Vijayapura; ಪ್ರತಿ ಚುನಾವಣೆಯಲ್ಲಿ ಬಿಜೆಪಿ ರಾಜಕೀಯ ಗಿಮಿಕ್: ಸಚಿವ ಸಂತೋಷ ಲಾಡ್


Team Udayavani, Oct 3, 2023, 5:18 PM IST

santhosh

ವಿಜಯಪುರ: ರೈತರ ಹೋರಾಟ ಪ್ರಕರಣ ಕೈಬಿಡುವಂತೆ ಪತ್ರ ಬರೆಯುವುದು ಸಾಮಾನ್ಯ. ಕಳೆದ ವರ್ಷ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣ ಆರೋಪಿಗಳ ಪ್ರಕರಣ ಕೈ ಬಿಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪೊಲೀಸ್ ಇಲಾಖೆಗೆ ಪತ್ರ ಬರೆದಿರುವ ವಿಷಯ ನನಗೆ ತಿಳಿದಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಯಾವ ಹಿನ್ನೆಲೆಯಲ್ಲಿ ಪತ್ರ ಬರೆದಿದ್ದಾರೋ ನನಗಂತೂ ಗೊತ್ತಿಲ್ಲ, ಈ ವಿಷಯವಾಗಿ ನೀವು ಅವರನ್ನೇ ಕೇಳುವುದು ಸೂಕ್ತ ಎಂದರು.

ರಾಜ್ಯದಲ್ಲಿ ಗಲಭೆಗಳಿಗೆ ಕಾಂಗ್ರೆಸ್ ಸರ್ಕಾರ ಕಾರಣವೆಂದು ವಿರೋಧ ಪಕ್ಷಗಳ ಆರೋಪ ಮಾಡುತ್ತಿರುವುದು ಆಧಾರ ರಹಿತ. ಕಳೇದ 10 ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ, ಮಣಿಪುರದಲ್ಲಿ ನಡೆದಿರುವ ಅಮಾನೀಯ ಘಟನೆ ಬಗ್ಗೆ ಮೌನವಾಗಿರುವುದೇಕೆ ಎಂದು ತಿರುಗೇಟು ನೀಡಿದರು.

ಕೇಂದ್ರ ಸರ್ಕಾರದ ರೈತ ವಿರೋಧಿಯಾಗಿದ್ದ ಕೃಷಿ ಕಾಯ್ದೆಗಳನ್ನು ವಿರೋಧಿಸಿದ ಹೋರಾಟದಲ್ಲಿ ರೈತರು ಸಾವನ್ನಪ್ಪಿದ್ದರು. ಹೋರಾಟಗಾರರ ಜನರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್ ಸೇರಿಧಂತೆ ಹಲವು ರೀತಿಯಲ್ಲಿ ದೌರ್ಜನ್ಯ ನಡೆಸಲಾಗಿದೆ. ಆಗ ಕೋಮು ಸೌಹಾರ್ದತೆಗೆ ಧಕ್ಕೆ ಬರುವುದಿಲ್ಲವೇ ಎಂದು ಪ್ರಶ್ನಿಸಿದರು.

ಹಿಂದೂ, ಮುಸ್ಲಿಂ ಸೇರಿದಂತೆ ಯಾರೇ ದುಷ್ಕೃತ್ಯ ಎಸಗಿದರೂ ಎಲ್ಲರಿಗೂ ಈ ದೇಶದಲ್ಲಿ ಒಂದೇ ಕಾನೂನು. ಗಲಭೆಗಳಾದ ಸಂದರ್ಭದಲ್ಲಿ ಸರ್ಕಾರ ಹಾಗೂ ಸಂಬಂಧಿಸಿದ ಇಲಾಖೆ, ಅಧಿಕಾರಿಗಳು ಈ ವಿಷಯದಲ್ಲಿ ನೋಡಿಕೊಳ್ಳುವ ಕೆಲಸ ಮಾಡುತ್ತಾರೆ ಎಂದರು.

ಇಂಥ ಯಾವ ಘಟನೆಗಳು, ಪ್ರಕರಣಗಳ ಕುರಿತೂ, ಕೇಂದ್ರ ಸರ್ಕಾರ ನಡೆಸುವವರು, ಬಿಜೆಪಿ ನಾಯಕರು ಮಾತನಾಡುವುದಿಲ್ಲ. ಆದರತೆ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಾಗ ಸಲ್ಲದ ಆರೋಪ ಮಾಡಿ, ಕೋಮು ಗಲಭೆಗಳ ಗೂಬೆ ಕೂಡಿಸುವ ಕೆಲಸ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ನಾಯಕರು ರಾಜಕೀಯವಾಗಿ ಇಂಥ ಆರೋಪಗಳನ್ನು ಮಾಡುತ್ತ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ 6 ತಿಂಗಳಲ್ಲಿ ಪತನವಾಗಲಿದೆ ಎಂದು ಗಿಮಿಕ್ ಮಾಡುತ್ತಿದ್ದಾರೆ. ಗಲಭೆಗಳಾಗುತ್ತಲೇ 24 ಗಂಟೆಗಳಲ್ಲೇ ಇವರು ಟೀಕೆ ಆರಂಭಿಸುತ್ತಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ಕೇಂದ್ರದಲ್ಲಿ 10 ವರ್ಷಗಳಿಂದ ಅಧಿಕಾರದಲ್ಲಿರವ ಬಿಜೆಪಿ, ಹಿಂದೂ-ಮುಸ್ಲಿಂ ಎನ್ನುತ್ತಲೇ ಬಂದಿದೆ. ಇಷ್ಟಕ್ಕೂ ಇವರು ಯಾವ ಹಿಂದೂ, ಯಾವ ಮುಸ್ಲಿಮರನ್ನು ಬಡ ರೇಖೆಯಿಂದ ಮೇಲೆ ಎತ್ತುವ ಕೆಲಸ ಮಾಡಿದ್ದಾರೆ. ಜನ ಕಲ್ಯಾಣಕ್ಕೆ ಮಾಡಿರುವ ಇವರ ಕೆಸಲಗಳನ್ನು ತೋರಿಸಿ ಎಂದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಸಚಿವ ಸಂತೋಷ ಲಾಡ್, ಹಿಂದಿನ ಸರ್ಕಾರಗಳಲ್ಲೂ ಜಿಡಿಪಿ ಚನ್ನಾಗಿಯೇ ಇತ್ತು. ಭಾರತ ಐದನೇ ಸ್ಥಾನದಲ್ಲಿತ್ತು. ಈಗ ಮೂರನೇ ಸ್ಥಾನಕ್ಕೆ ಹೋಗಿದೆ ಎಂದರು.

ಇದನ್ನೂ ಓದಿ:Beauty Tips: ತ್ವಚೆಯ ಸೌಂದರ್ಯ ಹಾಗೂ ಆರೋಗ್ಯ ಕಾಪಾಡಲು ಕಾಫಿಪುಡಿ ಬಳಸಿ…

ಹಿಂದಿನವರು ಉತ್ತಮ ಆಡಳಿತ ನೀಡಿ ಐದನೇ ಸ್ಥಾನಕ್ಕೆ ತಂದಿದ್ದರಿಂದಲೇ ಮೂರನೇ ಸ್ಥಾನಕ್ಕೆ ಹೋಗಲು ಕಾರಣವಾಗಿದೆ. ಆದರೆ ಇವರ ಕಾಲದಲ್ಲಿ ಮಾತ್ರ ಜಿಡಿಪಿ ದರ ಎಲ್ಲಾ ಪ್ರಚಾರ ಮಾಡುತ್ತಿದ್ದಾರೆ. ಇಷ್ಟಕ್ಕೂ ಅಮೇರಿಕಾ, ಚೀನಾ ದೇಶಗಳ ಜಿಡಿಪಿ ದರ ಎಷ್ಟಿದೆ, ಚೀನಾ ವಿಶ್ವದಲ್ಲೇ ಅಧಿಕ ಜನಸಂಖ್ಯೆ ಹೊಂದಿದ್ದು, ನಾವು ಅವರಿಗಿಂತ ಕೆಳಗಿದ್ದೇವೆ ಎಂಬುದನ್ನು ಜನರ ಮುಂದಿಡಲಿ ಎಂದು ಆಗ್ರಹಿಸಿದರು.

ಲೋಸಕಸಭಾ ಚುನಾವಣೆ ಹತ್ತಿರ ಬರುತಿರುವ ಕಾರಣ ಬಿಜೆಪಿ ರಾಜಕೀಯ ಗಿಮಿಕ್ ಮಾಡುತ್ತಾರೆ, ಕಳೆದ ಚುನಾವಣೆ ಪೂರ್ವದಲ್ಲಿ ಪುಲ್ವಾಮಾ ಸೈನಿಕರ ಮೇಲಿನ ದಾಳಿ ಪ್ರಕರಣವನ್ನು ದಾಳವಾಗಿ ಮಾಡಿಕೊಂಡರು. 350 ಕೆ.ಜಿ.ಗೂ ಹೆಚ್ಚು ಆರ್.ಡಿ.ಎಕ್ಸ್. ಎಲ್ಲಿಂತ ಬಂತು, ಭಯೋತ್ಪಾದಕರು ಎಲ್ಲಿಂದ ಬರುತ್ತಾರೆ ಎಂದು ಪತ್ತೆ ಮಾಡುವಲ್ಲಿ ಕೇಂದ್ರ ಸರ್ಕಾರ ಮುಂದಾಗಲಿಲ್ಲ, ಈ ಬಗ್ಗೆ ಜನರಿಗೆ ಸತ್ಯವನ್ನೇ ಹೇಳಲಿಲ್ಲ ಎಂದು ಟೀಕಿಸಿದರು.

ಪುಲ್ವಾಮಾ ದಾಳಿಯ ವಿಷಯದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವೈಫಲ್ಯ ಎದ್ದು ಕಾಣುತ್ತಿದೆ. ದೇಶದೊಳಗೆ ಭಯೋತ್ಪಾದಕರು ನುಗ್ಗುತ್ತಾರೆ ಎಂದರೆ ಕೇಂದ್ರ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ ಅವರು, ಮಾಧ್ಯಮಗಳಂತೂ ಪ್ರಧಾನಿ ಮೋದಿ ಹೊರತಾಗಿ ರಾಷ್ಟ್ರಪತಿಯೂ ಸೇರಿದಂತೆ ಯಾರೆಂದರೆ ಯಾರೂ ಕಾಣುವುದಿಲ್ಲ ಎಂದು ಕುಟುಕಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.