Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

ಚಿಕ್ಕಿ ತಿನ್ನುವವರಿಲ್ಲ

Team Udayavani, Oct 2, 2023, 7:10 AM IST

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

ಉಡುಪಿ: ಶಾಲಾ ಮಕ್ಕಳಿಗೆ ಮೊಟ್ಟೆ ಅಥವಾ ಬಾಳೆಹಣ್ಣು ಅಥವಾ ಚಿಕ್ಕಿ ನೀಡುತ್ತಿದ್ದು, ಅನುದಾನದ ಕೊರತೆಯಿಂದಾಗಿ ಅದರ ಹೆಚ್ಚುವರಿ ಹೊರೆ ಹೆತ್ತವರ ಹೆಗಲಿಗೆ ಬೀಳುವ ಸಾಧ್ಯತೆಯಿದೆ.

ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಮಧ್ಯಾಹ್ನದ ಉಪಾಹಾರ ಯೋಜನೆಯ ದಾಸೋಹ ವಿಭಾಗದಿಂದ ಓರ್ವ ವಿದ್ಯಾರ್ಥಿಗೆ ಮೊಟ್ಟೆ ಅಥವಾ ಬಾಳೆಹಣ್ಣು ಯಾ ಚಿಕ್ಕಿ ಖರೀದಿಗೆ 6 ರೂ. ನೀಡಲಾಗುತ್ತದೆ. ವಿದ್ಯಾರ್ಥಿಗಳ ಆಯ್ಕೆಗೆ ಅನುಸಾರವಾಗಿ ಶಾಲಾ ಹಂತ ದಲ್ಲಿ ಖರೀದಿಸಿ ನೀಡಲಾಗುತ್ತಿದ್ದು, ಮೊಟ್ಟೆ ತಿನ್ನುವವರ ಸಂಖ್ಯೆಯೇ ಹೆಚ್ಚಿರು ವುದ ರಿಂದ ಶಾಲೆಗಳಿಗೆ ಹೆಚ್ಚುವರಿ ಹೊರೆ ಯಾಗುತ್ತಿದೆ. ಇದನ್ನು ಹೊಂದಿಸಲು ಶಿಕ್ಷಕರು ಬಹು ವಿಧದ ಕಸರತ್ತು ಮಾಡುತ್ತಿದ್ದಾರೆ.

ಮಾರುಕಟ್ಟೆಯಲ್ಲಿ ಮೊಟ್ಟೆಯ ದರ ಏರಿಳಿತವಾಗು ತ್ತಿರುತ್ತದೆ. ಏರಿಕೆಯಾದಾಗ ಅದಕ್ಕೆ ಸರಿ ಹೊಂದಿಸಲು ಹೆಚ್ಚು ವರಿ ಅನುದಾನವನ್ನು ಸರಕಾರ ನೀಡುವುದಿಲ್ಲ. ಬಾಳೆಹಣ್ಣು ಅಥವಾ ಚಿಕ್ಕಿಗೆ ನೀಡುವ ಹಣದಲ್ಲೇ ಸರಿ ಹೊಂದಿಸಿ ಕೊಳ್ಳುವಂತೆ ಸೂಚನೆ ನೀಡಲಾಗಿದೆ. ಬಾಳೆ ಹಣ್ಣು ದರ ಕೂಡ ಏರಿಳಿತವಾಗುತ್ತದೆ. ಸ್ಥಳೀಯ ಬಾಳೆಹಣ್ಣಿಗೆ 7 ರೂ. ವರೆಗೂ ದರವಿದೆ. ಚಿಕ್ಕಿ ಮಾತ್ರ 5 ಯಾ 6 ರೂ.ಗಳಿಗೆ ಸಿಗುತ್ತಿದೆ.

ಮಧ್ಯಾಹ್ನದ ಊಟದ ಜತೆಗೆ ಚಿಕ್ಕಿ ತಿನ್ನುವ ಮಕ್ಕಳ ಸಂಖ್ಯೆ ತೀರಾ ಕಡಿಮೆ. ಆದ್ದರಿಂದ ಮೊಟ್ಟೆಯ ಹೆಚ್ಚುವರಿ ಮೊತ್ತವನ್ನು ಶಾಲಾ ಮಕ್ಕಳ ಹೆತ್ತವರಿಂದಲೇ ಸಂಗ್ರಹಿಸಲು ಕೆಲವು ಶಾಲಾಡಳಿತ ಮಂಡಳಿಗಳು ಚಿಂತನೆ ನಡೆಸುತ್ತಿವೆ.

ವಿದ್ಯಾರ್ಥಿಗಳ ಮಾಹಿತಿ
ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ಮೊಟ್ಟೆ ಯಾ ಬಾಳೆಹಣ್ಣು ಯಾ ಚಿಕ್ಕಿಯನ್ನು ಕಳೆದ ಸಾಲಿನಿಂದಲೇ ವಿತರಿಸುತ್ತಿದೆ. ಪ್ರಸಕ್ತ ಸಾಲಿನಿಂದ ಪ್ರೌಢಶಾಲಾ ವಿದ್ಯಾರ್ಥಿ ಗಳಿಗೂ ವಿಸ್ತರಿಸಿದೆ. ಉಡುಪಿ ಜಿಲ್ಲೆಯಲ್ಲಿ 1ರಿಂದ 8ನೇ ತರಗತಿಯಲ್ಲಿ 61 ಸಾವಿರ ಹಾಗೂ 9ರಿಂದ 10ನೇ ತರಗತಿಯಲ್ಲಿ 17 ಸಾವಿರ ವಿದ್ಯಾರ್ಥಿಗಳ ಸಹಿತ ಸುಮಾರು 78 ಸಾವಿರ ವಿದ್ಯಾರ್ಥಿಗಳು ಸರಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದರಲ್ಲಿ ಸುಮಾರು 63 ಸಾವಿರ ವಿದ್ಯಾರ್ಥಿಗಳು ಊಟದ ಜತೆಗೆ ಮೊಟ್ಟೆ ಪಡೆಯುತ್ತಿದ್ದಾರೆ. ಸುಮಾರು 9 ಸಾವಿರ ವಿದ್ಯಾರ್ಥಿಗಳು ಬಾಳೆ ಹಣ್ಣು ಪಡೆಯುತ್ತಿದ್ದು, 4 ಸಾವಿರ ವಿದ್ಯಾರ್ಥಿಗಳು ಚಿಕ್ಕಿ ಪಡೆಯುತ್ತಿದ್ದಾರೆ. ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸುವ ದಿನ ಒಂದಿಷ್ಟು ವಿದ್ಯಾರ್ಥಿಗಳು ರಜೆ ಇರುತ್ತಾರೆ. ಹೀಗಾಗಿ ಶೇ. 99ರಷ್ಟು ಮಕ್ಕಳು ಸರಕಾರದ ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ.

ಇಲಾಖೆಗೆ ಮನವಿ
ಮೊಟ್ಟೆ ಯಾ ಬಾಳೆಹಣ್ಣು ಯಾ ಚಿಕ್ಕಿ ವಿತರಣೆಗೆ ನೀಡು ತ್ತಿರುವ ಘಟಕ ವೆಚ್ಚ ಸಾಕಾಗುತ್ತಿಲ್ಲ. ಮಾರು ಕಟ್ಟೆಯ ದರಕ್ಕೆ ಅನುಗುಣವಾಗಿ ಅನುದಾನ ಒದ ಗಿಸ ಬೇಕು. ಇಲ್ಲವಾದರೆ ವಿತರಣೆ ಕಷ್ಟವಾಗುತ್ತದೆ ಅಥವಾ ಹೆಚ್ಚುವರಿ ಹಣವನ್ನು ಮಕ್ಕಳ ಹೆತ್ತವರಿಂದ ಸಂಗ್ರಹಿಸ ಬೇಕಾಗುತ್ತದೆ. ಕೆಲವು ಎಸ್‌ಡಿಎಂಸಿಗಳು ಇದಕ್ಕೆ ಸಹಕಾರ ನೀಡಿದರೆ, ಕೆಲವರು ನೀಡುವು ದಿಲ್ಲ. ಮೊಟ್ಟೆ ಯಿಂದ ಹೆಚ್ಚುವರಿ ಕೆಲಸವೂ ಆಗುತ್ತಿದೆ. ಇದಕ್ಕೆಲ್ಲ ಇಲಾಖೆ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂಬ ದೂರನ್ನು ಕೆಲವು ಶಾಲಾಡಳಿತ ಮಂಡಳಿಯವರು ಇಲಾಖೆಯ ಉಪನಿರ್ದೇಶಕರಿಗೆ ತಲುಪಿಸಿದ್ದಾರೆ.

ಮೊಟ್ಟೆ ಅಥವಾ ಬಾಳೆಹಣ್ಣು ಅಥವಾ ಚಿಕ್ಕಿ ಒಂದಕ್ಕೆ 6 ರೂ. ನೀಡಲಾಗುತ್ತಿದೆ. ಅನು ದಾನದ ಕೊರತೆಯಾದಲ್ಲಿ ಶಾಲಾ ಹಂತದಲ್ಲೇ ಖರೀದಿಯ ಮೂಲಕ ಸರಿದೂಗಿಸಿಕೊಳ್ಳಲು ತಿಳಿಸಿದ್ದೇವೆ. ಕೆಲವು ಶಾಲೆಗಳಿಂದ ಮನವಿಯೂ ಬಂದಿದೆ. ಸರಕಾರದ ಗಮನಕ್ಕೆ ತಂದಿದ್ದೇವೆ.
– ಕೆ. ಗಣಪತಿ, ಡಿಡಿಪಿಐ, ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಉಡುಪಿ

ಟಾಪ್ ನ್ಯೂಸ್

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odish-Neji

Udupi: ಕರಾವಳಿಯ ನೇಜಿಗೆ ಒಡಿಶಾ ಕಾರ್ಮಿಕರ ಬಲ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.