![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Sep 30, 2023, 8:59 PM IST
ಈ ವರ್ಷಾಂತ್ಯದಲ್ಲಿ ನಡೆಯುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ಕಣಕ್ಕೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಧುಮುಕಲಿದ್ದಾರೆ ಎಂಬ ಸುದ್ದಿ ದಟ್ಟವಾಗಿ ಕೇಳಿಬರುತ್ತಿದೆ.
ಜ್ಯೋತಿರಾದಿತ್ಯ ಸಿಂಧಿಯಾ ಚಿಕ್ಕಮ್ಮ ನಾಲ್ಕು ಬಾರಿಯ ಶಾಸಕಿ, ಸಂಪುಟ ಸಚಿವೆ ಯಶೋಧರಾ ರಾಜೆ ಸಿಂಧಿಯಾ(69) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮುಂಬರುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಬಿಜೆಪಿಗೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ಎಂಟ್ರಿ ನೀಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡತೊಡಗಿವೆ.
ಮಧ್ಯಪ್ರದೇಶ ಚುನಾವಣೆಗೆ ಕೇಂದ್ರ ನಾಯಕರನ್ನು ಕಣಕ್ಕೆ ಇಳಿಸಲು ಬಿಜೆಪಿ ಮುಂದಾಗಿದೆ. ಆಡಳಿತ ವಿರೋಧಿ ಅಲೆಯನ್ನು ಸಮರ್ಪಕವಾಗಿ ಎದುರಿಸಲು ಅನೇಕ ಹಾಲಿ ಸಚಿವರು ಮತ್ತು ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಸ್ವತಃ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ. ಜ್ಯೋತಿರಾದಿತ್ಯ ಅವರನ್ನು ಕಣಕ್ಕಿಳಿಸುವ ಮೂಲಕ ಚೌಹಾಣ್ ಅವರ ಸ್ಥಾನಕ್ಕೆ ಯುವ ನಾಯಕನನ್ನು ಪಟ್ಟಾಷಿಭಿಕ್ತಗೊಳಿಸಲು, ಈ ಮೂಲಕ ಕೇಸರಿ ಪಡೆಯ ಜಯದ ಹಾದಿಯನ್ನು ಮುಂದುವರಿಸಲು ಚಿಂತನೆ ನಡೆದಿದೆ ಎಂಬ ಮಾತು ಪಕ್ಷದ ಪಡಸಾಲೆಯಲ್ಲಿ ಕೇಳಿಬಂದಿದೆ.
ಯಶೋಧರಾ ಅವರ ಕ್ಷೇತ್ರ ಶಿವಪುರಿಯಿಂದ ಜ್ಯೋತಿರಾದಿತ್ಯ ಅವರು ಚುನಾವಣಾ ಅಖಾಡ ಪ್ರವೇಶಿಸಲಿದ್ದಾರೆ ಎಂದು ಹೇಳಲಾಗಿದೆ. ಇದನ್ನು ಹೊರತುಪಡಿಸಿ ಗುನಾ ಜಿಲ್ಲೆಯ ಬಮೊರಿ ಅಥವಾ ಕೊಲಾರಸ್ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯೂ ಇದೆ.
2019ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುನಾ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬಿಜೆಪಿಯ ಡಾ. ಕೆ.ಪಿ.ಯಾದವ್ ಅವರ ಎದುರು ಸೋತಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.