Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್‌ ಆಟಗಾರ


Team Udayavani, Oct 4, 2023, 1:38 PM IST

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್‌ ಆಟಗಾರ

ಹೈದರಾಬಾದ್: ಏಕದಿನ ವಿಶ್ವಕಪ್‌ ಗುರುವಾರದಿಂದ(ಅ.5 ರಿಂದ) ಆರಂಭಗೊಳ್ಳಲಿದೆ. ಪಂದ್ಯಾಟ ಆರಂಭಕ್ಕೂ ಮುನ್ನ ಎಲ್ಲಾ ತಂಡಗಳಿಗೂ ಅಭ್ಯಾಸ ಪಂದ್ಯಗಳಿತ್ತು. ಈ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ ಎರಡೂ ಪಂದ್ಯಗಳನ್ನು ಸೋತಿದೆ.

ನ್ಯೂಜೆಲೆಂಡ್‌ ಹಾಗೂ ಆಸ್ಟ್ರೇಲಿಯ ವಿರುದ್ಧದ ಅಭ್ಯಾಸ ಪಂದ್ಯಗಳನ್ನು ಪಾಕಿಸ್ತಾನ ಸೋತಿದೆ. ಸೋತಿರುವುದು ಮಾತ್ರವಲ್ಲದೆ ಕಳಪೆ ಫೀಲ್ಡಿಂಗ್‌ ನಿಂದ ಪಾಕಿಸ್ತಾನ ಮುಜುಗರಕ್ಕೊಳಗಾಗಿದೆ. ಪಾಕ್‌ ತಂಡದ ಕಳಪೆ ಕ್ಷೇತ್ರ ರಕ್ಷಣೆಯ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಅಭ್ಯಾಸ ಪಂದ್ಯದಲ್ಲಿ ಬಾಬರ್‌ ಅಜಂ ಸಂಪೂರ್ಣ ಇನ್ನಿಂಗ್ಸ್‌ ನಲ್ಲಿ ಮೈದಾನಕ್ಕಿಳಿಯದ ಕಾರಣ ತಂಡವನ್ನು ಶಾದಾಬ್‌ ಖಾನ್‌ ಮುನ್ನಡೆಸಿದ್ದರು. ಕಳಪೆ ಫೀಲ್ಡಿಂಗ್‌ ನಿಂದ ಮುಜುಗರಕ್ಕೊಳಗಾದ ಪಾಕ್‌ ತಂಡಕ್ಕೆ ಈ ಬಗ್ಗೆ ಪ್ರಶ್ನೆ ಕೇಳಿದಾಗ “ನಮ್ಮ ಕಳಪೆ ಫೀಲ್ಡಿಂಗ್‌ ಗೆ ʼ ಹೈದರಾಬಾದಿ ಬಿರಿಯಾನಿʼ ಕಾರಣ”ವೆಂದು ಹೇಳಿದ್ದಾರೆ.

ಪಾಕ್‌ ತಂಡ ಭಾರತಕ್ಕೆ ಬಂದಾಗಿನಿಂದ ಪ್ರತಿನಿತ್ಯ ಆಟಗಾರರು ʼಹೈದರಾಬಾದಿ ಬಿರಿಯಾನಿʼಯನ್ನು ಸೇವಿಸುತ್ತಿದ್ದಾರೆ. ಬಿರಿಯಾನಿಯ ರುಚಿ ಹಚ್ಚಿದ್ದರಿಂದ ಕೆಲ ಆಟಗಾರರಿಗೆ ಅದು ಹೆಚ್ಚು ಬೇಕಾಗಿದೆ. ʼ ಹೈದರಾಬಾದಿ ಬಿರಿಯಾನಿʼಯ ರುಚಿ ನಮ್ಮನ್ನು ಸುಲಭವಾಗಿ ಬಿಡುತ್ತಿಲ್ಲ ಎಂದು ಶಾದಾಬ್‌ ಹೇಳಿದ್ದಾರೆ.

ನಿರೂಪಕ ಹರ್ಷಾ ಭೋಗ್ಲೆ ಅವರೊಂದಿಗೆ ಮಾತನಾಡಿದ ಶಾದಾಬ್, “ನಾವು ಹೈದರಾಬಾದಿ ಬಿರಿಯಾನಿಯನ್ನು ಪ್ರತಿದಿನ ತಿನ್ನುತ್ತಿದ್ದೇವೆ ಮತ್ತು ಬಹುಶಃ ಅದಕ್ಕಾಗಿಯೇ ನಾವು ಸ್ವಲ್ಪ ನಿಧಾನವಾಗುತ್ತಿದ್ದೇವೆ” ಎಂದು ಹೇಳಿದ್ದಾರೆ.

ಪಾಕಿಸ್ತಾನ ವಿಶ್ವಕಪ್‌ ನಲ್ಲಿ ಅ.6 ರಂದು ನೆದರ್ಲ್ಯಾಂಡ್ಸ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.

 

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.