World Cup ; ಹೈದರಾಬಾದ್ ನಲ್ಲಿ ‘ಅನಿರೀಕ್ಷಿತ’ ಸ್ವಾಗತ ಕಂಡು ಪಾಕ್ ತಂಡ ಫುಲ್ ಖುಷ್

ಏಳು ವರ್ಷಗಳ ನಂತರ ಭಾರತಕ್ಕೆ ಬಂದ ಪಾಕಿಸ್ಥಾನ ತಂಡ...

Team Udayavani, Sep 28, 2023, 5:01 PM IST

1-saasd

ಹೈದರಾಬಾದ್ : ಏಕದಿನ ವಿಶ್ವಕಪ್ ಆಡಲು ಭಾರತಕ್ಕೆ ಬಂದ ಪಾಕಿಸ್ಥಾನ ತಂಡಕ್ಕೆ ಪ್ರೀತಿ ಪೂರ್ವಕ ಭವ್ಯ ಸ್ವಾಗತ ನೀಡಲಾಯಿತು. ಈ ವಿಚಾರ ಸಾಮಾಜಿಕ ತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ವೀಸಾಗೆ ಸಂಬಂಧಿಸಿ ಸ್ವಲ್ಪ ಬಿಕ್ಕಟ್ಟಿನ ನಂತರ ಪಾಕಿಸ್ಥಾನ ಕ್ರಿಕೆಟ್ ತಂಡ ಹೈದರಾಬಾದ್‌ಗೆ ಬಂದು ತಲುಪಿದೆ.

ನ್ಯೂಜಿಲ್ಯಾಂಡ್ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಮುಂಚಿತವಾಗಿ ಹೈದರಾಬಾದ್‌ ಗೆ ಬಾಬರ್ ಅಜಮ್ ಅವರ ತಂಡ ಆಗಮಿಸಿದಾಗ ಭವ್ಯವಾದ ಸ್ವಾಗತವನ್ನು ಪಡೆದರು. ವಿಶ್ವಕಪ್‌ ಪದ್ಯಾವಳಿ ಆರಂಭಕ್ಕೂ ಮುನ್ನ ಪಾಕಿಸ್ಥಾನ ತನ್ನ ಅಭ್ಯಾಸ ಪಂದ್ಯವನ್ನು ನ್ಯೂಜಿಲ್ಯಾಂಡ್ ವಿರುದ್ಧ ಸೆ 29 ರಂದು ಹೈದರಾಬಾದ್‌ನಲ್ಲಿ ಮುಚ್ಚಿದ ಬಾಗಿಲುಗಳ ನಡುವೆ ಆಡಲಿದೆ. ಕೆಲ ಕಾರಣಗಳಿಂದ ಭದ್ರತೆ ನೀಡಲು ಪೊಲೀಸರಿಗೆ ಸಾಧ್ಯವಾಗದ ಕಾರಣ ಪಂದ್ಯಕ್ಕೆ ಪ್ರೇಕ್ಷಕರಿಗ್ಯಾರಿಗೂ ಅವಕಾಶ ನೀಡಲಾಗುತ್ತಿಲ್ಲ.

ಅಕ್ಟೋಬರ್ 6 ರಂದು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ವಿಶ್ವಕಪ್ ಅಭಿಯಾನವನ್ನು ಪಾಕಿಸ್ಥಾನ ಆರಂಭಿಸಲಿದೆ.

“ಜನರು ಮೈದಾನಕ್ಕೆ ಬರುತ್ತಾರೆ ಎಂದು ನಾವು ನಿರೀಕ್ಷಿಸಿದ್ದೆವು, ಆದರೆ ಅಭಿಮಾನಿಗಳಿಂದ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನಿರೀಕ್ಷಿಸಲಿರಲಿಲ್ಲ. ಅವರು ತಂಡದ ಸ್ವಾಗತಕ್ಕಾಗಿ ಅಣಿಯಾಗಿದ್ದರು. ಅದನ್ನು ನೋಡುವುದೇ ಅದ್ಭುತವಾಗಿತ್ತು.ಆಟಗಾರರು ಸಹ ಅದನ್ನು ಕಂಡು ಭಾವುಕರಾದರು ”ಎಂದು ಪಾಕ್ ತಂಡದ ಮೂಲವು ಪಿಟಿಐಗೆ ತಿಳಿಸಿದೆ.

“ಜಬರ್ದಸ್ತ್. ಮಜಾ ಆ ಗಯಾ,” ಎಂದು ಪಾಕ್ ಪ್ರಧಾನ ವೇಗಿ ಹ್ಯಾರಿಸ್ ರೌಫ್ ಅವರು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಶನ್ ​​ಮೈದಾನಕ್ಕೆ ಕಾಲಿಟ್ಟಾಗ ಪ್ರತಿಕ್ರಿಯಿಸಿದರು.

ಬಾಬರ್ ಮತ್ತು ಶಾಹೀನ್ ಅಫ್ರಿದಿ ಅವರು ಬಂಜಾರಾ ಹಿಲ್ಸ್‌ನಲ್ಲಿರುವ ಹೆಚ್ಚು ಕಾವಲು ಹೊಂದಿರುವ ತಂಡದ ಹೋಟೆಲ್‌ಗೆ ಆಗಮಿಸಿದ್ದು, ಅವರ ಇನ್‌ಸ್ಟಾ ಸ್ಟೋರಿಯಲ್ಲಿ, “ಹೈದರಾಬಾದ್‌ನಲ್ಲಿರುವ ಪ್ರೀತಿ ಮತ್ತು ಬೆಂಬಲದಲ್ಲಿ ಮುಳುಗಿದ್ದೇವೆ” ಎಂದು ಬಾಬರ್ ಬರೆದಿದ್ದಾರೆ. ಶಾಹೀನ್ “ಇಲ್ಲಿಯವರೆಗೆ ಕಂಡ ಉತ್ತಮ ಸ್ವಾಗತ” ಎಂದು ಬರೆದಿದ್ದಾರೆ.

“ದುರದೃಷ್ಟವಶಾತ್, ನಾವು ನಮ್ಮ ದೇಶದ ಅಭಿಮಾನಿಗಳನ್ನು ಕಳೆದುಕೊಳ್ಳುತ್ತೇವೆ. ಆದರೆ, ನನಗೆ ತಿಳಿದಿರುವಂತೆ, ಟಿಕೆಟ್ ಗಳೆಲ್ಲವೂ ಮಾರಾಟವಾಗಿವೆ, ಆದ್ದರಿಂದ ನಾವು ಕಿಕ್ಕಿರಿದ ಕ್ರೀಡಾಂಗಣಗಳಲ್ಲಿ ಆಡುತ್ತೇವೆ. ನಮ್ಮ ಅಭಿಮಾನಿಗಳು ಅಲ್ಲಿಲ್ಲದಿದ್ದರೂ, ಅವರು ಆಟವನ್ನು ಆನಂದ ಪಡುತ್ತಾರೆ ಎಂದು ನನಗೆ ತಿಳಿದಿದೆ. ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿ ಕಂಡುಬರುತ್ತಿದೆ, ಭಾರತದಲ್ಲಿನ ಅಭಿಮಾನಿಗಳು ತಮ್ಮ ಪ್ರೀತಿಯನ್ನು ತೋರಿಸುತ್ತಾರೆ ಎಂದು ನಾನು ಕೇಳಿದ್ದೇನೆ, ಆದರೂ ನಾನು ಅದನ್ನು ಅನುಭವಿಸಿಲ್ಲ ಆದರೆ ನಾನು ಭಾರತದಲ್ಲಿಯೂ ಆಡಲು ಉತ್ಸುಕನಾಗಿದ್ದೇನೆ” ಎಂದು ಬಾಬರ್ ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.