![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 2, 2023, 1:06 PM IST
ಮುಂಬಯಿ: ಬಾಲಿವುಡ್ ನಲ್ಲಿ ʼಕಿಲಾಡಿʼ ಅಕ್ಷಯ್ ವರ್ಷಕ್ಕೆ ನಾಲ್ಕೈದು ಸಿನಿಮಾಗಳನ್ನು ಮಾಡುತ್ತಾರೆ. ಈ ವರ್ಷ ಅವರ ʼಓ ಮೈ ಗಾಡ್-2ʼ ಸಿನಿಮಾ ಹಿಟ್ ಆಗಿದೆ. ಅದರ ಬೆನ್ನಲ್ಲೇ ಅವರು ಸೋಮವಾರ (ಅ.2 ರಂದು) ಹೊಸ ಸಿನಿಮಾವೊಂದನ್ನು ಅಕ್ಷಯ್ ಕುಮಾರ್ ಘೋಷಿಸಿದ್ದಾರೆ.
ಅಕ್ಷಯ್ ಕುಮಾರ್ ಅವರ ʼ ಮಿಷನ್ ರಾಣಿಗಂಜ್: ದಿ ಗ್ರೇಟ್ ಭಾರತ್ ರೆಸಿಕ್ಯೂʼ ಸಿನಿಮಾದ ಟ್ರೇಲರ್ ಇತ್ತೀಚೆಗಷ್ಟೇ ರಿಲೀಸ್ ಆಗಿದೆ. ಈ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಈ ನಡುವೆ ಅಕ್ಕಿ ಮತ್ತೊಂದು ಸಿನಿಮಾವನ್ನುಅನೌನ್ಸ್ ಮಾಡಿದ್ದಾರೆ.
ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಗಾಂಧಿ ಜಯಂತಿಯ ದಿನ ಅಕ್ಷಯ್ ಭಾರತದ ಮೊದಲ ವೈಮಾನಿಕ ದಾಳಿಯ ಕಥೆಯನ್ನೊಳಗೊಂಡ ಸಿನಿಮಾವನ್ನು ಅನೌನ್ಸ್ ಮಾಡಿದ್ದಾರೆ. ಈ ಸಿನಿಮಾಕ್ಕೆ ʼಸ್ಕೈ ಫೋರ್ಸ್ʼ(Sky Force) ಎಂದು ಟೈಟಲ್ ಇಡಲಾಗಿದೆ.
ಈ ಸಿನಿಮಾ ಪಾಕಿಸ್ತಾನದ ವಿರುದ್ಧ ಭಾರತದ ಚೊಚ್ಚಲ ಮತ್ತು ಮಾರಣಾಂತಿಕ ವೈಮಾನಿಕ ದಾಳಿಯನ್ನು ಕಾರ್ಯಗತಗೊಳಿಸುವ ಹಿಂದಿನ ಕಥೆಯನ್ನು ಒಳಗೊಂಡಿದೆ. ಅಂದಿನ ಪಾಕ್ ಅಧ್ಯಕ್ಷ ಮಹಮದ್ ಆಯೂಬ್ ಖಾನ್ ಹಾಗೂ ಭಾರತದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಧ್ವನಿಯೊಂದಿಗೆ ಆರಂಭವಾಗುವ ಗ್ಲಿಂಪ್ಸ್ ನಲ್ಲಿ ಸಿನಿಮಾದ ರಿಲೀಸ್ ಡೇಟ್ ನ್ನು ಚಿತ್ರತಂಡ ರಿವೀಲ್ ಮಾಡಿದೆ.
ಇದನ್ನೂ ಓದಿ: Thalapathy 68: ದಳಪತಿ – ವೆಂಕಟ್ ಪ್ರಭು ಚಿತ್ರಕ್ಕೆ ಟಾಲಿವುಡ್ ಬೆಡಗಿ ನಾಯಕಿ?
“ಇಂದು ಗಾಂಧಿ-ಶಾಸ್ತ್ರಿ ಜಯಂತಿಯಂದು ಇಡೀ ದೇಶವೇ ಹೇಳುತ್ತಿದೆ – ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ, ಜೈ ಸಂಶೋಧನೆ” ಇದಕ್ಕಿಂತ ಒಳ್ಳೆಯ ದಿನ ʼಸ್ಕೈ ಫೋರ್ಸ್ʼ ಅನೌನ್ಸ್ ಮಾಡಲು ಬೇರೊಂದಿಲ್ಲ” ಎಂದು ಅಕ್ಷಯ್ ಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಸಂದೀಪ್ ಕೆಲ್ವಾನಿ ಮತ್ತು ಅಭಿಷೇಕ್ ಕಪೂರ್ ನಿರ್ದೇಶನ ಮಾಡಲಿದ್ದು,ದಿನೇಶ್ ವಿಜನ್ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಲಿದ್ದಾರೆ. ಅಕ್ಟೋಬರ್ 2, 2024 ರಂದು ಸಿನಿಮಾ ತೆರೆಗೆ ಬರಲಿದೆ.
ಈ ಸಿನಿಮಾದಲ್ಲಿ ನವನಟ ವೀರ್ ಪಹಾರಿಯಾ ಅವರು ಪ್ರಧಾನ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರೊಂದಿಗೆ ಸಾರಾ ಅಲಿ ಖಾನ್ ಮತ್ತು ನಿಮ್ರತ್ ಕೌರ್ ಅವರು ಕೂಡ ಪಾತ್ರವರ್ಗದಲ್ಲಿದ್ದಾರೆ.
View this post on Instagram
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.