸಂಪನ್ಮೂಲ, ಸಲಕರಣೆ, ರೋಗಪತ್ತೆ, ಚಿಕಿತ್ಸೆ ಯನ್ನು ಒಳಗೊಂಡಿವೆ. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಷ್ಟ್ರೀಯ ರೇಬಿಸ್‌ ನಿಯಂತ್ರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲ ಪ್ರಾಣಿ ಕಡಿತದ ಪ್ರಕರಣಗಳು (ಹಾವು ಕಡಿತ ಹೊರತುಪಡಿಸಿ) ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ.

ರೇಬಿಸ್‌ ನಿರೋಧಕ ಲಸಿಕೆಯು ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೇಲ್ಮಟ್ಟದ ಆಸ್ಪತ್ರೆಗಳಲ್ಲಿ ಲಭ್ಯವಿರುತ್ತದೆ. ಈ ಚಿಕಿತ್ಸೆಯು ಸಂಪೂರ್ಣ ಉಚಿತವಾಗಿದೆ. ರೇಬಿಸ್‌ ನಿರ್ಮೂಲನೆಗಾಗಿ ರಾಜ್ಯ ಸರ್ಕಾರಿ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ ಎಂ)ನಿಂದ 2022-23ರಲ್ಲಿ 86.64 ಲಕ್ಷ ರೂ. ಹಾಗೂ 2023-24ರಲ್ಲಿ 87.84 ಲಕ್ಷ ರೂ.ಮೀಸಲಿಡಲಾಗಿದೆ.

ರೇಬಿಸ್‌ ಬಗೆಗಿನ ಮುನ್ನೆಚ್ಚರಿಕೆಗಳೇನು?:

 ನಾಯಿ ಕಚ್ಚಿದ ಬಳಿಕ ತತ್‌ ಕ್ಷಣವೇ ಚಿಕಿತ್ಸೆ ಪಡೆಯಿರಿ.

 ಈ ರೋಗದ ಬಗ್ಗೆ ನಿರ್ಲಕ್ಷ್ಯ ತೋರುವುದು ಬೇಡ.

 ರೇಬಿಸ್‌ ಕುರಿತಾದ ಮಾಹಿತಿ ಕೊರತೆಯಿಂದ ಜೀವ ಕಳೆದುಕೊಂಡವರಿದ್ದಾರೆ.

 ನಾಯಿ ಕಚ್ಚಿದ ಗಾಯವನ್ನು ಹರಿಯುವ ಸ್ವತ್ಛ ನೀರಿನಲ್ಲಿ 15 ನಿಮಿಷ ತೊಳೆಯಿರಿ.

 ನಾಯಿ ಕಚ್ಚಿದರೆ ವೈದ್ಯರನ್ನು ಭೇಟಿಯಾಗಿ ಲಸಿಕೆ ಪಡೆದು ಸುರಕ್ಷಿತವಾಗಿರಿ.

 ಬೆಕ್ಕು, ತೋಳ, ನರಿ, ಕಾಡು ಇಲಿಗಳ ಕಡಿತದಿಂದ ರೇಬಿಸ್‌

 

ಟಾಪ್ ನ್ಯೂಸ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

1-lo

Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

3

Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್‌

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Queen’s Premier League: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಜೆರ್ಸಿ ಬಿಡುಗಡೆ

Queen’s Premier League: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಜೆರ್ಸಿ ಬಿಡುಗಡೆ

7

‘The Indian House’ Movie: ರಾಮ್‌ಚರಣ್‌ ನಿರ್ಮಾಣದಲ್ಲಿ ʼದಿ ಇಂಡಿಯನ್‌ ಹೌಸ್‌ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.