ಮೋದಿ ಪ್ರತ್ಯಸ್ತ್ರ- ಅಲ್ಪಸಂಖ್ಯಾಕರ ಹಕ್ಕು ಕಸಿಯುತ್ತೀರಾ:ಕಾಂಗ್ರೆಸ್‌ಗೆ ಮೋದಿ ಪ್ರಶ್ನೆ


Team Udayavani, Oct 4, 2023, 12:32 AM IST

MODI IMP

ರಾಯ್‌ಪುರ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ “ಜಾತಿಗಣತಿ’ ಅಸ್ತ್ರವನ್ನು ಝಳಪಿಸಲು ಮುಂದಾಗಿರುವ ವಿಪಕ್ಷಗಳ ಒಕ್ಕೂಟಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಅದೇ “ಅಸ್ತ್ರ’ವನ್ನು ತಿರುಗುಬಾಣವಾಗಿ ಪ್ರಯೋಗಿಸಿದ್ದಾರೆ.

“ಜನಸಂಖ್ಯೆಗೆ ಅನುಗುಣವಾಗಿಯೇ ಹಕ್ಕುಗಳು ಸಲ್ಲಬೇಕು ಎಂದು ಹೇಳುವ ಮೂಲಕ ಕಾಂಗ್ರೆಸ್‌ ಪಕ್ಷವು ದೇಶದ ಅಲ್ಪಸಂಖ್ಯಾಕರ ಹಕ್ಕುಗಳನ್ನು ಕಸಿದುಕೊಳ್ಳಲು ಮುಂದಾಗಿದೆಯೇ?’ ಎಂದು ಮೋದಿಯವರು ಪ್ರಶ್ನಿಸಿದ್ದಾರೆ.

ಬಿಹಾರದ ಜಾತಿಗಣತಿ ವರದಿ ಬಹಿರಂಗವಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಜಾತಿಗಣತಿ ನಡೆಸುವುದಾಗಿ ಈಗಾಗಲೇ ವಿಪಕ್ಷಗಳ ಮೈತ್ರಿಕೂಟವು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮೋದಿಯವರು ವಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿರುವ ಛತ್ತೀಸ್‌ಗಢದಲ್ಲಿ ಮಂಗಳವಾರ ಸಾರ್ವಜನಿಕ ರ್ಯಾಲಿ ನಡೆಸಿ ಮಾತನಾಡಿದ ಪ್ರಧಾನಿ, “ಕಾಂಗ್ರೆಸ್‌ ಈಗ ಹೊಸ ಜಪ ಆರಂಭಿಸಿದೆ. ಜನಸಂಖ್ಯೆಗೆ ಅನುಗುಣವಾಗಿಯೇ ಹಕ್ಕುಗಳನ್ನು ನೀಡಬೇಕು ಎಂದು ಆ ಪಕ್ಷದ ನಾಯಕರು ಹೇಳುತ್ತಿದ್ದಾರೆ. ಆದರೆ ನನ್ನ ಪ್ರಕಾರ ದೇಶದಲ್ಲಿ ಇರುವ ಅತಿದೊಡ್ಡ ಸಂಖ್ಯೆ ಬಡವರದ್ದು. ಹಾಗಾಗಿ ಅವರ ಕಲ್ಯಾಣವೇ ನನ್ನ ಗುರಿ. ಭಾರತದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಇರುವುದು ಅಲ್ಪಸಂಖ್ಯಾಕರಿಗೆ, ಅದರಲ್ಲೂ ವಿಶೇಷವಾಗಿ ಮುಸ್ಲಿಮರಿಗೆ ಎಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಹೇಳುತ್ತಿದ್ದರು. ಆದರೆ ಈಗ ಕಾಂಗ್ರೆಸ್‌ ಸಂಪನ್ಮೂಲಗಳ ಮೇಲೆ ಯಾರಿಗೆ ಎಷ್ಟು ಹಕ್ಕಿದೆ ಎನ್ನುವುದು ಜನಸಂಖ್ಯೆ ಯನ್ನು ಆಧರಿಸಿರುತ್ತದೆ ಎನ್ನುತ್ತಿದೆ. ಅಂದರೆ ಕಾಂಗ್ರೆಸ್‌ನವರು ಅಲ್ಪಸಂಖ್ಯಾಕರ ಹಕ್ಕುಗಳನ್ನು ಕಿತ್ತುಕೊಳ್ಳಲು ಬಯಸುತ್ತಿದ್ದಾರೆಯೇ? ಕಾಂಗ್ರೆಸ್‌ ಈ ಬಗ್ಗೆ ಸ್ಪಷ್ಟಪಡಿಸಬೇಕು. ಅವರ ಪ್ರಕಾರ ಎಲ್ಲ ಹಕ್ಕುಗಳನ್ನು ಹಿಂದೂಗಳೇ ಪಡೆಯಬೇಕೇ? ಒಟ್ಟಿನಲ್ಲಿ ಕಾಂಗ್ರೆಸ್‌ ಪಕ್ಷವು ಹಿಂದೂಗಳನ್ನು ವಿಭಜಿಸಿ, ಬಡವರ ಮಧ್ಯೆ ಒಡಕು ಮೂಡಿಸಿ, ದೇಶವನ್ನು ನಿರ್ಮೂಲನೆ ಮಾಡಲು ಹೊರಟಿದೆ’ ಎಂದು ವಾಗ್ಧಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ನೊಳಗೇ ಭಿನ್ನಮತ
ಇನ್ನೊಂದೆಡೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ದೇಶಾದ್ಯಂತ ಜಾತಿಗಣತಿ ನಡೆಯಬೇಕು ಎಂದು ಆಗ್ರಹಿಸುವುದರ ಜತೆಗೆ, “ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ’ (ಜಿತ್ನಾ ಆಬಾದಿ, ಉತ್ನಾ ಹಕ್‌) ಎಂಬ ಹೊಸ ಉದ್ಘೋಷದ ಮೂಲಕ ಚರ್ಚೆಗೆ ನಾಂದಿ ಹಾಡಿದ್ದಾರೆ. ಆದರೆ ಈ ಕುರಿತು ಪಕ್ಷದೊಳಗೆ ಕೆಲವರಿಂದ ಭಿನ್ನ ರಾಗ ಕೇಳಿಬಂದಿದೆ. ಮಂಗಳವಾರ ಟ್ವೀಟ್‌ ಮಾಡಿದ ಕಾಂಗ್ರೆಸ್‌ನ ಹಿರಿಯ ನಾಯಕ ಅಭಿಷೇಕ್‌ ಮನು ಸಿಂಘ್ವಿ, “ಅವಕಾಶಗಳಲ್ಲಿ ಸಮಾನತೆಯು ಎಂದಿಗೂ ಫ‌ಲಿತಾಂಶದ ಸಮಾನತೆಗೆ ಸಮಾನವಾಗಿರುವುದಿಲ್ಲ. ಜನಸಂಖ್ಯೆ ಆಧರಿತ ಪ್ರಾತಿನಿಧ್ಯ ಎನ್ನುವವರು ಮೊದಲು ಅದರಿಂದಾಗುವ ಪರಿಣಾಮಗಳನ್ನು ಅರ್ಥ ಮಾಡಿಕೊಳ್ಳಬೇಕು. ಇದು ಅಂತಿಮವಾಗಿ ಬಹುಸಂಖ್ಯಾಕವಾದದೊಂದಿಗೆ ಕೊನೆಗೊಳ್ಳುತ್ತದೆ’ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಸಂಸದ ಜೈರಾಂ ರಮೇಶ್‌, “ಸಿಂಘ್ವಿ ಅವರ ಹೇಳಿಕೆಯು ಅವರ ವೈಯಕ್ತಿಕ ಅಭಿಪ್ರಾಯ ವಾಗಿದೆ. ಅದು ಕಾಂಗ್ರೆಸ್‌ ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ’ ಎಂದಿದ್ದಾರೆ. ಇದರ ಬೆನ್ನಲ್ಲೇ ಸಿಂಘ್ವಿ ಅವರು ತಮ್ಮ ಪೋಸ್ಟ್‌ ಅಳಿಸಿದ್ದಾರೆ.

ಈ ನಡುವೆ ಬಿಹಾರದ ಜಾತಿಗಣತಿ ವರದಿ ಸುಪ್ರೀಂ ಕೋರ್ಟ್‌ ಅಂಗಳ ತಲುಪಿದೆ. ಸಿಎಂ ನಿತೀಶ್‌ ನಡೆಯನ್ನು ಪ್ರಶ್ನಿಸಿ ಸಲ್ಲಿಕೆ ಯಾಗಿ ರುವ ಅರ್ಜಿ ಯನ್ನು ಅ. 6ರಂದು ವಿಚಾರಣೆಗೆ ಕೈಗೆತ್ತಿ ಕೊಳ್ಳುವು ದಾಗಿ ನ್ಯಾಯಪೀಠ ಮಂಗಳವಾರ ಹೇಳಿದೆ.

ವರದಿ ಬಿಡುಗಡೆಯ ಧೈರ್ಯ ಮಾಡಿ: ರಾಜ್ಯದಲ್ಲೂ ಮುಂದುವರಿದ ಆಗ್ರಹ
ಬಿಹಾರದಲ್ಲಿ ಸಿಎಂ ನಿತೀಶ್‌ ಕುಮಾರ್‌ ಅವರು ಜಾತಿಗಣತಿ ವರದಿ ಬಹಿರಂಗಪಡಿಸಿದಂತೆ ಕರ್ನಾಟಕ ಸರಕಾರವೂ ಈಗಾಗಲೇ ಸಿದ್ಧವಾಗಿರುವ ವರದಿಯನ್ನು ಬಹಿರಂಗಪಡಿಸುವ ಧೈರ್ಯ ಮಾಡಬೇಕು ಎಂದು ಎಲ್ಲ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಆಗ್ರಹಿಸತೊಡಗಿದ್ದಾರೆ.

ವರದಿ ಬಿಡುಗಡೆಯಾದರೆ ಯಾವ ಸಮುದಾಯಕ್ಕೆ ಯಾವ ರೀತಿಯ ಕಾರ್ಯಕ್ರಮ ರೂಪಿಸಬೇಕು, ಯಾರಿಗೆ ಹೆಚ್ಚಿನ ಅನುದಾನ ಕೊಡಬೇಕು ಎನ್ನುವುದು ಗೊತ್ತಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ವರದಿಯನ್ನು ಸರಕಾರ ತತ್‌ಕ್ಷಣವೇ ಸ್ವೀಕರಿಸದಿದ್ದರೆ ದೊಡ್ಡ ಮಟ್ಟದಲ್ಲಿ ಜನಾಂದೋಲನ ನಡೆಸಲಾಗುವುದು ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ. ಎಲ್ಲರಿಗೂ ಸಮಾನ ಸೌಲಭ್ಯ ದೊರಕಲು ಕೇಂದ್ರ ಸರಕಾರವೂ ಜಾತಿಗಣತಿ ನಡೆಸಬೇಕು ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.