![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 29, 2023, 9:57 PM IST
ನವದೆಹಲಿ: ಕೇಂದ್ರಿಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್ಸಿ)ಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ತಮಿಳು ನಟ ವಿಶಾಲ್ ಆರೋಪದ ಬೆನ್ನಲ್ಲೇ, ಈ ಸಂಬಂಧಿಸಿದಂತೆ ತಕ್ಷಣದ ತನಿಖೆಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೇ, ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದಿಂದ ಅಧಿಕಾರಿಯೊಬ್ಬರನ್ನು ಮುಂಬೈನ ಸಿಬಿಎಫ್ಸಿ ಕಚೇರಿಗೆ ಕಳುಹಿಸಿ, ವಿಚಾರಣೆ ನಡೆಸಲು ಸೂಚಿಸಿರುವುದಾಗಿಯೂ ಸರ್ಕಾರ ಹೇಳಿದೆ.
ಈ ಕುರಿತು ಸಚಿವಾಲಯ ಟ್ವೀಟ್ ಮಾಡಿದ್ದು, ಕೇಂದ್ರ ಸರ್ಕಾರವು ಭ್ರಷ್ಟಾಚಾರದ ವಿಚಾರವನ್ನು ಸಹಿಸುವುದಿಲ್ಲ, ಸಿಬಿಎಫ್ಸಿಯಲ್ಲಿನ ಭ್ರಷ್ಟಾಚಾರದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಿಬಿಎಫ್ಸಿಯಿಂದ ಯಾವುದೇ ಸಮಸ್ಯೆ ಎದುರಾಗಿದ್ದರೆ ಅಂಥವರು ಮಾಹಿತಿ ನೀಡಿ, ತನಿಖೆಗೆ ಸಹಕರಿಸಬೇಕೆಂದು ತಿಳಿಸಿದೆ.
ವಿಶಾಲ್ ಆರೋಪವೇನು?
ತಾವು ಅಭಿನಯಿಸಿರುವ “ಮಾರ್ಕ್ ಆ್ಯಂಟನಿ’ ಸಿನಿಮಾದ ಹಿಂದಿ ಆವೃತ್ತಿ ಬಿಡುಗಡೆಗಾಗಿ ಪ್ರಮಾಣೀಕರಣ ಪತ್ರ ಕೋರಿ ಆನ್ಲೈನ್ ಮೂಲಕ ಸಿಬಿಎಫ್ಸಿಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಸಿಬಿಎಫ್ಸಿ ಅಧಿಕಾರಿಗಳು ತಾಂತ್ರಿಕ ದೋಷದ ಕಾರಣ ನೀಡಿ ಸಿನಿಮಾ ತಂಡದ ಸದಸ್ಯರನ್ನು ಕಚೇರಿಗೆ ಕರೆಸಿ, ಪ್ರಮಾಣ ಪತ್ರ ಬೇಕಾದರೆ 6.5 ಲಕ್ಷ ಲಂಚ ಕೊಡಬೇಕೆಂದು ಕೇಳಿದ್ದಾರೆ. ಬಳಿಕ ಬೇರೆ ಆಯ್ಕೆ ಇಲ್ಲದೇ 6.5 ಲಕ್ಷ ರೂ. ಲಂಚ ನೀಡಬೇಕಾಯಿತು ಎಂದು ವಿಶಾಲ್ ಆರೋಪಿಸಿದ್ದರು. ಈ ಆರೋಪವು ಸಿನಿ ಕ್ಷೇತ್ರದಲ್ಲಿ ಭಾರೀ ಸಂಚಲನ ಮೂಡಿಸಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.