Gastroenteritis: ಹೊಟ್ಟೆಗೆ ಜ್ವರ ಬಂದರೆ…!


Team Udayavani, Oct 8, 2023, 8:34 AM IST

2-health

ಗ್ಯಾಸ್ಟ್ರೊಎಂಟರೈಟಿಸ್‌ ಎಂಬುದನ್ನು ಸರಳವಾಗಿ ಹೊಟ್ಟೆಯ ಜ್ವರ ಎಂಬುದಾಗಿಯೂ ಹೇಳಬಹುದು; ಇದು ಕರುಳಿನಲ್ಲಿ ಉಂಟಾಗುವ ವೈರಾಣು ಸೋಂಕಿನಿಂದ ಕಾಣಿಸಿಕೊಳ್ಳುತ್ತದೆ. ಸೋಂಕುಪೀಡಿತ ವ್ಯಕ್ತಿಯ ಸಂಪರ್ಕ ಅಥವಾ ಕಲುಷಿತ ನೀರು, ಆಹಾರದಿಂದ ಇದು ಹರಡುತ್ತದೆ. ಮಳೆಗಾಲದಲ್ಲಿ ಕೊಳಕು ನೀರು ಕುಡಿಯುವ ನೀರಿನ ಜತೆಗೆ ಸೇರಿಕೊಳ್ಳುವುದರಿಂದಾಗಿ ಸಾಮಾನ್ಯವಾಗಿ ಮಳೆಗಾಲದಲ್ಲಿ ಇದರ ಉಪದ್ರವ ಹೆಚ್ಚು.

ಸಾಮಾನ್ಯವಾಗಿ ಸರಿಯಾದ ಆರೈಕೆ ಒದಗಿಸಿದರೆ ಇದು ತಾನಾಗಿಯೇ ವಾಸಿಯಾಗುತ್ತದೆ. ಈ ಕಾಯಿಲೆಯ ಬಹಳ ಸಾಮಾನ್ಯವಾದ ಲಕ್ಷಣ ಎಂದರೆ ರಕ್ತಮಿಶ್ರಿತವಲ್ಲದ, ಆದರೆ ನೀರಾದ ಮಲವಿಸರ್ಜನೆಯ ಜತೆಗೆ ಹೊಟ್ಟೆ ತೊಳೆಸುವಿಕೆ ಮತ್ತು ವಾಂತಿ. ಇವುಗಳ ಜತೆಗೆ ಹೊಟ್ಟೆ ನೋವು ಮತ್ತು ಕರುಳು ಹಿಡಿದುಕೊಳ್ಳುವುದೂ ಇರಬಹುದು. ಕೆಲವರಲ್ಲಿ ಜ್ವರ ಕಾಣಿಸಿಕೊಳ್ಳಬಹುದು. ಆಗೀಗೊಮ್ಮೆ ತಲೆನೋವು ಮತ್ತು ಮೈಕೈ ನೋವು ಕೂಡ ಇರಬಹುದಾಗಿದೆ. ರೋಗಿಗಳು ಸಾಮಾನ್ಯವಾಗಿ ಒಂದೆರಡು ದಿನಗಳಲ್ಲಿ ಚೇತರಿಸಿಕೊಳ್ಳುತ್ತಾರೆ; ಆದರೆ ಕೆಲವೊಮ್ಮೆ ಲಕ್ಷಣಗಳು ಒಂದು ವಾರದವರೆಗೂ ಇರಬಹುದು.

ಆದರೆ ಸಣ್ಣ ಮಕ್ಕಳು ಮತ್ತು ವಯೋವೃದ್ಧರಲ್ಲಿ ಹಾಗೂ ರೋಗ ನಿರೋಧಕ ಶಕ್ತಿಯು ದುರ್ಬಲವಾಗಿರುವವರಲ್ಲಿ ಈ ಹೊಟ್ಟೆಯ ಜ್ವರವು ಅಪಾಯಕಾರಿಯಾಗಿದ್ದು, ಲಕ್ಷಣಗಳು ಕಾಣಿಸಿಕೊಳ್ಳಲಾರಂಭಿಸಿದ ತತ್‌ಕ್ಷಣ ವೈದ್ಯಕೀಯ ಆರೈಕೆಯನ್ನು ಪಡೆದುಕೊಳ್ಳಬೇಕು. ಲಕ್ಷಣಗಳು ತೀವ್ರವಾಗಿದ್ದು, ಸೂಕ್ತವಾದ ಆರೈಕೆಯನ್ನು ಪಡೆಯದೆ ಇದ್ದಲ್ಲಿ ಅದರಿಂದ ಮೂತ್ರಪಿಂಡ ವೈಫ‌ಲ್ಯ, ರಕ್ತದೊತ್ತಡ ಕಡಿಮೆಯಾಗುವಂತಹ ಪ್ರಾಣಾಪಾಯಕಾರಿ ಸಮಸ್ಯೆಗಳು ತಲೆದೋರಬಹುದಾಗಿದೆ. ಮಲದಲ್ಲಿ ರಕ್ತ, ವಾಂತಿಯಾಗುವುದು, ನಿರ್ಜಲೀಕರಣದ ಲಕ್ಷಣಗಳು (ಬಾಯಾರಿಕೆ ಹೆಚ್ಚುವುದು, ಮೂತ್ರ ವಿಸರ್ಜನೆ ಕಡಿಮೆಯಾಗುವುದು, ಗಾಢ ಬಣ್ಣದ ಮೂತ್ರ) ಇತ್ಯಾದಿ ಎಚ್ಚರಿಕೆಯ ಲಕ್ಷಣಗಳು ಕಾಣಿಸಿಕೊಂಡರೆ ಅಥವಾ ಬೇಧಿ ಒಂದೆರಡು ದಿನಗಳಿಗಿಂತ ಹೆಚ್ಚು ಕಾಲ ಇದ್ದಲ್ಲಿ ತತ್‌ಕ್ಷಣ ವೈದ್ಯಕೀಯ ಆರೈಕೆಗೆ ಒಳಗಾಗಬೇಕು.

ಈ ಅನಾರೋಗ್ಯದ ಸಮಯದಲ್ಲಿ ಆರೈಕೆಯ ಪ್ರಧಾನ ವಿಧಾನವೆಂದರೆ ಸಾಕಷ್ಟು ನೀರು ಕುಡಿಯುವ ಮೂಲಕ ದೇಹದಲ್ಲಿ ನೀರಿನಂಶ ಕುಸಿಯದಂತೆ ಕಾಪಾಡಿಕೊಳ್ಳುವುದು ಮತ್ತು ಜೀರ್ಣಗೊಳ್ಳಲು ಸುಲಭವಾದ ಲಘು-ಮೃದು ಆಹಾರ ಸೇವನೆ. ಕಾಫಿ, ಹಾಲು, ಸೋಡಾ ಪಾನೀಯಗಳು, ಮಸಾಲೆ ಹಾಗೂ ಎಣ್ಣೆಪದಾರ್ಥಗಳ ಸೇವನೆ ಕಡಿಮೆ ಮಾಡಿ. ಶಕ್ತಿಯ ತತ್‌ಕ್ಷಣದ ಮೂಲವಾಗಬಲ್ಲ ಹಣ್ಣಿನ ರಸಗಳು, ಪ್ರೊಬಯೋಟಿಕ್ಸ್‌ ಮೂಲವಾಗಿರುವ ಮಜ್ಜಿಗೆಯನ್ನು ಸೇವಿಸಬಹುದು. ಚೇತರಿಸಿಕೊಳ್ಳುವ ತನಕ ಸಾಕಷ್ಟು ವಿಶ್ರಾಂತಿ ಪಡೆಯಿರಿ ಮತ್ತು ದೇಹ ದಣಿಯುವಂತಹ, ದೇಹ ದಂಡಿಸುವ ಕೆಲಸಗಳಲ್ಲಿ ತೊಡಗಬೇಡಿ.

ರೋಗ ಬಂದ ಬಳಿಕ ಚಿಕಿತ್ಸೆ ಪಡೆದುಕೊಳ್ಳುವುದಕ್ಕಿಂತ ರೋಗ ಬಾರದಂತೆ ತಡೆಯುವುದೇ ಅತ್ಯಂತ ಸೂಕ್ತ. ಹಾಗಾಗಿ ಊಟ-ಉಪಾಹಾರ ಸೇವಿಸುವುದಕ್ಕೆ ಮುನ್ನ ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳುವುದು, ಕುದಿಸಿ ಆರಿಸಿದ ನೀರನ್ನೇ ಕುಡಿಯುವುದು, ಆಹಾರವನ್ನು ಸರಿಯಾಗಿ ಬೇಯಿಸಿ, ಕುದಿಸಿ ಸೇವಿಸುವಂತಹ ವೈಯಕ್ತಿಕ ನೈರ್ಮಲ್ಯ ಕ್ರಮಗಳನ್ನು ಪಾಲಿಸುವುದು ಉತ್ತಮ.

-ಡಾ| ಅನುರಾಗ್‌ ಶೆಟ್ಟಿ,

ಮೆಡಿಕಲ್‌ ಗ್ಯಾಸ್ಟ್ರೊಎಂಟರಾಲಜಿ,

ಕೆಎಂಸಿ ಆಸ್ಪತ್ರೆ, ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತ, ಮಂಗಳೂರು

(ಈ ಲೇಖನದಲ್ಲಿರುವ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: ಮುಖ್ಯಸ್ಥರು, ಗ್ಯಾಸ್ಟ್ರೊಎಂಟರಾಲಜಿ ವಿಭಾಗ, ಕೆಎಂಸಿ ಆಸ್ಪತ್ರೆ, ಮಂಗಳೂರು)

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.