![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 7, 2023, 11:29 PM IST
ಬೆಂಗಳೂರು: ಗರ್ಭಕಂಠದ ಕ್ಯಾನ್ಸರ್ ಮುಕ್ತ ಕರ್ನಾಟಕ ನಿರ್ಮಾಣ ಆರೋಗ್ಯ ಇಲಾಖೆಯ ಗುರಿಯಾಗಿದೆ. ಪರಿಣಾಮಕಾರಿ ಸ್ಕ್ರೀನಿಂಗ್, ವ್ಯಾಕ್ಸಿನೇಷನ್ ಮತ್ತು ಆರಂಭಿಕ ಹಂತದ ಚಿಕಿತ್ಸೆ ನಿರ್ಣಾಯಕ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಎಫ್ಐಎನ್ಡಿ ಶುಕ್ರವಾರ ನಗರದ ಹೊಟೇಲ್ನಲ್ಲಿ ಆಯೋಜಿಸಿದ್ದ ಕರ್ನಾಟಕದಲ್ಲಿ ಗರ್ಭಕಂಠ ಕ್ಯಾನ್ಸರ್ ಸ್ಕ್ರೀನಿಂಗ್ ಬಲಪಡಿಸುವ ಕುರಿತು ರಾಜ್ಯ ಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆಯು ಪ್ರಾರಂಭಿಕ ಹಂತದಲ್ಲಿಯೇ ಅದನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದೆ. ಜತೆಗೆ ಇದರಿಂದ ಮುಕ್ತಿ ಪಡೆಯಲು ಅಗತ್ಯವಿರುವ ಮಾರ್ಗಸೂಚಿ ರಚಿಸಲು ಆರೋಗ್ಯ ಇಲಾಖೆ ಬದ್ಧವಾಗಿದೆ ಎಂದು ವಿವರಿಸಿದರು. ಆಕ್ಸೆಸ್ ಎಫ್ಐಎನ್ಡಿನ ಉಪಾಧ್ಯಕ್ಷ ಡಾ| ಸಂಜಯ್ ಸರಿನ್ ಮಾತನಾಡಿ, ಎಫ್ಐಎನ್ಡಿ ಎಚ್ಪಿವಿಯು ಸ್ಕ್ರೀನಿಂಗ್ ಮೂಲಕ ಕ್ಯಾನ್ಸರ್ ಪತ್ತೆ ಹಚ್ಚಲು ಮುಂದಾಗಿದ್ದು, ಆ ಮೂಲಕ ಡಬ್ಲೂéಎಚ್ಒನ ಗರ್ಭಕಂಠದ ಕ್ಯಾನ್ಸರ್ ನಿರ್ಮೂಲನೆ ಗುರಿ ಸಾಧಿಸಲು ಸಹಕಾರ ನೀಡಲಾಗುತ್ತದೆ ಎಂದು ಹೇಳಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.