ED Raid ಮಾಡಿಸುವುದು ಬಿಜೆಪಿಯ ಹುನ್ನಾರ: ಕಿಮ್ಮನೆ ರತ್ನಾಕರ್
Team Udayavani, Oct 5, 2023, 11:52 AM IST
ತೀರ್ಥಹಳ್ಳಿ: ಕೇಂದ್ರ ಸರ್ಕಾರ ವಿರೋಧ ಪಕ್ಷದವರ ಮನೆಯ ಮೇಲೆ ರೈಡ್ ಮಾಡುವ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಂಡಿದೆ.
ಇಂದು ಬೆಳಿಗ್ಗೆ ನಡೆದ ಇಡಿ ದಾಳಿ ಕೂಡ ಅದರ ಒಂದು ಭಾಗ. ದೇಶಾದ್ಯಂತ ಬಿಜೆಪಿ ಜೊತೆ ಸೇರದಿದ್ದವರ ಕಚೇರಿ, ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಆ. 5ರ ಗುರುವಾರ ತೀರ್ಥಹಳ್ಳಿಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು ಇಡಿ ದಾಳಿ ಮಾಡಿಸುವುದು ಬಿಜೆಪಿಯ ಹುನ್ನಾರ ಹಾಗೂ ಚುನಾವಣೆಯ ಸಂದರ್ಭದಲ್ಲಿ ಕೋಮು ಗಲಭೆಯ ತಾಲೀಮು ಮಾಡುತ್ತಿದ್ದಾರೆ. ಬಡವರಿಗೆ ತಲುಪಿಸುವ ಆರ್ಥಿಕ ಕಾರ್ಯಕ್ರಮ ಯಾವುದು ಮಾಡುವುದಿಲ್ಲ. ಜ್ಞಾನೇಂದ್ರ ಕೂಡ ನಂದಿತಾ ಪ್ರಕರಣವನ್ನು ಮಾಡಿದ್ದರು. ದೇಶಾದ್ಯಂತ ಧರ್ಮದ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದರು.
ರಾಮಲಿಂಗ ರೆಡ್ಡಿ ಹೇಳಿಕೆ ವಿಚಾರವಾಗಿ ಮಾತನಾಡಿ, ಶಿವಮೊಗ್ಗ ಒಂದೇ ವಿಚಾರವನ್ನು ಅವರು ಹೇಳಿಲ್ಲ. ಎಲ್ಲ ಕಡೆ ಇದೇ ರೀತಿ ಮಾಡುತ್ತಿದ್ದಾರೆ. ಹಿಂದೆ ಶಿವಮೊಗ್ಗದಲ್ಲಿ ಮಣ್ಣಿನ ಬಾಂಬ್ ಹಾರಿಸಿ ಕೋಮು ಗಲಭೆ ಸೃಷ್ಟಿಸುವ ಪ್ರಯತ್ನ ನಡೆಸಿದ್ದರು. ನಂತರ ಅದು ಮುಸ್ಲಿಂನವರು ಮಾಡಿದಲ್ಲ, ಗಾಂಧಿ ಬಜಾರ್ ಹುಡುಗ ಮಾಡಿದ್ದು ಎಂದು ತಿಳಿದು ಬಂತು. ದೇಶದಲ್ಲಿ ಧರ್ಮ ಸಂಘರ್ಷ ನಡೆದಿದ್ದರೆ ಸ್ವತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ಅದಕ್ಕೆ ಬಿಜೆಪಿಯೇ ಕಾರಣ. ಬಿಜೆಪಿ ಪರಿವಾರದಿಂದ ಈ ಕೆಲಸ ಆಗುತ್ತಿದೆ. ಬಿಜೆಪಿಯವರು ಬಾಂಬ್ ಹಾಕಬೇಕು ಎನ್ನುವುದಿಲ್ಲ., ಪ್ರಚೋದನೆ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದರು.
ಲೋಕಸಭೆ ಚುನಾವಣೆಗೆ ಸಮ್ಮಿಶ್ರ ಸರ್ಕಾರದ ವಿಚಾರವಾಗಿ ಮಾತನಾಡಿ, ಈ ವಿಷಯದಲ್ಲಿ ಜೆಡಿಎಸ್ ನವರಿಗೆ ತೊಂದರೆ. ಹಿಂದೆಲ್ಲ ಸಮಿಶ್ರ ಸರ್ಕಾರ ಆಗಿತ್ತು. ಈಗಿನ ನೇರ ಹೊಂದಾಣಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.