Mangaluru ಕಾನೂನು ಕೈಗೆತ್ತಿಕೊಂಡರೆ ಮುಲಾಜಿಲ್ಲದೆ ಗಡೀಪಾರು:ದ.ಕ.ಎಸ್‌ಪಿ ಸಿ.ಬಿ.ರಿಷ್ಯಂತ್‌

ಕೋಮುವಿಚಾರ, ಡ್ರಗ್ಸ್‌ನಿಂದ ಯುವಜನತೆ ದೂರವಿರಿ

Team Udayavani, Oct 4, 2023, 7:20 AM IST

Mangalurಕಾನೂನು ಕೈಗೆತ್ತಿಕೊಂಡರೆ ಮುಲಾಜಿಲ್ಲದೆ ಗಡೀಪಾರು:ದ.ಕ.ಎಸ್‌ಪಿ ಸಿ. ಬಿ. ರಿಷ್ಯಂತ್‌

“ನೈತಿಕ ಪೊಲೀಸ್‌ಗಿರಿ’ ಮತ್ತು ಡ್ರಗ್ಸ್‌ ದಕ್ಷಿಣ ಕನ್ನಡ ಜಿಲ್ಲೆಗೆ ಮಾರಕ. ಇವೆರಡೂ ವಿಚಾರಗಳ ಬಗ್ಗೆ ವಿಶೇಷ ನಿಗಾ ಇಡಲಾಗಿದೆ. ಸಂಘಟನೆ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ. ಡ್ರಗ್ಸ್‌ ಮಟ್ಟ ಹಾಕಲು ಕಾರ್ಯಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸ ಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠ 2013ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿ ಸಿ.ಬಿ. ರಿಷ್ಯಂತ್‌ “ಉದಯವಾಣಿ’ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಪೊಲೀಸರ ಮುಂದಿರುವ ಸವಾಲುಗಳು?
ಅನ್ಯಕೋಮಿನ ಯುವಕ-ಯುವತಿಯರಿಗೆ ಸಂಬಂಧಿಸಿದ ವಿಷಯಗಳಲ್ಲಿ ಕಾನೂನು ಕೈಗೆತ್ತಿಕೊಳ್ಳುವ, ನೈತಿಕ ಪೊಲೀಸ್‌ಗಿರಿ ಎಂದು ಕರೆಯಲ್ಪಡುವ ಘಟನೆಗಳು ಮತ್ತು ಡ್ರಗ್ಸ್‌ – ಇವೆರಡು ದ.ಕ. ಜಿಲ್ಲೆಯಲ್ಲಿ ಸದ್ಯಕ್ಕಿರುವ ಪ್ರಮುಖ ಸವಾಲುಗಳು.

ಕಾನೂನು ಸುವ್ಯವಸ್ಥೆ ಕಾಪಾಡಲು ನಿಮ್ಮ ಕ್ರಮ?
ನೈತಿಕ ಪೊಲೀಸ್‌ಗಿರಿ, ಮತೀಯ ಗಲಭೆಗೆ ಕಾರಣರಾಗುವವರ ವಿರುದ್ಧ ಕಠಿನ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿ ಜೈಲಿಗಟ್ಟುವುದು ಮಾತ್ರವಲ್ಲದೆ ಜಾಮೀನಿನಲ್ಲಿ ಬಿಡುಗಡೆಯಾದರೂ ಅವರ ಮೇಲೆ ನಿಗಾ ಇಡಲಾಗುತ್ತದೆ. ಜಾಮೀನು ಷರತ್ತು ಉಲ್ಲಂಘನೆ, ಕೃತ್ಯ ಪುನರಾವರ್ತನೆ ಮೊದಲಾದ ಸಂದರ್ಭಗಳಲ್ಲಿ ಗೂಂಡಾ ಕಾಯ್ದೆ ಹಾಕಿ ಗಡೀಪಾರು ಮಾಡುವುದು, ಬಾಂಡ್‌ ಪಡೆಯುವುದು, ರೌಡಿಶೀಟ್‌ ತೆರೆಯುವುದು ಇತ್ಯಾದಿ ಮಾಡುತ್ತೇವೆ.

ಗ್ರಾಮೀಣ ಭಾಗಕ್ಕೂ ಡ್ರಗ್ಸ್‌ ವ್ಯಾಪಿಸುತ್ತಿದೆಯೇ ?
ನಗರಕ್ಕೆ ಹೋಲಿಸಿದರೆ ಕಡಿಮೆ. ಡ್ರಗ್ಸ್‌ನಿಂದ ಮುಂದಿನ ಪೀಳಿಗೆಯನ್ನು ರಕ್ಷಿಸುವುದಕ್ಕಾಗಿ ಜಾಗೃತಿ ಮೂಡಿಸುವುದು, ಪೂರೈಕೆ ಪತ್ತೆ, ಸೇವನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವುದು ಮಾತ್ರವಲ್ಲದೆ ಕಡ್ಡಾಯ ವಾಗಿ ಕೌನ್ಸೆಲಿಂಗ್‌ಗೆ ಒಳಪಡಿಸುವುನು, ಅಗತ್ಯವಿದ್ದರೆ ಡಿ ಎಡಿಕ್ಷನ್‌ ಸೆಂಟರ್‌ನಲ್ಲಿ ಚಿಕಿತ್ಸೆ ನೀಡು ವುದು ನಡೆಯುತ್ತಿದೆ.

ಡ್ರಗ್ಸ್‌ ಮೂಲ ಪತ್ತೆ ಸಾಧ್ಯವಿಲ್ಲವೆ?
ದ.ಕ. ಜಿಲ್ಲೆ ಹೊರ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ಕಾರಣ ಯಾವ ಮಾರ್ಗದ ಮೂಲಕ ಡ್ರಗ್ಸ್‌ ಪೂರೈಕೆಯಾಗುತ್ತಿದೆ ಎಂಬ ಬಗ್ಗೆ ಬಹುತೇಕ ಮಾಹಿತಿ ಇದೆ. ಕೆಲವು ಪ್ರಕರಣ ಭೇದಿಸಲಾಗಿದೆ. ಸಿಂಥೆಟಿಕ್‌ ಡ್ರಗ್ಸ್‌ಗಳ ಬಳಕೆ ಗ್ರಾಮೀಣ ಭಾಗದಲ್ಲಿ ತೀರಾ ಕಡಿಮೆ. ಆದರೆ ಗಾಂಜಾ ಇತ್ಯಾದಿ ಸೇವನೆ ಕಂಡುಬರುತ್ತಿದೆ.

ಜನರ ಸ್ಪಂದನೆ ಹೇಗಿದೆ?
ಡ್ರಗ್ಸ್‌ ವಿರುದ್ಧದ ಅಭಿಯಾ ನದಲ್ಲಿ ಶಾಲಾ ಕಾಲೇಜುಗಳು ಕೈ ಜೋಡಿಸಿವೆ. ಹೈಸ್ಕೂಲ್‌ಗ‌ಳಲ್ಲಿಯೂ ಡ್ರಗ್ಸ್‌ ವಿರೋಧಿ ಸಮಿತಿ ರಚಿಸಿ ಜಾಗೃತಿ ಮೂಡಿಸಲಾಗುತ್ತಿದೆ. ಶಾಲೆ, ಕಾಲೇಜುಗಳಿಂದಲೂ ಮಾಹಿತಿ ಸಿಗುತ್ತಿದೆ. ಮಕ್ಕಳ ಪೋಷಕ ರಿಂದಲೂ ಪ್ರತಿಕ್ರಿಯೆ ಪಡೆದು ಕೊಳ್ಳುತ್ತಿದ್ದೇವೆ.

ಒಂಟಿ ಮನೆಗಳ ಸುರಕ್ಷೆಗೆ ಏನು ಕ್ರಮ?
ಜಿಲ್ಲೆಯಲ್ಲಿ ಒಂಟಿ ಮನೆಗಳು ಅಧಿಕ. ಕೆಲವೆಡೆ ಅಂತಹ ಮನೆಗಳನ್ನೇ ಕಳ್ಳರು, ದರೋಡೆಕೋರರು ಗುರಿ ಮಾಡುತ್ತಿದ್ದಾರೆ. ಈ ಬಗ್ಗೆ ವಿಶೇಷ ನಿಗಾ ಇಡಲಾಗುತ್ತಿದೆ. ಪೊಲೀಸ್‌ ಬೀಟ್‌ ಕೂಡ ಹೆಚ್ಚಿಸಲಾಗುತ್ತಿದೆ. ಅಂತಹ ಒಂಟಿ ಮನೆಗಳಲ್ಲಿ “ಬ್ರಿàಚ್‌ ಸೆನ್ಸರ್‌’ನಂತಹ ಭದ್ರತಾ ಉಪಕರಣ ಅಳವಡಿಸುವುದು ಸೂಕ್ತ.

ಜನಸ್ನೇಹಿ ಪೊಲೀಸಿಂಗ್‌ ಹೇಗೆ ಮಾಡುತ್ತೀರಿ?
ಠಾಣೆಗೆ ಬರುವವರ ಜತೆ ಉತ್ತಮ ನಡವಳಿಕೆಯಿಂದ ಸೇವೆ ನೀಡಲು ಸೂಚನೆ ನೀಡಲಾಗಿದೆ. ಜನಸ್ಪಂದನ ವ್ಯವಸ್ಥೆಯನ್ನು ಎಲ್ಲ ಠಾಣೆಗಳಲ್ಲಿಯೂ ಆರಂಭಿಸಲಾಗಿದೆ. ಯಾವುದೇ ಘಟನೆಯಾದರೂ ತತ್‌ಕ್ಷಣ ಸ್ಥಳಕ್ಕೆ ಧಾವಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನನಗೆ ಮಾಹಿತಿ ದೊರೆತ ಕೂಡಲೇ ಖುದ್ದಾಗಿ ಭೇಟಿ ನೀಡುತ್ತಿದ್ದೇನೆ.

ಅಪಘಾತಗಳ ನಿಯಂತ್ರಣ ಬಗ್ಗೆ…
ಸಂಚಾರ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವುದು ಸೇರಿದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತಿದೆ. “ಬ್ಲ್ಯಾಕ್‌ ಸ್ಪಾಟ್‌’ ಮಾದರಿಯಲ್ಲಿಯೇ “ಆಕ್ಸಿಡೆಂಟ್‌ ಸ್ಪಾಟ್‌’ಗಳನ್ನು ಗುರುತಿಸಲಾಗುತ್ತಿದ್ದು ಪೂರಕ ಕ್ರಮ ಕೈಗೊಳ್ಳಲಾಗುವುದು.

ಸಾರ್ವಜನಿಕರ ಸಮಸ್ಯೆಗೆ ಸ್ಥಳೀಯ ಠಾಣೆಗಳಿಂದ ಪೂರಕವಾಗಿ ಸ್ಪಂದನೆ ಸಿಗದಿದ್ದರೆ ಅಥವಾ ಏನಾದರೂ ದೂರುಗಳಿದ್ದರೆ ಪೊಲೀಸ್‌ ವರಿಷ್ಠಾಧಿಕಾರಿಗಳ ಈ ಸಂಖ್ಯೆಗೆ ಕರೆ ಅಥವಾ ವಾಟ್ಸ್‌ಆ್ಯಪ್‌ ಸಂದೇಶ ಕಳುಹಿಸಬಹುದು.
ಮೊಬೈಲ್‌: 9480805301

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.