![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 7, 2023, 1:02 AM IST
ಬೆಂಗಳೂರು: ರಾಜ್ಯದಲ್ಲಿ ಪಂಚಾಯತ್ಗೊಂದು ಮದ್ಯದಂಗಡಿ ತೆರೆಯುವ ವಿಷಯ ಹೊಸ ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಸಿದ್ದ ರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತದ್ವಿರುದ್ಧ ಹೇಳಿಕೆ ನೀಡಿದ್ದಾರೆ.
ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಹೊಸ ದಾಗಿ ಒಂದು ಸಾವಿರ ಮದ್ಯದಂಗಡಿ ತೆರೆಯಲು ಮುಂದಾಗಿದ್ದ ರಾಜ್ಯ ಸರಕಾರದ ನಿರ್ಧಾರಕ್ಕೆ ಮಹಿಳಾ ಸಂಘಟನೆಗಳ ಸಹಿತ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಒಂದು ಹೆಜ್ಜೆ ಹಿಂದಿಟ್ಟಿದ್ದಾರೆ. ಆದರೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ವಿಷಯದಲ್ಲಿ ಒಂದು ಹೆಜ್ಜೆ ಮುಂದಿ ಟ್ಟಿದ್ದು, ಮುಂಬರುವ ದಿನಗಳಲ್ಲಿ ಎಲ್ಲರ ಜತೆ ಚರ್ಚಿಸಿ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳು ತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಈ ವಿಚಾರಕ್ಕೆ ಸಂಬಂಧಿಸಿ ಸರಕಾರದಲ್ಲಿ ಭಿನ್ನ ಧ್ವನಿ ಕೇಳಿಬಂದಂತಾಗಿದೆ.
ಇನ್ನೂ ಜೀವಂತ
ಸರಕಾರದ ಉನ್ನತ ಮೂಲಗಳ ಪ್ರಕಾರ ಹಣಕಾಸು ಇಲಾಖೆ ನೀಡಿದ ಈ ಸಲಹೆ ಇನ್ನೂ ಜೀವಂತವಾಗಿದೆ. ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಸಂಪನ್ಮೂಲ ಕ್ರೋಡೀಕರಣ ಅನಿವಾರ್ಯ ವಾಗಿದೆ. ಸುಮಾರು 36,000 ಕೋಟಿ ರೂ. ಅಬಕಾರಿ ಆದಾಯ ಸಂಗ್ರಹವನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಸರಕಾರ ನಿರೀಕ್ಷೆ ಮಾಡಿದೆ. ಇದರ ಜತೆಗೆ ಹೊಸ ಮದ್ಯದಂಗಡಿ ಪ್ರಾರಂಭಿಸುವುದರಿಂದ ಇನ್ನಷ್ಟು ಆದಾಯ ಸಂಗ್ರಹಕ್ಕೆ ಅವಕಾಶವಿದೆ ಎಂದು ಹಣಕಾಸು ಇಲಾಖೆ ಸಲಹೆ ನೀಡಿದೆ. ಈ ಹಿನ್ನೆಲೆ ಯಲ್ಲಿ ಹೊಸ ಸನ್ನದು ಮಾರಾಟಕ್ಕೆ ರಾಜ್ಯ ಸರಕಾರ ಚಿಂತನೆ ನಡೆಸಿತ್ತು.
ಮದ್ಯದಂಗಡಿ ತೆರೆಯುವುದಿಲ್ಲ
ಚಿತ್ರದುರ್ಗದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಹೊಸ ಮದ್ಯದಂಗಡಿಗಳನ್ನು ತೆರೆಯದಿರುವ ಬಗ್ಗೆ ಸರಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಒಂದು ಸಾವಿರ ಮದ್ಯದಂಗಡಿ ತೆರೆಯುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಅಬಕಾರಿ ಸಚಿವರು ಹೇಳಿಕೆ ನೀಡಿ ದ್ದಾರೆ, ಆದರೆ ನಾವು ತೆರೆಯುವುದಿಲ್ಲ ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ. ಮದ್ಯದಂಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಸ್ಪಷ್ಟನೆಯನ್ನು ಅವರು ನೀಡಿಲ್ಲ. ಆದರೆ ಈ ಬಗ್ಗೆ ಸಾರ್ವಜನಿಕ ಚರ್ಚೆ ಹೆಚ್ಚದಂತೆ ಮಾಡುವ ಪ್ರಯತ್ನಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಹೀಗಾಗಿ ಒಂದು ತಿಂಗಳು ಕಳೆಯುವುದರೊಳಗಾಗಿ ಸರಕಾರ ತನ್ನ ನಿಲುವಿನಿಂದ “ಯೂಟರ್ನ್’ ತೆಗೆದುಕೊಂಡಂತಾಗಿದೆ.
ಡಿಸಿಎಂ ವಾದವೇನು?
ಮಾಗಡಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, “ಇದು ಹಣಕಾಸು ಇಲಾಖೆಯ ನಿರ್ಧಾರ. ಕಳೆದ ಮೂವತ್ತು ವರ್ಷಗಳಿಂದ ಹೊಸ ಮದ್ಯದ ಅಂಗಡಿ ಪ್ರಾರಂಭಕ್ಕೆ ಅನುಮತಿ ನೀಡಿರಲಿಲ್ಲ. ಅನೇಕರು ಪರವಾನಿಗೆಯನ್ನು 4ರಿಂದ 5 ಕೋಟಿ ರೂ.ಗೆ ಮಾರುತ್ತಿದ್ದಾರೆ’ ಎಂದು ಅಭಿಪ್ರಾಯಪಟ್ಟಿದ್ದಾರೆ. ಉದ್ಯೋಗ ಸೃಷ್ಟಿ ಮಾಡಬೇಕು. ಎಲ್ಲಿ ಮದ್ಯದ ಅಂಗಡಿ ತೆರೆಯಬೇಕೆಂಬುದನ್ನು ಚರ್ಚೆ ಮಾಡುತ್ತೇವೆ. ಹಾಗೆಂದು ಹಳ್ಳಿ ಹಳ್ಳಿಗಳಲ್ಲಿ ಮದ್ಯದಂಗಡಿ ತೆರೆಯಲು ಸಾಧ್ಯವಿಲ್ಲ. ಮದ್ಯಪಾನ ವನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಹಿತ ಎಲ್ಲರ ಜತೆ ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.