Karnataka: ಮುಂದಿನ ವರ್ಷ ಎಂಜಿನಿಯರಿಂಗ್‌ ಸೀಟ್‌ಗಳಲ್ಲಿ ಕಡಿತ

ಖಾಸಗಿ ಕಾಲೇಜುಗಳು ಮನಸೋ ಇಚ್ಛೆ ಪ್ರವೇಶ ನೀಡುವುದಕ್ಕೆ ಕಡಿವಾಣ: ಸುಧಾಕರ್‌

Team Udayavani, Oct 4, 2023, 11:50 PM IST

text books

ಬೆಂಗಳೂರು: ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ನಿಯಂತ್ರಿಸಲು ಸರಕಾರ ಕ್ರಮ ಕೈಗೊಳ್ಳಲಿದೆ. ಕಾನೂನು ಕಾಯ್ದೆಗಳಿಗೆ ಅಗತ್ಯ ತಿದ್ದುಪಡಿ ಮಾಡುವ ಮೂಲಕ ಮುಂದಿನ ಶೈಕ್ಷಣಿಕ ವರ್ಷ ದಿಂದ ವಿದ್ಯಾರ್ಥಿಗಳ ದಾಖಲಾತಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್‌ ಹೇಳಿದ್ದಾರೆ.
ವಿಕಾಸ ಸೌಧದಲ್ಲಿ ಅವರು ಮಾತ ನಾಡಿ, ರಾಜ್ಯ ಖಾಸಗಿ ವಿಶ್ವವಿದ್ಯಾನಿಲಯಗಳು, ಸಂಸ್ಥೆಗಳು ನಿಯಮ ಬಾಹಿರವಾಗಿ ವಿದ್ಯಾರ್ಥಿಗಳಿಗೆ ಭಾರಿ ಪ್ರಮಾಣದಲ್ಲಿ ಪ್ರವೇಶ ನೀಡುತ್ತಿರುವುದಕ್ಕೆ ಲಗಾಮು ಹಾಕುವಂತೆ ಅಖೀಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್‌ಗೆ ಪತ್ರ ಬರೆದಿದ್ದೆ. ಪರಿಷತ್‌ನ ಮುಖ್ಯಸ್ಥರು ಈ ಬಗ್ಗೆ ಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯ ಸರಕಾರಕ್ಕಿದೆ ಎಂದು ಮರು ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

ಸೂಕ್ತ ಪ್ರಮಾಣದ ಪ್ರಯೋಗಾಲಯ ಮತ್ತು ಬೋಧಕ ಸಿಬಂದಿಗಳಿಲ್ಲದೆ ಎಂಜಿನಿಯರಿಂಗ್‌ ಸಂಸ್ಥೆಗಳನ್ನು ನಡೆಸುವುದಕ್ಕೆ ಅವಕಾಶ ನೀಡುವುದಿಲ್ಲ. ಇರುವ ಸೌಲಭ್ಯ ಮತ್ತು ಬೋಧಕ ಸಿಬಂದಿಗಳಿಗೆ ತಕ್ಕಷ್ಟು ಮಾತ್ರ ದಾಖಲಾತಿ ನೀಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಈ ಬಾರಿ ಖಾಸಗಿ ಕಾಲೇಜುಗಳ ಸುಮಾರು 9,000 ಸೀಟುಗಳನ್ನು ಕಡಿತ ಮಾಡುವ ಚಿಂತನೆ ನಡೆಸಿದ್ದೆವು. ಆದರೆ ಕೊನೆಯ ಕ್ಷಣದಲ್ಲಿ ಗೊಂದಲ ಸೃಷ್ಟಿಯಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಪ್ರವೇಶ ನೀಡಿದ್ದೇವೆ. ಆದರೆ ಮುಂದಿನ ಬಾರಿ ಈ ರೀತಿ ರಿಯಾಯಿತಿ ನೀಡುವುದಿಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳ ಸೌಲಭ್ಯಗಳನ್ನು ಪರಿಗಣಿಸಿಯೇ ಖಾಸಗಿ ಕಾಲೇಜುಗಳಿಗೆ ಪ್ರವೇಶ ಸಂಖ್ಯೆ ನಿಗದಿ ಮಾಡಲಾಗುವುದು ಎಂದು ತಿಳಿಸಿದರು.

ಉನ್ನತ ಶಿಕ್ಷಣ ಇಲಾಖೆಯಿಂದ ಕಾಲಮಿತಿ ನಿಗದಿ ಪಡಿಸುತ್ತೇವೆ. ಆ ಅವಧಿಯೊಳಗೆ ನಿರಾಪೇಕ್ಷಣ ಪತ್ರ ಪಡೆಯಬೇಕು ಮತ್ತು ಎಷ್ಟು ಸೀಟುಗಳಿಗೆ ಅನುಮತಿ ಇರುತ್ತದೆಯೋ ಅಷ್ಟು ಸೀಟುಗಳನ್ನು ಸೀಟ್‌ ಮ್ಯಾಟ್ರಿಕ್ಸ್‌ನಲ್ಲಿ ನೀಡಲಾಗುವುದು ಎಂದು ಡಾ| ಸುಧಾಕರ್‌ ಹೇಳಿದ್ದಾರೆ.

ಎಂಬಿಬಿಎಸ್‌ ಮಾದರಿ ಸೀಟ್‌ ನಿಗದಿ

ಹೊಸ ಎಂಜಿನಿಯರಿಂಗ್‌ ಕಾಲೇಜ್‌ಗೆ ಅನುಮತಿ ನೀಡುವುದಿಲ್ಲ ಎಂದು ಹೇಳಲಾಗದು. ಆದರೆ ಬೆಂಗಳೂರಿನಂತಹ ನಗರದಲ್ಲಿ ಈಗಿರುವ ಕಾಲೇಜುಗಳಲ್ಲಿ ಮನಸೋ ಇಚ್ಛೆ ಪ್ರವೇಶ ನೀಡುತ್ತಿರುವುದನ್ನು ನಿಯಂತ್ರಿಸುತ್ತೇವೆ. ಮೆಡಿಕಲ್‌ ಶಿಕ್ಷಣದಲ್ಲಿ ಹೇಗೆ ಜನಸಂಖ್ಯೆ ಆಧಾರದಲ್ಲಿ ವೈದ್ಯಕೀಯ ಸೀಟ್‌ ನೀಡಿಕೆಯನ್ನು ನಿಗದಿ ಮಾಡಲಾಗುತ್ತಿದೆಯೋ, ಅದೇ ರೀತಿ ಗುಣಮಟ್ಟದ ಎಂಜಿನಿಯರಿಂಗ್‌ ಶಿಕ್ಷಣಕ್ಕೆ ಇಂತಹ ನೀತಿ ಅಳವಡಿಕೆಯ ಅಗತ್ಯವಿದೆ ಎಂದು ಡಾ| ಸುಧಾಕರ್‌ ಹೇಳಿದರು.

ಎಸ್‌ಇಪಿಗೆ ವಾರದೊಳಗೆ ಮುಖ್ಯಸ್ಥರ ನೇಮಕ
ರಾಜ್ಯ ಶಿಕ್ಷಣ ನೀತಿ ರಚನೆಗೆ ವಾರದೊಳಗೆ ಸಮಿತಿಯ ಅಧ್ಯಕ್ಷರ ಹೆಸರನ್ನು ಪ್ರಕಟಿಸಲಾಗುವುದು. ಮುಂದೆ ಗೊಂದಲ ಸೃಷ್ಟಿಯಾಗಬಾರದು ಎಂಬ ಉದ್ದೇಶದಿಂದ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರ ಪೂರ್ವಾಪರವನ್ನು ಪರಿಶೀಲಿಸಿ ನೇಮಕ ನಡೆಸಲಾಗುವುದು ಎಂದು ಸಚಿವ ಡಾ| ಸುಧಾಕರ್‌ ಹೇಳಿದರು. ಎಲ್ಲರನ್ನೂ ಒಳಗೊಂಡ, ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡಿರುವ ಸಮಗ್ರ ಶಿಕ್ಷಣ ನೀತಿ ಜಾರಿಗೊಳಿಸಬೇಕು ಎಂಬುದು ನಮ್ಮ ಉದ್ದೇಶ. ಸಮಿತಿಯ ಬಗ್ಗೆ ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿಗಳು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು. ಒಂದು ವೇಳೆ ಮುಂದಿನ ಶೈಕ್ಷಣಿಕ ವರ್ಷ ಆರಂಭಗೊಳ್ಳುವ ಮೊದಲು ಸಮಿತಿಯು ಪೂರ್ವಭಾವಿ ವರದಿ ನೀಡಿದರೆ ಆ ವರದಿಯನ್ನು ಆಧಾರವಾಗಿರಿಸಿಕೊಂಡು ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಸುಧಾಕರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.