Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

ಕಂಬಳ ಕೂಟಕ್ಕೆ ಸ್ಟಾರ್ ಸ್ಪರ್ಷ

Team Udayavani, Oct 1, 2023, 11:33 AM IST

Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

ಮಂಗಳೂರು: ‘ಅಲೆ ಬುಡ್ಯೆರ್ ಎಂಬ ಘೋಷಣೆಯೊಂದಿಗೆ ಕರೆಯಲ್ಲಿ ಜೋಡಿ ಕೋಣಗಳ ವೀರೋಚಿತ ಓಟ, ಜತೆಗೆ ಹಗ್ಗ- ನೇಗಿಲು ಹಿಡಿದು ಓಡುವ ಓಟಗಾರ, ಕೋಣ ಗೆದ್ದ ಖುಷಿಯಲ್ಲಿ ಮೀಸೆ ತಿರುವುತ್ತಾ ಗತ್ತಿನ ಹೆಜ್ಜೆ ಹಾಕುವ ಯಜಮಾನರು, ಸ್ಟಾರ್ ಕೋಣಗಳ ಹಿಂದೆ ಅಭಿಮಾನಿಗಳ ದಂಡು, ಪ್ರೇಕ್ಷಕರ ಕರಾಡತನ…‘ ಇದುವರೆಗೆ ಕರಾವಳಿಗೆ ಸೀಮಿತವಾಗಿದ್ದ ಕಂಬಳ ಕೂಟದ ಈ ದೃಶ್ಯಗಳು ಇದೀಗ ರಾಜಧಾನಿ ಬೆಂಗಳೂರಿಗೂ ಪರಿಚಯವಾಗುತ್ತಿದೆ. ನವೆಂಬರ್ ತಿಂಗಳ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರಾವಳಿಯ ಶ್ರೀಮಂತ ಸಂಸ್ಕೃತಿಯ ಅನಾವರಣವಾಗಲಿದೆ.

ಬೆಂಗಳೂರು ಕಂಬಳ ಆಯೋಜನೆಯ ಬಗ್ಗೆ ಮಂಗಳೂರಿನಲ್ಲಿ ಶನಿವಾರ ಕೋಣಗಳ ಯಜಮಾನರು ಮತ್ತು ಸಮಿತಿ ಪದಾಧಿಕಾರಿಗಳ ಸಭೆ ನಡೆಯಿತು. ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಹಲವು ಮಾಹಿತಿ ಹಂಚಿಕೊಂಡರು.

ಬೆಂಗಳೂರು ಕಂಬಳಕ್ಕೆ ಸುಮಾರು 100ರಿಂದ 130ರಷ್ಟು ಜೊತೆ ಕೋಣಗಳು ಭಾಗವಹಿಸಲಿದ್ದು, ಕಂಬಳಕ್ಕೆ ಎರಡು ದಿನಗಳ ಮೊದಲೇ ಕೋಣಗಳು ಬೆಂಗಳೂರಿಗೆ ಬರಲಿದೆ. ಮಂಗಳೂರಿನಿಂದ ರಾಜಧಾನಿಗೆ ಮೆರವಣಿಗೆ ರೂಪದಲ್ಲಿ ಲಾರಿಯಲ್ಲಿ ಕೋಣಗಳು ಸಾಗಲಿದೆ. ಜತೆಗೆ ಪಶು ವೈದ್ಯರು, ಪಶು ಆ್ಯಂಬುಲೆನ್ಸ್ ಗಳು ಸಾಗಲಿದೆ.

ಸ್ಟಾರ್ ಸ್ಪರ್ಷ: ರಾಜಧಾನಿಯಲ್ಲಿ ನಡೆಯಲಿರುವ ಮೊದಲ ಕಂಬಳಕ್ಕೆ ಸಿಎ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರು, ರಾಜಕೀಯ ನೇತಾರರು, ಚಿತ್ರರಂಗದ ಗಣ್ಯರು ಆಗಮಿಸಲಿದ್ದಾರೆ. ಕರಾವಳಿ ಕುವರಿ, ಬಾಲಿವುಡ್ ಸ್ಟಾರ್ ಐಶ್ವರ್ಯ ರೈ ಮತ್ತು ಸೂಪರ್ ಸ್ಟಾರ್ ರಜಿನಿಕಾಂತ್ ಅವರಿಗೂ ಆಹ್ವಾನ ನೀಡಲಾಗಿದೆ. ಗುರುಕಿರಣ್, ರಿಷಬ್ ಶೆಟ್ಟಿ, ಅನುಷ್ಕಾ ಶೆಟ್ಟಿ ಬರಲಿದ್ದಾರೆ ಎಂದು ಅಶೋಕ್ ರೈ ಹೇಳಿದರು.

ಕರಾವಳಿಯ ನೀರು: ಬೆಂಗಳೂರಿನ ಕಂಬಳಕ್ಕೆ ಆಗಮಿಸುವ ಪ್ರತಿ ಕೋಣಕ್ಕೂ ಮತ್ತು ಯಜಮಾನರುಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತದೆ. ಕೋಣಗಳಿಗೆ ಬೇಕಾದ ಕುಡಿಯುವ ನೀರು, ಹುರುಳಿ, ಹುಲ್ಲನ್ನು ಕರಾವಳಿಯಿಂದಲೇ ತೆಗೆದುಕೊಂಡು ಹೋಗಲಾಗುತ್ತದೆ.

ಕರಾವಳಿಯ ಕಂಬಳ ಕರೆಯಂತೆ 145 ಮೀಟರ್ ಉದ್ದದ ಟ್ರ್ಯಾಕ್ ನಲ್ಲಿ ಕಂಬಳ ನಡೆಯಲಿದೆ. ನುರಿತ ತಜ್ಞರೇ ಇದರ ಕೆಲಸ ನಿರ್ವಹಿಸಲಿದ್ದಾರೆ. ಕಂಬಳದ ಕರೆಗಳ ಹೆಸರನ್ನು ಇದುವರೆಗೂ ಅಂತಿಮಗೊಳಿಸಲಾಗಿಲ್ಲ.

ಬೃಹತ್ ಜನಸ್ತೋಮದ ನಿರೀಕ್ಷೆ: ಇತ್ತೀಚಿನ ವರ್ಷಗಳಲ್ಲಿ ಕಂಬಳ ಅಂತಾರಾಷ್ಟ್ರೀಯ ಮನ್ನಣೆ ಪಡೆಯುತ್ತಿದೆ. ಇದುವರೆಗೆ ವಿಡಿಯೋಗಳಲ್ಲಿ ಕೋಣಗಳ ಓಟ ಕಂಡಿದ್ದ ಬೆಂಗಳೂರಿನ ಜನತೆ ಭಾರೀ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. 7ರಿಂದ 9 ಲಕ್ಷ ಜನ ಸೇರುವ ಅಂದಾಜಿದ್ದು, ಎರಡು ಸಾವಿರದಷ್ಟು ವಿಐಪಿ ವ್ಯವಸ್ಥೆ, 15 ಸಾವಿರ ಜನರಿಗೆ ಗ್ಯಾಲರಿ ವ್ಯವಸ್ಥೆ ಮಾಡಲಾಗುತ್ತದೆ. ಆರು ಸಾವಿರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅಶೋಕ್ ಕುಮಾರ್ ರೈ ಹೇಳಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.