Delhi excise policy: ದಿಲ್ಲಿ ಅಬಕಾರಿ ನೀತಿ ಆಪ್‌ ಸರಕಾರಕ್ಕೆ ಉರುಳು?


Team Udayavani, Oct 6, 2023, 12:18 AM IST

alchohol

ದಿಲ್ಲಿ ಅಬಕಾರಿ ನೀತಿ ಸಂಬಂಧ ಆಮ್‌ ಆದ್ಮಿ ಪಕ್ಷದ ಮತ್ತೂಬ್ಬ ನಾಯಕ, ರಾಜ್ಯಸಭೆ ಸದಸ್ಯ ಸಂಜಯ್‌ ಸಿಂಗ್‌ ಬಂಧನವಾಗಿದೆ. ಈಗಾಗಲೇ ಮನೀಶ್‌ ಸಿಸೋಡಿಯಾ ಇದೇ ಕೇಸಿನಲ್ಲಿ ಜೈಲಿನಲ್ಲಿದ್ದಾರೆ. ಏನಿದು ಕೇಸ್‌? ಆಪ್‌ಗೆ ಇದರಿಂದ ಸಂಕಷ್ಟವಿದೆಯೇ?

ಏನಿದು ನೀತಿ?

2021ರ ನವೆಂಬರ್‌ನಲ್ಲಿ ದಿಲ್ಲಿಯ ಅರವಿಂದ ಕೇಜ್ರಿವಾಲ್‌ ಸರಕಾರವು ಹೊಸ ಅಬಕಾರಿ ನೀತಿಯನ್ನು ಘೋಷಿಸಿತು. ಈ ನೀತಿಯ ಅನ್ವಯ ಸರಕಾರವು ಲಿಕ್ಕರ್‌ನ ಚಿಲ್ಲರೆ ಮಾರಾಟವನ್ನು ಹಿಂದೆಗೆದುಕೊಂಡು, ಖಾಸಗಿಯವರಿಗೆ ಪರವಾನಿಗೆ ನೀಡಲು ಶುರು ಮಾಡಿತು. ಇದರಿಂದ ಕಪ್ಪು ಮಾರುಕಟ್ಟೆ ದಂಧೆಯ ನಿಯಂತ್ರಣವಾಗುತ್ತದೆ ಎಂಬುದು ದಿಲ್ಲಿ ಸರಕಾರದ ವಾದ. ಅಲ್ಲದೆ ಶೇ.27ರಷ್ಟು ಹೆಚ್ಚು ಆದಾಯ ಸಂಗ್ರಹಿಸುವ ಗುರಿ ಹಾಕಿಕೊಂಡಿತ್ತು¤.

ಆರೋಪವೇನು?

2022ರ ಜುಲೈಯಲ್ಲಿ ದಿಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ನರೇಶ್‌ ಕುಮಾರ್‌, ಈ ನೀತಿ ಬಗ್ಗೆ ಆಕ್ಷೇಪವೆತ್ತಿದ್ದರು. ಇದರಲ್ಲಿ ಹಲವಾರು ನೀತಿಗಳ ಉಲ್ಲಂಘನೆಯಾಗಿದೆ ಎಂದಿದ್ದರು. ಲಿಕ್ಕರ್‌ ಪರವಾನಿಗೆ ನೀಡುವ ವೇಳೆ ಅಕ್ರಮ ನಡೆದಿದೆ. 144 ಕೋಟಿ ರೂ.ನಷ್ಟು ಪರವಾನಿಗೆ ಶುಲ್ಕವನ್ನು ವಿನಾಯಿತಿ ರೂಪದಲ್ಲಿ ನೀಡಲಾಗಿದೆ ಎಂದಿದ್ದರು. ಮುಖ್ಯ ಕಾರ್ಯದರ್ಶಿಯವರ ವರದಿಯನ್ನು ಆಧಾರವಾಗಿಟ್ಟುಕೊಂಡು ದಿಲ್ಲಿ ಲೆ| ಗವರ್ನರ್‌ ಸಿಬಿಐ ತನಿಖೆಗೆ ಆದೇಶಿಸಿದ್ದರು. ಹೀಗಾಗಿ ದಿಲ್ಲಿ ಸರಕಾರ ಹೊಸ ಅಬಕಾರಿ ನೀತಿ ಹಿಂದೆಗೆದುಕೊಂಡಿತು. 400 ಲಿಕ್ಕರ್‌ ಶಾಪ್‌ಗಳಿಗೆ ಬೀಗ ಬಿದ್ದಿತು.

ಸಿಬಿಐಯಿಂದ ತನಿಖೆ

2022ರ ಆಗಸ್ಟ್‌ನಲ್ಲಿ ಸಿಬಿಐ ತನಿಖೆ ಶುರು ಮಾಡಿತು. ಈ ವರ್ಷದ ಫೆಬ್ರವರಿಯಲ್ಲಿ ದಿಲ್ಲಿ ಡಿಸಿಎಂ ಮನೀಶ್‌ ಸಿಸೋಡಿಯಾ ಅವರನ್ನು ಬಂಧಿಸಿತು. ಕಳೆದ ಎಪ್ರಿಲ್‌ನಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರ ವಿಚಾರಣೆ ನಡೆಸಲಾಗಿದೆ. ಬುಧವಾರ ಸಂಜಯ್‌ ಸಿಂಗ್‌ ಅವರನ್ನು ಬಂಧಿಸಲಾಗಿದೆ. ಕೆಲವು ಅಧಿಕಾರಿಗಳ ಬಂಧನವೂ ಆಗಿದೆ. ಅಲ್ಲದೆ ಈ ಹಗರಣದ ಹಣವನ್ನು ಆಮ್‌ ಆದ್ಮಿ ಪಕ್ಷ ಗೋವಾ ಚುನಾವಣೆಯಲ್ಲಿ ವೆಚ್ಚ ಮಾಡಿದೆ ಎಂಬ ಆರೋಪವೂ ಇದೆ. ಸದ್ಯ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಜತೆಗೆ ತೆಲಂಗಾಣದ ಕೆ.ಸಿ.ಚಂದ್ರಶೇಖರ ರಾವ್‌ ಪುತ್ರಿ ಕವಿತಾರಿಗೂ ಈ ಹಗರಣಕ್ಕೂ ಸಂಬಂಧವಿದೆ ಎಂಬ ಆರೋಪವೂ ಇದೆ.

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Retro style trends in social media

Retro Style; ಸೋಶಿಯಲ್‌ ಮೀಡಿಯಾದಲ್ಲೊಂದು ರೆಟ್ರೋ ಸ್ಟೈಲ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.