Cauvery issue; ಎಲ್ಲ ಪಕ್ಷದವರ ಜೊತೆ ಚರ್ಚಿಸಿ ನೀರು ಬಿಡಬೇಕಿತ್ತು: ಕೆಎಸ್ ಈಶ್ವರಪ್ಪ


Team Udayavani, Sep 30, 2023, 12:06 PM IST

ಕೆಎಸ್ ಈಶ್ವರಪ್ಪ

ಶಿವಮೊಗ್ಗ: ಚೆನ್ನಾಗಿ ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ದಿ ಬಂದಂತೆ ಕಾಣುತ್ತಿದೆ. ಕಾವೇರಿ ನೀರು ಕಳ್ಳತನದಿಂದ ಬಿಡದಿರುತ್ತಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಕಳ್ಳತನದಿಂದ ನೀರು ಬಿಟ್ಟಿರುವುದೇ ದೊಡ್ಡ ತಪ್ಪು. ಆಗ ಇವರನ್ನು ಕಳ್ಳ ಎಂದು ಹೇಳಲಾಗಿತ್ತು. ಎಲ್ಲರ ಜೊತೆ ಮಾತುಕತೆ ನಡೆಸಿದ್ದರೆ ರಾಜ್ಯದ ಜನರು ಅವರ ಜತೆ ಇರುತ್ತಿದ್ದರು ಎಂದು ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಾಲಿನ್ ಎಂಬ ಪುಣ್ಯಾತ್ಮನಿಗೆ ಒಪ್ಪಿಸಲು, ಇಂಡಿಯಾ ಸಂಸ್ಥೆ ಓಲೈಸಲು ಡಿ.ಕೆ. ಶಿವಕುಮಾರ್ ನೀರು ಬಿಟ್ಟಿದ್ದಾರೆ. ಸಿದ್ಧರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರಾಜ್ಯದ ಜನರಿಗೆ ದ್ರೋಹ ಮಾಡಿದ್ದಾರೆ. ಈಗ ವಕೀಲರು, ತಜ್ಞರು ಹಾಗೂ ಹಲವರನ್ನು ಕರೆದು ಮಾತುಕತೆ ನಡೆಸಿದ್ದಾರೆ. ಮೊದಲು ಕಳ್ಳ ಎಂದೆ, ಈಗ ದಡ್ಡರು ಎನ್ನಬೇಕಾಗಿದೆ ಎಂದರು.

ನಾವು ಜನರ ಜೊತೆ ಇದ್ದೆವೆ ಎಂದು ಈಗ ಹೇಳುತ್ತಿದ್ದಾರೆ. ಇದಕ್ಕಿಂತ ಅನ್ಯಾಯ ಮತ್ತೇನಿದೆ. ರೈತರು, ವಕೀಲರು ಹಾಗೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಿಂದೆ ಮುಖ್ಯಮಂತ್ರಿಗಳು ನೀರು ಬಿಟ್ಟಿದ್ದ ಉದಾಹರಣೆಯಿದೆ. ಇವರಿಬ್ಬರು ರಾಜ್ಯದ ಜನರ ಕ್ಷಮೆ ಕೋರಬೇಕು. ನೀರೆಲ್ಲಾ ಬಿಟ್ಟಾದ ಮೇಲೆ ಈಗ ಸಭೆ ನಡೆಸಿ ಉಪಯೋಗವೇನು? ಎಲ್ಲವೂ ಸಂವಿಧಾನ ಬದ್ಧವಾಗಿ ಆಗಬೇಕು. ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಚರ್ಚೆ ನಡೆಸದೆ ನೀರು ಬಿಟ್ಟಿದ್ದೆ ತಪ್ಪು. ಎಲ್ಲ ಪಕ್ಷದವರ ಜೊತೆ ಚರ್ಚಿಸಿ ನೀರು ಬಿಡಬೇಕಿತ್ತು ಎಂದರು.

ಎಲ್ಲದಕ್ಕೂ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕೆಂಬುದು ಕೂಡ ತಪ್ಪು. ಬರ ಕೂಡ ಇದ್ದು, ರಾಜ್ಯಕ್ಕೆ ಎಷ್ಟು ನೀರು ಬೇಕು ಎಂದು ಸರ್ವೆ ಮಾಡಿಲ್ಲ. ಇದು ನೂರಾರು ವರ್ಷಗಳ ಸಮಸ್ಯೆ. ಚಲನಚಿತ್ರ ನಟರು ಬರಲಿಲ್ಲ ಎಂದು ಈಗ ಬೊಬ್ಬೆ ಹೊಡೆಯುತ್ತಿದ್ದಾರೆ. ನೀವು ನೀರು ಬಿಟ್ಟು ಬೇರೆಯವರ ಮೇಲೆ ಬೊಟ್ಟು ತೋರಿಸುವ ಕೆಲಸ ಮಾಡುತ್ತಿದ್ದಾರೆ. ಜನ ಆಯ್ಕೆ ಮಾಡಿದ ಸರ್ಕಾರ 5 ವರ್ಷ ಇರಬೇಕು ಎಂಬುದು ನಮ್ಮ ಆಸೆ ಎಂದರು.

ಪ್ರಧಾನಮಂತ್ರಿ ಮೇಲೆ ಆರೋಪ ಮಾಡುವುದೆ ಇವರ ಕೆಲಸವಾಗಿದೆ. ಅಕ್ಕಿ ಕೊಟ್ಟಿಲ್ಲ ಎಂದು ಆರೋಪಿಸಿದ್ದರು. ಈಗ ನೀರಿನ ಬಗ್ಗೆ ಆರೋಪಿಸುತ್ತಿದ್ದಾರೆ. ಬರ ಬಂದಿದೆ, ಎಷ್ಟು ದುಡ್ಡು ಬೇಕು ಅಂಕಿ ಅಂಶ ಕೇಂದ್ರಕ್ಕೆ ಕಳಿಸಿದ್ದಿರಾ? ರಾಜ್ಯದ ಹಿತಾಸಕ್ತಿ ಕಾಪಾಡಬೇಕೆಂದರೆ ಎಲ್ಲರೂ ಒಟ್ಟಾಗಿರಬೇಕು. ಇಡೀ ಕರ್ನಾಟಕವನ್ನು ಒಟ್ಟಾಗಿ ಕರೆದು ಕಾನೂನು ತಜ್ಞರ ಬಳಿ ಚರ್ಚಿಸಬೇಕು ಎಂದು ಈಶ್ವರಪ್ಪ ಹೇಳಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.