Delhi ; ವಿಮಾನದಲ್ಲಿ ಉಸಿರಾಡಲಾಗದೆ ಅಪಾಯಕ್ಕೆ ಸಿಲುಕಿದ್ದ ಮಗುವನ್ನು ರಕ್ಷಿಸಿದ ವೈದ್ಯರು
ಪ್ರಯಾಣದ ನಡುವೆಯೇ ಸಕಾಲಿಕ ಚಿಕಿತ್ಸೆ ನೀಡಿ ಪ್ರಾಣ ಉಳಿಸಿದರು..
Team Udayavani, Oct 1, 2023, 7:40 PM IST
ಹೊಸದಿಲ್ಲಿ: ಜನ್ಮಜಾತ ಹೃದ್ರೋಗದಿಂದ ಬಳಲುತ್ತಿದ್ದ ಮಗುವಿಗೆ ರಾಂಚಿ-ದೆಹಲಿ ವಿಮಾನ ಪ್ರಯಾಣದ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು,ಸಹ ಪ್ರಯಾಣಿಕರಾಗಿದ್ದ ಇಬ್ಬರೂ ವೈದ್ಯರು ಸಕಾಲಿಕ ಚಿಕಿತ್ಸೆ ನೀಡಿ ಮಗುವನ್ನು ರಕ್ಷಿಸಿದ್ದಾರೆ.
ಶನಿವಾರ ಇಂಡಿಗೋ ವಿಮಾನದಲ್ಲಿ ಇಪ್ಪತ್ತು ನಿಮಿಷಗಳ ನಂತರ, ವಿಮಾನ ಸಿಬಂದಿಗಳು ತೊಂದರೆಯಲ್ಲಿರುವ ಮಗುವಿಗೆ ವಿಮಾನದಲ್ಲಿ ಯಾವುದೇ ವೈದ್ಯರಿದ್ದರೆ ,ತುರ್ತು ವೈದ್ಯಕೀಯ ನೆರವು ಪಡೆಯಲು ಪ್ರಕಟಣೆಯನ್ನು ಮಾಡಿದರು. ಪ್ರಸ್ತುತ ಜಾರ್ಖಂಡ್ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಯಾಗಿರುವ ಐಎಎಸ್ ಅಧಿಕಾರಿ, ವೈದ್ಯರಾಗಿರುವ ಡಾ. ನಿತಿನ್ ಕುಲಕರ್ಣಿ ಮತ್ತು ರಾಂಚಿಯ ಸದರ್ ಆಸ್ಪತ್ರೆಯ ಡಾ ಮೊಝಮ್ಮಿಲ್ ಫೆರೋಜ್ ಮಗುವನ್ನು ರಕ್ಷಿಸಲು ಮುಂದೆ ಬಂದರು.
ಇಬ್ಬರು ವೈದ್ಯರು ತುರ್ತು ವೈದ್ಯಕೀಯ ಸಹಾಯವಾಗಿ ವಯಸ್ಕರಿಗೆ ಮೀಸಲಾಗಿಟ್ಟಿದ್ದ ಆಕ್ಸಿಜನ್ ಮಾಸ್ಕ್ ಮತ್ತು ಇತರ ಔಷಧಿಗಳನ್ನು ಬಳಸಿದರು.ಒಂದು ಗಂಟೆಯ ನಂತರ ವಿಮಾನ ಲ್ಯಾಂಡ್ ಆದ ನಂತರ, ವೈದ್ಯಕೀಯ ತಂಡವು ಮಗುವನ್ನು ತಮ್ಮ ಆರೈಕೆಯಲ್ಲಿ ತೆಗೆದುಕೊಂಡಿತು ಮತ್ತು ಆಮ್ಲಜನಕದ ಬೆಂಬಲವನ್ನು ನೀಡಿತು.
ಮಗುವಿನ ಹೃದಯ ಕಾಯಿಲೆಯ ಚಿಕಿತ್ಸೆಗಾಗಿ ಪೋಷಕರು ಮಗುವನ್ನು ದೆಹಲಿಯ ಏಮ್ಸ್ಗೆ ಕರೆದೊಯ್ಯುತ್ತಿದ್ದರು.
“ಮೊದಲ 15-20 ನಿಮಿಷಗಳು ಬಹಳ ನಿರ್ಣಾಯಕ ಮತ್ತು ಒತ್ತಡದಿಂದ ಕೂಡಿದ್ದವು, ಕಷ್ಟಕರ ಸಂದರ್ಭವಾಗಿತ್ತು. ಕೊನೆಗೆ ಮಗುವಿನ ಕಣ್ಣುಗಳು ಸಹಜವಾದವು. ಕ್ಯಾಬಿನ್ ಸಿಬಂದಿ ತುಂಬಾ ಸಹಾಯಕವಾಗಿದ್ದರು ಮತ್ತು ತ್ವರಿತ ಬೆಂಬಲವನ್ನು ನೀಡಿದರು. ಸಂಪೂರ್ಣ ವೈದ್ಯಕೀಯ ಬೆಂಬಲಕ್ಕಾಗಿ ನಾವು ವಿನಂತಿಸಿದ್ದೇವು” ಎಂದು ಕುಲಕರ್ಣಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.