UV Fusion: ಅತಿಯಾದ ಯಂತ್ರಗಳ ಬಳಕೆ ಸಲ್ಲದು


Team Udayavani, Oct 2, 2023, 11:17 AM IST

7-fusion-machine

ಈ ಜಗತ್ತು ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಅಮೂಲಾಗ್ರ ಬೆಳವಣಿಗೆಯನ್ನು ಕಂಡಿದೆ. ಇದು ಎಷ್ಟರ ಮಟ್ಟಿಗೆ ಎಂದರೆ ಇತ್ತೀಚಿನ ದಿನಗಳಲ್ಲಿ ಯಂತ್ರಗಳ ಬಳಕೆಯಿಲ್ಲದೆ ಬದುಕೇ ಅಸಾಧ್ಯ ಎನ್ನುವಂತಾಗಿದೆ. ಇಂದು ಜನ ಜೀವನ ಸಂಪೂರ್ಣವಾಗಿ ಯಂತ್ರಗಳನ್ನು ಅವಲಂಬಿತವಾಗಿದೆ. ದಿಲ್ಲಿಯಿಂದ ಹಿಡಿದು ಹಳ್ಳಿಯವರೆಗೂ, ಕೃಷಿಗೆ, ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಯಂತ್ರಗಳು ಲಗ್ಗೆಯಿಟ್ಟಿವೆ.

ಸಂಶೋಧನೆಯ ಫ‌ಲವಾಗಿ ಕಂಡುಕೊಂಡ ಯಂತ್ರಗಳು ಉಪಯುಕ್ತವಾದರೂ ಅವುಗಳ ಅತಿಯಾದ ಅವಲಂಬನೆಯಿಂದ ಅನೇಕ ದುಷ್ಪರಿಣಾಮಗಳಿವೆ. ಯಂತ್ರಗಳ ಬಳಕೆಯಿಂದ ಕೆಲಸಗಳು ಬೇಗ ಆಗಿ ಸಮಯ ಉಳಿಸಬಹುದು, ಆದರೆ ಇದರಿಂದ ಅನೇಕ ಜನರು ವಿಶೇಷವಾಗಿ ಕಾರ್ಮಿಕ ವರ್ಗದ ಜನರು ಕೆಲಸವಿಲ್ಲದೆ ನಿರುದ್ಯೋಗಿಗಳಾಗುತ್ತಿರುವುದು ಕಾಣಬಹುದು. ಅತಿಯಾದರೆ ಅಮೃತವೂ ವಿಷ ಎನ್ನುವಂತೆ ಅತಿ ಯಾವತ್ತೂ ಒಳ್ಳೆಯದನ್ನು ಮಾಡಲಾರದು. ಯಂತ್ರಗಳ ಅತಿಯಾದ ಬಳಕೆ ನಮ್ಮ ಆರೋಗ್ಯ, ಪರಿಸರದ ಮೇಲೆ ತೀವ್ರ ಪರಿಣಾಮವನ್ನುಂಟು ಮಾಡುವುದರಲ್ಲಿ ಸಂಶಯವಿಲ್ಲ.

ನೇಗಿಲ ಹಿಡಿದ ಹೊಳದೊಳು ಹಾಡುವ ಉಳುವ ಯೋಗಿಯ ನೋಡಲ್ಲಿ ಎಂಬುದು ಕುವೆಂಪು ಅವರ ಕಾಲಕ್ಕೆ ಮಾತ್ರ ಸೀಮಿತವಾಗಿತ್ತು ಎಂದರು ತಪ್ಪಾಗಲಾರದು. ಇಂದು ನೇಗಿಲು ಹಿಡಿದು ಉಳುಮೆ ಮಾಡುವ ರೈತರನ್ನು ಒಂದಿಷ್ಟು ಮಟ್ಟಿಗೆ ನಾವು ಕಾಣುತ್ತೇವೆ. ಹಾಗೆಯೇ ಎಲ್ಲ ನೆರೆ ಹೊರೆ ಹೆಂಗಸರು ಮತ್ತು ಗಂಡಸರು ಎಲ್ಲರೂ ಒಟ್ಟಿಗೆ ಸೇರಿ ಜನಪದ ಹಾಡುಗಳನ್ನು ಕಟ್ಟುತ್ತ ಒಗಟು ಬಿಡಿಸುತ್ತಾ ನಾಟಿ ಮಾಡುವುದು ಅಥವಾ ಗದ್ದೆ ಕೊಯ್ಲು ಮಾಡುವುದು ಕೂಡ ಅಪರೂಪವಾಗಿದೆ. ಇನ್ನೂ ಕೈಗಾರಿಕೆಗಳಲ್ಲಿ 10 ಜನ ಮಾಡುತ್ತಿದ್ದ ಕೆಲಸ ಇಂದು 1 ಯಂತ್ರ ಮಾಡುತ್ತಿದೆ. ಆದ್ದರಿಂದ ಅಲ್ಲಿ ದುಡಿಯುತ್ತಿದ್ದ ಕಾರ್ಮಿಕರಿಗೆ ಕೆಲಸವಿಲ್ಲದೆ ನಿರುದ್ಯೋಗಿಗಳಾಗಿ ಇನ್ನಿತರ ಕೆಟ್ಟ ಹವ್ಯಾಸಗಳನ್ನು ಬೆಳೆಸಿಕೊಳ್ಳುತ್ತಿದ್ದಾರೆ. ಯಾವುದೇ ವಸ್ತುವಿರಲಿ ಅದನ್ನು ಎಷ್ಟು ಬೇಕೋ ಅಷ್ಟು ಉಪಯೋಗಿಸುವುದು ಜಾಣತನ. ಇಲ್ಲದೇ ಹೋದಲ್ಲಿ ಮಾನವ ಯಂತ್ರ ತಂತ್ರಜ್ಞಾನಗಳ ಗುಲಾಮನಾಗಬೇಕಾದ ಪರಿಸ್ಥಿತಿ ಎದುರಾಗಬಹುದು. ಯಂತ್ರಗಳನ್ನು ಬಳಸೋಣ ಆದರೆ ಅತಿಯಾಗಿ ಬಳಸದಿರಲು ಎಚ್ಚರವಹಿಸೋಣ.

-ರಶ್ಮಿತಾ

ಎಂ.ಜಿ.ಎಂ. ಕಾಲೇಜು, ಉಡುಪಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.