BJP ಜತೆಗಿಲ್ಲ ಮೈತ್ರಿ: ಫಡ್ನವೀಸ್ ಮಾತು ಸುಳ್ಳು- NCP ಸಂಸ್ಥಾಪಕ ಶರದ್ ಪವಾರ್ ಘೋಷಣೆ
Team Udayavani, Oct 4, 2023, 10:38 PM IST
ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಜತೆಗೆ ಎನ್ಸಿಪಿ ಸೇರಿಕೊಳ್ಳುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಡಿಸಿಎಂ ದೇವೇಂದ್ರ ಫಡ್ನವಿಸ್ ಹೇಳಿರುವುದೆಲ್ಲ ಸುಳ್ಳು ಎಂದು ಎನ್ಸಿಪಿ ಸಂಸ್ಥಾಪಕ ಶರದ್ ಪವಾರ್ ಹೇಳಿದ್ದಾರೆ. ಮುಂಬೈನಲ್ಲಿ “ಇಂಡಿಯಾ ಟುಡೇ’ ಟಿವಿ ವತಿಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಬಿಜೆಪಿಗೆ ಸೇರಿರುವ ಪಕ್ಷದ ನಾಯಕರಿಗೂ ಎನ್ಸಿಪಿಗೂ ಸಂಬಂಧವೇ ಇಲ್ಲ ಎಂದು ತಮ್ಮ ಸೋದರಳಿಯ ಅಜಿತ್ ಪವಾರ್ ಅವರನ್ನು ಉಲ್ಲೇಖೀಸಿ ಶರದ್ ಹೇಳಿದ್ದಾರೆ. ಅವರ ವಿರುದ್ಧ ಕೆಲವೊಂದು ಆರೋಪಗಳಿವೆ. ತನಿಖಾ ಸಂಸ್ಥೆಗಳಿಗೆ ಹೆದರಿ ಆ ಪಕ್ಷಕ್ಕೆ ಸೇರಿದ್ದಾರೆ ಎಂದರು.
ರಾಹುಲ್ ಗಾಂಧಿಯವರ ಬಗ್ಗೆ ಮಾತನಾಡಿದ ಪವಾರ್ “ಭಾರತ್ ಜೋಡೋ ಯಾತ್ರೆಯನ್ನು ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಒಂದಲ್ಲ ಒಂದು ದಿನ ರಾಹುಲ್ ಗಾಂಧಿ ದೇಶವನ್ನು ಮುನ್ನಡೆಸಲಿದ್ದಾರೆ’ ಎಂದರು.
ರಾಷ್ಟ್ರಪತಿ ಆಡಳಿತಕ್ಕೆ ಪವಾರ್ ಸಹಮತ ಇತ್ತು
2019ರಲ್ಲಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವುದಕ್ಕೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಬೆಂಬಲ ಇತ್ತು ಎಂದು ಡಿಸಿಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಮುಂಬೈನಲ್ಲಿ ಮಾತನಾಡಿದ ಅವರು, 2019ರಲ್ಲಿ ಶರದ್ ಪವಾರ್ ಬಿಜೆಪಿ ಜತೆಗೆ ಸೇರಿಕೊಂಡು ಸರ್ಕಾರ ರಚಿಸಲು ಮುಂದಾಗಿದ್ದರು. ಜತೆಗೆ ಯಾರಿಗೆ ಯಾವ ಖಾತೆ ಎಂಬ ಅಂಶವೂ ತೀರ್ಮಾನವಾಗಿತ್ತು. ಅಂತಿಮವಾಗಿ ಪವಾರ್ ನಿಲುವು ಬದಲಾಯಿಸಿಕೊಂಡರು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!
MUST WATCH
ಹೊಸ ಸೇರ್ಪಡೆ
BBK11: ಮತ್ತೆ ʼಬಿಗ್ಬಾಸ್ʼ ಕಾರ್ಯಕ್ರಮದ ವಾಹಿನಿಗೆ ಬಂದ ಲಾಯರ್ ಜಗದೀಶ್; ವೀಕ್ಷಕರು ಖುಷ್
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
INDvsNZ: ರಾಹುಲ್, ಕುಲದೀಪ್, ಸಿರಾಜ್ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ
Muddebihal: ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು
Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.