Karwar: ಕೊನೆಗೂ ಸುರಂಗ ಮಾರ್ಗ ಸಂಚಾರಕ್ಕೆ ಮುಕ್ತ


Team Udayavani, Oct 3, 2023, 6:41 PM IST

Karwar: ಕೊನೆಗೂ ಸುರಂಗ ಮಾರ್ಗ ಸಂಚಾರಕ್ಕೆ ಮುಕ್ತ

ಕಾರವಾರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರವಾರ ನಗರಕ್ಕೆ ಹೊಂದಿಕೊಂಡಿರುವ ಪೈÉಓವರ್‌ ಸನಿಹದ ಟನಲ್‌ ಗಳನ್ನು ವಾಹನ ಸಂಚಾರಕ್ಕೆ ಸೋಮವಾರ ಸಂಜೆ ಮುಕ್ತಗೊಳಿಸಲಾಗಿದೆ.

ಸೋಮವಾರ ಮಧ್ಯಾಹ್ನದಿಂದ ಶಾಸಕ ಸತೀಶ್‌ ಸೈಲ್‌, ಎಂಎಲ್‌ ಸಿ ಗಣಪತಿ ಉಳ್ವೆಕರ್‌, ನಗರಸಭೆಯ ಮಾಜಿ ಅಧ್ಯಕ್ಷ ನಿತಿನ್‌ ಪಿಕಳೆ, ಮಾಜಿ ಉಪಾಧ್ಯಕ್ಷ ಪಿ.ಪಿ.ನಾಯ್ಕ ಸತತ ಮೂರು ಗಂಟೆಗಳ ಕಾಲ ಈ ಬಗ್ಗೆ ಮಾತುಕತೆ ನಡೆಸಿದರು.

ಮಾತುಕತೆ ಫಲಪ್ರದವಾದ ಕಾರಣ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಶಾಸಕರು, ಸಾರ್ವಜನಿಕರಿಗೆ
ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸುರಂಗಮಾರ್ಗ ಸಂಚಾರ ಮುಕ್ತಗೊಳಿಸುವಂತೆ ಸೂಚಿಸಿದರು. ಬಳಿಕ ಜಿಲ್ಲಾಧಿಕಾರಿಗಳು ಈ ಬಗ್ಗೆ ಆದೇಶ ಹೊರಡಿಸಿದರು.

ಸಂಸದರ ಓಡಾಟಕ್ಕೆ ಮುಕ್ತವಾಗಿದ್ದ ಸುರಂಗ: ಕೇಂದ್ರ ಸಂಸದೀಯ ಸಮಿತಿ ನೌಕಾನೆಲೆಗೆ ಬಂದ ಕಾರಣ ಐಆರ್‌ಬಿ ಅಧಿಕಾರಿಗಳು ಟನಲ್‌ ನ್ನು ಓಪನ್‌ ಮಾಡಿಕೊಟ್ಟಿದ್ದರು. ಇದು ಮಾಧ್ಯಮದವರ ಗಮನಕ್ಕೆ ಬಂದಿತ್ತು. ಬಳಿಕ ಜಿಲ್ಲಾಧಿಕಾರಿ, ಶಾಸಕರು, ವಿಧಾನಪರಿಷತ್‌ ಸದಸ್ಯ ಉಳ್ವೆಕರ್‌ ಅವರಿಗೂ ಈ ಮಾಹಿತಿ ತಲುಪಿತು. ಆಗ ಜನಪ್ರತಿನಿಧಿಗಳಿಗೆ ಒಂದು ನೀತಿ, ಸಾರ್ವಜನಿಕರಿಗೆ ಒಂದು ನೀತಿಯೇ ಎಂಬ ಪ್ರಶ್ನೆ ಉದ್ಭವಿಸಿತು . ತಕ್ಷಣ ಶಾಸಕರು ಜಿಲ್ಲಾಧಿಕಾರಿ, ಮಾಧ್ಯಮಗಳ ಜೊತೆ ಮಾತನಾಡಿ, ವಿಧಾನ ಪರಿಷತ್‌ ಸದಸ್ಯ ಗಣಪತಿ ಉಳ್ವೆಕರ್‌ ಜೊತೆ ಮಾತುಕತೆ ನಡೆಸಿದರು. ಬಳಿಕ ಸುಂರಂಗದಲ್ಲಿ ಏನಾದರೂ
ಅನಾಹುತವಾದಲ್ಲಿ ಅದರ ಹೊಣೆಯನ್ನು ಎನ್‌ಎಚ್‌ ಎಐ ಮತ್ತು ಐಆರ್‌ಬಿ ವಹಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಂದ ಪತ್ರ ಬರೆಯಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ನಿರ್ಧಾರಕ್ಕೆ ಬರಲಾಯಿತು.

ಜಿಲ್ಲಾಧಿಕಾರಿಗೆ ಬಂದ ಮೇಲ್‌: ಈ ವಿಷಯವಾಗಿ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಅ.2 ರೊಳಗೆ ಟನಲ್‌ ಸುರಕ್ಷತೆ ಬಗ್ಗೆ ಖಾತ್ರಿ ಪಡಿಸಲು ಐಆರ್‌ಬಿ ಮತ್ತು ಎನ್‌ಎಚ್‌ಎಐಗೆ ಗಡುವು ನೀಡಿದ್ದರು. ಆದರೆ ಟನಲ್‌ ಪರಿಶೀಲನೆಗೆ ಎನ್‌ಎಚ್‌ಎಐ ಹಿರಿಯ ಅಧಿಕಾರಿ ಅ. 8 ರಂದು ಬರಲಿದ್ದಾರೆ. ಜೆ.ಪಿ.ನಡ್ಡಾ ಪುಣೆಗೆ ಬರುವ ಕಾರಣ ಟೆಕ್ನಾಲಜಿಕಲ್‌ ಯುನಿವರ್ಸಿಟಿ ವಿಜ್ಞಾನಿಗಳು ಕಾರವಾರಕ್ಕೆ ತಕ್ಷಣ ಬರಲಾಗುತ್ತಿಲ್ಲ. ಅವರು ಅ. 8 ರಂದು ಬರಲಿದ್ದಾರೆಂದು ಜಿಲ್ಲಾಧಿಕಾರಿಗಳಿಗೆ ಇ-ಮೇಲ್‌ ಬಂದಿತ್ತು. ಇದನ್ನು ಗಮನಿಸಿ, ಸಾರ್ವಜನಿಕರಿಗೆ , ವಾಹನ ಸವಾರರಿಗೆ ತೊಂದರೆ ಆಗುವುದನ್ನು ತಪ್ಪಿಸಲು, ಸುರಂಗವನ್ನು ಸಂಚಾರಮುಕ್ತಗೊಳಿಸಿ ಜಿಲ್ಲಾಧಿಕಾರಿಗಳು ಸೋಮವಾರ ಸಂಜೆ ಆದೇಶ ಹೊರಡಿಸಿದರು. ಸುಂರಗ ಮಾರ್ಗ ಓಪನ್‌ ಆಗಿದ್ದಕ್ಕೆ ಸಾರ್ವಜನಿಕರು ಹಾಗೂ ವಾಹನ ಸಾವರರು ಸಂತಸ ವ್ಯಕ್ತಪಡಿಸಿದ್ದಾರೆ

ಅನಾಹುತದ ಹೊಣೆ ಹೊರಲು ಸೂಚನೆ
ಅ.8 ರೊಳಗೆ ಟನಲ್‌ ಸುರಕ್ಷತೆ ಮತ್ತೂಮ್ಮೆ ಪರೀಕ್ಷಿಸಬೇಕು. ಏನಾದರೂ ಅನಾಹುತವಾದರೆ ಎನ್‌ಎಚ್‌ ಎಐ ಹೊನ್ನಾವರದಲ್ಲಿನ ಕಚೇರಿಯ ಪ್ರೊಜೆಕ್ಟ್ ಡೈರೆಕ್ಟರ್‌ ಅದರ ಹೊಣೆ ಹೊರಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ. ಈ ಆದೇಶವನ್ನು ಸಂಬಂಧಿಸಿದ ಗುತ್ತಿಗೆ ಕಂಪನಿ ಹಾಗೂ ಎನ್‌ಎಚ್‌ಎಐ ಹೊನ್ನಾವರ ಕಚೇರಿಗೆ ಕಳುಹಿಸಲಾಗಿದೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಪೊಲೀಸ್‌ ಅಧೀಕ್ಷಕರು, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ನಿರ್ದೇಶಕರಿಗೆ, ಜಿಲ್ಲೆಯ ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ತಹಶೀಲ್ದಾರರು, ಸಹಾಯಕ ಕಮಿಷನರ್‌ಗಳಿಗೆ ಕಳುಹಿಸಲಾಗಿದೆ.

ಟಾಪ್ ನ್ಯೂಸ್

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನKumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.