Government ಸರಕಾರಿ ಸಭೆಗಳಲ್ಲಿ ಇನ್ನು ಎಂಎಲ್‌ಸಿ ಸಹ-ಅಧ್ಯಕ್ಷ !

ಶಾಸಕರನ್ನು ಆಹ್ವಾನಿಸುವಲ್ಲಿ ಲೋಪವಾಗದಿರಲು ಸರಕಾರ ಕ್ರಮ

Team Udayavani, Oct 5, 2023, 12:04 AM IST

Government ಸರಕಾರಿ ಸಭೆಗಳಲ್ಲಿ ಇನ್ನು ಎಂಎಲ್‌ಸಿ ಸಹ-ಅಧ್ಯಕ್ಷ !

ಕಾರ್ಕಳ: ಸರಕಾರ ಆಯೋಜಿಸುವ ಕಾರ್ಯಕ್ರಮ, ಸಭೆ, ಸಮಾರಂಭಗಳಲ್ಲಿ ಸ್ಥಳೀಯ ಶಾಸಕರು ಅಧ್ಯಕ್ಷತೆ ವಹಿಸಿದ್ದರೆ ಇನ್ನು ಮುಂದೆ ವಿಧಾನಪರಿಷತ್‌ ಸದಸ್ಯರು ಸಹಅಧ್ಯಕ್ಷರಾಗಿರುತ್ತಾರೆ. ಈ ಸಂಬಂಧ ವಿಧಾನ ಪರಿಷತ್‌ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸರಕಾರಿ ಕಾರ್ಯಕ್ರಮಗಳಲ್ಲಿ ಪದೇಪದೆ ಶಿಷ್ಟಾಚಾರದ ಉಲ್ಲಂಘನೆ ಆಗುತ್ತಿರುವುದನ್ನು ತಪ್ಪಿಸಲು ಸರಕಾರದ ಈ ಆದೇಶ ಮಹತ್ವದ್ದೆನಿಸಲಿದೆ.

ವಿಧಾನಪರಿಷತ್‌ನಲ್ಲಿ 11 ಮಂದಿ ನಾಮನಿರ್ದೇಶಿತರು ಸೇರಿ 75 ಸದಸ್ಯರಿದ್ದಾರೆ. ಶಿಕ್ಷಕರ, ಪದವೀ ಧರರ ಸಹಿತ ವಿವಿಧ ಕ್ಷೇತ್ರಗಳಿಂದ ನೇಮಕಗೊಂಡು ಮೇಲ್ಮನೆ ಸದಸ್ಯ ರಾಗಿರುತ್ತಾರೆ. ಸರಕಾರಿ ಕಾರ್ಯ ಕ್ರಮಗಳಲ್ಲಿ ಇಂತಹ ಸದಸ್ಯರನ್ನು ಆಹ್ವಾನಿಸುವ ವೇಳೆ ಶಿಷ್ಟಾಚಾರ ಉಲ್ಲಂಘನೆ, ಅವಗಣಿಸುವ ಘಟನೆಗಳು ಮರುಕಳಿಸುತ್ತಿವೆ ಎನ್ನುವ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರವು ವಿಧಾನ ಪರಿಷತ್‌ ಸದಸ್ಯರಿಗೂ ಸೂಕ್ತ ಸ್ಥಾನಮಾನ ನೀಡಲು ನಿರ್ಧರಿಸಿದೆ.

ಸರಕಾರಿ ಕಾರ್ಯಕ್ರಮಗಳನ್ನು ಆಯೋಜಿಸುವ ವೇಳೆ ಸ್ಥಳೀಯ ಶಾಸಕರು ಅಧ್ಯಕ್ಷತೆ ವಹಿಸುವುದು ಇದು ವರೆಗೆ ನಡೆದು ಬಂದ ಶಿಷ್ಟಾಚಾರ. ಇನ್ನು ಮುಂದೆ ಅದರ ಕೆಳಗೆ ಸಹಅಧ್ಯಕ್ಷರಾಗಿ ವಿಧಾನಪರಿಷತ್‌ ಸದಸ್ಯರ ಹೆಸರಿ ರಲಿದೆ. ಇದುವರೆಗೆ ಅತಿಥಿಗಳ ಸಾಲಿನಲ್ಲಿ ವಿಧಾನ ಪರಿಷತ್‌ ಸದಸ್ಯರು ಎಂದು ನಮೂದಿಸಲಾಗುತ್ತಿತ್ತು. ಸೆ. 10 ಮತ್ತು 18ರಂದು ನಡೆದ ವಿಧಾನ ಪರಿಷತ್ತಿನ ಹಕ್ಕುಬಾಧ್ಯತ ಸಮಿತಿಯ ಸಭೆಯಲ್ಲಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿತ್ತು. ಶಾಸಕರನ್ನು ಆಹ್ವಾನಿಸುವಲ್ಲಿ ಯಾವುದೇ ಲೋಪವಾಗದಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಅವರ ಜಿಲ್ಲಾ ವ್ಯಾಪ್ತಿಗೆ ಬರುವ ಎಲ್ಲ ಇಲಾಖಾ ಧಿಕಾರಿಗಳೊಂದಿಗೆ ಸಭೆ ನಡೆಸಿ 15 ದಿನಗಳೊಳಗೆ ವರದಿಯನ್ನು ಸಮಿತಿಯ ಅವಗಾಹನೆಗೆ ಒದಗಿಸಬೇಕೆಂದೂ ನಿರ್ಣಯಿಸಲಾಗಿದೆ.

ವಿಧಾನ ಪರಿಷತ್‌ ಸದಸ್ಯ(ಶಾಸಕ)ರನ್ನು ಸರಕಾರಿ ಕಾರ್ಯ ಕ್ರಮಗಳಿಗೆ ಆಹ್ವಾನಿಸುವಲ್ಲಿ ಲೋಪಗಳಾಗುತ್ತಿರುವ ಬಗ್ಗೆ ಹಲವು ವರ್ಷಗಳಿಂದ ದೂರುಗಳಿದ್ದವು. ಹಕ್ಕುಬಾಧ್ಯತ ಸಭೆಯಲ್ಲಿ ಚರ್ಚೆ ನಡೆದಿತ್ತು. ಮುಂದಿನ ದಿನಗಳಲ್ಲಿ ಲೋಪವಾಗದಂತೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಿರಿತನದ ಆಧಾರದಲ್ಲಿ ಆಯಾ ಪ್ರತಿನಿಧಿಸುವ ಕ್ಷೇತ್ರದಲ್ಲಿ ಸಹ ಅಧ್ಯಕ್ಷರನ್ನಾಗಿ ಪರಿಷತ್ತು ಸದಸ್ಯರನ್ನು ಆಹ್ವಾನಿಸಬೇಕಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ನೀಡಲಾಗಿದೆ.
– ಮೀನಾ ನಾಯಕ್‌, ಅಧೀನ ಕಾರ್ಯದರ್ಶಿ ಕರ್ನಾಟಕ ವಿಧಾನ ಪರಿಷತ್ತು. ವಿಧಾನ ಸೌಧ ಬೆಂಗಳೂರು

ಟಾಪ್ ನ್ಯೂಸ್

Dravid–gavskar

Indian Cricket; ರಾಹುಲ್‌ ದ್ರಾವಿಡ್‌ಗೆ ಭಾರತ ರತ್ನ ಕೊಡಿ: ಗವಾಸ್ಕರ್‌

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

1-wqwewewq

T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odish-Neji

Udupi: ಕರಾವಳಿಯ ನೇಜಿಗೆ ಒಡಿಶಾ ಕಾರ್ಮಿಕರ ಬಲ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Dravid–gavskar

Indian Cricket; ರಾಹುಲ್‌ ದ್ರಾವಿಡ್‌ಗೆ ಭಾರತ ರತ್ನ ಕೊಡಿ: ಗವಾಸ್ಕರ್‌

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

1-wqwewewq

T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.