![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 4, 2023, 10:51 PM IST
ಕುಂದಾಪುರ: ಚಿಕ್ಕನ್ಸಾಲ್ ರಸ್ತೆಯ ದಿಲ್ಲಿ ಬಜಾರ್ ಬಳಿ ರವಿವಾರ ಸಂಜೆ ನಡೆದ ಖಾರ್ವಿಕೇರಿ ನಿವಾಸಿ ರಾಘವೇಂದ್ರ (42) ಅಲಿಯಾಸ್ ಬನ್ಸ್ ರಾಘು ಅವರ ಕೊಲೆ ಪ್ರಕರಣ ಸಂಬಂಧ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಕೃತ್ಯ ನಡೆದು 3 ದಿನ ಕಳೆದರೂ ಆರೋಪಿಗಳ ಪತ್ತೆಯಾಗಿಲ್ಲ.
ಉಡುಪಿ ಎಸ್ಪಿ ಡಾ| ಅರುಣ್ ಕೆ. 3 ವಿಶೇಷ ತಂಡಗಳನ್ನು ರಚಿಸಿದ್ದಾರೆ. ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ, ಕುಂದಾಪುರ ವೃತ್ತ ನಿರೀಕ್ಷಕ ನಂದ ಕುಮಾರ್ ನೇತೃತ್ವದಲ್ಲಿ ಎಸ್ಐಗಳಾದ ಕುಂದಾಪುರದ ಪ್ರಸಾದ್, ವಿನಯ್ ಕೊರ್ಲಹಳ್ಳಿ, ಶಂಕರನಾರಾಯಣದ ಮಧು ಅವರನ್ನೊಳಗೊಂಡ ತಂಡ ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಎಸ್ಪಿ ಡಾ| ಅರುಣ್ ಉದಯವಾಣಿ ಜತೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 3 ತಂಡದಿಂದ ಹಲವು ಕಡೆ ತೆರಳಿ ಮಾಹಿತಿ ಕಲೆ ಹಾಕಲಾಗುತ್ತಿದೆ. ಘಟನೆ ನಡೆದ ಪ್ರದೇಶದ ಆಸುಪಾಸಿನ ಸಿಸಿಟವಿ ದೃಶ್ಯ, ತಾಂತ್ರಿಕ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಆರೋಪಿಗಳ ಬಗ್ಗೆ ಕೆಲವೊಂದು ಸುಳಿವು ಲಭ್ಯವಾಗಿದ್ದು, ಶೀಘ್ರ ಬಂಧಿಸಲಾಗುವುದು. ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಹಂತದಲ್ಲಿ ಏನನ್ನೂ ಹೇಳಲಾಗದು ಎಂದು ತಿಳಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.