![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 28, 2023, 2:31 PM IST
ನಟ ದಿಗಂತ್ ಅಭಿನಯದ “ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ತೆರೆಗೆ ಬರಲು ತಯಾರಾಗುತ್ತಿದೆ. ಇದೀಗ ಈ ಸಿನಿಮಾದಲ್ಲಿ ನಾಯಕ ನಟ ದಿಗಂತ್ ಜೊತೆಗೆ ಮತ್ತೂಬ್ಬ ನಟನ ಆಗಮನವಾಗಿದೆ ಅವರೇ ನಿರೂಪ್ ಭಂಡಾರಿ. “ಎಡಗೈ’ ತಂಡಕ್ಕೆ “ರಂಗಿತರಂಗ’ ಖ್ಯಾತಿಯ ನಟ ನಿರೂಪ್ ಭಂಡಾರಿ ಎಂಟ್ರಿಕೊಟ್ಟಿದ್ದಾರೆ. ಇದೇ ಮೊದಲ ಬಾರಿಗೆ ನಿರೂಪ್ ಮತ್ತು ದಿಗಂತ್ ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸ್ಟಾರ್ ಕಲಾವಿದರು ಒಟ್ಟಿಗೆ ಸಿನಿಮಾ ಮಾಡುವುದು ತೀರ ಅಪರೂಪವಾಗಿದೆ. ಮಲ್ಟಿಸ್ಟಾರ್ ಸಿನಿಮಾಗಳಿಗೆ ಖ್ಯಾತ ಕಲಾವಿದರನ್ನು ಸೇರಿಸಿ ಸಿನಿಮಾ ಮಾಡುವುದು ನಿರ್ಮಾ ಪಕರಿಗೂ ಸಹ ದೊಡ್ಡ ಸವಾಲಾಗಿದೆ. ಹೀಗಿರುವಾಗ ದಿಗಂತ್ ಸಿನಿಮಾದಲ್ಲಿ ನಿರೂಪ್ ಭಂಡಾರಿ ಕಾಣಿಸಿಕೊಂಡಿ ರು ವುದು ವಿಶೇಷ. ಈ ಸಿನಿಮಾದಲ್ಲಿ ನಿರೂಪ್ ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ. ಅಷ್ಟಕ್ಕೂ ಹೀರೋ ಆಗಿ ಅಬ್ಬರಿಸುತ್ತಿದ್ದ ನಿರೂಪ್ ಭಂಡಾರಿ, ದಿಗಂತ್ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಲು ಸಿನಿಮಾ ಕಥೆ ಮತ್ತು ಕಾನ್ಸೆಪ್ಟ್ ಕಾರಣವಂತೆ. ಕಮರ್ಷಿಯಲ್ ಸಿನಿಮಾಗಳ ಮಧ್ಯೆ ಇಂತದೊಂದು ವಿಭಿನ್ನ ರೀತಿಯ ಕಾನ್ಸೆಪ್ಟ್ ಇರುವ ಚಿತ್ರದ ಕಥೆ ಕೇಳಿ ನಿರೂಪ್ ಇಂಪ್ರಸ್ ಆಗಿದ್ದಾರೆ.
ಇನ್ನು ಯಂಗ್ ಅಂಡ್ ಎನರ್ಜಿಟಿಕ್ ಆಗಿರುವ ತಂಡ ನೋಡಿ ಈ ಸಿನಿಮಾದಲ್ಲಿ ತಾವು ಕೂಡ ಭಾಗಿ ಆದರೆ ಚೆನ್ನಾಗಿರುತ್ತೆ ಎಂದು ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ತಂಡದ ಜೊತೆ ಕೈಜೋಡಿಸಿದ್ದಾರೆ ನಿರೂಪ್ ಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ಸಮರ್ಥ್ ಬಿ. ಕಡಕೊಳ್ನಿರ್ದೇಶನ ಮಾಡುತ್ತಿದ್ದಾರೆ.
ಶೀರ್ಷಿಕೆಯೇ ಹೇಳುವಂತೆ ಇದು ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಸಿನಿಮಾವಾಗಿದೆ. “ಹೈಫನ್ ಪಿಕ್ಚರ್’ ಬ್ಯಾನರ್ ಅಡಿಯಲ್ಲಿ ಗುರುದತ್ ಗಾಣಿಗ ಮತ್ತು ನಿರ್ದೇಶಕ ಸಮರ್ಥ್ ಬಿ. ಕಡಕೊಳ್ ಜೊತೆಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ದಿಗಂತ್ ಮಂಚಾಲೆ ಅವರಿಗೆ ಜೋಡಿಯಾಗಿ ನಟಿ ಧನು ಹರ್ಷ ಅಭಿನಯಿಸಿದ್ದಾರೆ. ಉಳಿದಂತೆ ರಾಧಿಕಾ ನಾರಾಯಣ್ ಮತ್ತು ನಿಧಿ ಸುಬ್ಬಯ್ಯ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.