Kannada cinema: ‘ತಾರಿಣಿ’ ಎಂಬ ತುಂಬು ಗರ್ಭಿಣಿ ಕಥೆ


Team Udayavani, Oct 8, 2023, 5:04 PM IST

ತಾರಿಣಿ ಎಂಬ ತುಂಬು ಗರ್ಭಿಣಿ ಕಥೆ

ಸಾಮಾನ್ಯವಾಗಿ ಸಿನಿಮಾದಲ್ಲಿ ಹೀರೋಯಿನ್ಸ್‌ ಸ್ಲಿಮ್‌ ಆಗಿಯೂ, ಗ್ಲಾಮರಸ್‌ ಆಗಿಯೂ ಇರುವಂಥ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲು ಬಯಸುತ್ತಾರೆ. ಹೀಗಾಗಿಯೇ ಅನೇಕ ನಾಯಕಿಯರು ಮದುವೆಯಾದ ನಂತರ ಅಥವಾ ಮಕ್ಕಳಾದ ನಂತರ ತೆರೆಮರೆಗೆ ಸರಿಯುತ್ತಾರೆ. ಆದರೆ ನಟಿ ಮಮತಾ ರಾಹುತ್‌ ಮಾತ್ರ ಈ ವಿಷಯದಲ್ಲಿ ವಿಭಿನ್ನ. ನಿಜ ಜೀವನದಲ್ಲಿ ತಾನು ಗರ್ಭಿಣಿಯಾಗಿದ್ದಾಗಲೇ ನಟಿ ಮಮತಾ ರಾಹುತ್‌, ತೆರೆಮೇಲೆ ಕೂಡ ಗರ್ಭಿಣಿ ಪಾತ್ರದಲ್ಲೇ ಕಾಣಿಸಿಕೊಂಡಿದ್ದಾರೆ.

ಹೌದು, ಸಿದ್ದು ಪೂರ್ಣಚಂದ್ರ ನಿರ್ದೇಶನದ “ತಾರಿಣಿ’ ಗರ್ಭಿಣಿಯ ಕುರಿತಾದ ಕಥಾಹಂದರ ಹೊಂದಿದ ಸಿನಿಮಾ. ಈ ಸಿನಿಮಾದಲ್ಲಿ ಗರ್ಭಿಣಿಯಾಗಿದ್ದ ನಟಿ ಮಮತಾ ರಾಹುತ್‌, ತೆರೆಮೇಲೆ ಕೂಡ ಗರ್ಭಿಣಿ ಪಾತ್ರವನ್ನು ನಿಭಾಯಿಸಿದ್ದಾರೆ. ಈಗಾಗಲೇ “ತಾರಿಣಿ’ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣ ಗೊಂಡಿದ್ದು, ಇತ್ತೀಚೆಗೆ ಈ ಸಿನಿಮಾದ ಫ‌ಸ್ಟ್‌ಲುಕ್‌ ಬಿಡುಗಡೆಯಾಯಿತು. ಹಿರಿಯ ಸಾಹಿತಿ, ಹೋರಾಟಗಾರ್ತಿ ಮತ್ತು ಮಾಜಿ ಸಚಿವೆ ಬಿ. ಟಿ. ಲಲಿತಾ ನಾಯಕ್‌ ಸೇರಿದಂತೆ ಹಲವು ಗಣ್ಯರು “ತಾರಿಣಿ’ ಸಿನಿಮಾದ ಫ‌ಸ್ಟ್ ಲುಕ್‌ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದೇ ವೇಳೆ ಮಾತನಾಡಿದ “ತಾರಿಣಿ’ ಸಿನಿಮಾದ ನಿರ್ದೇಶಕ ಸಿದ್ದು ಪೂರ್ಣಚಂದ್ರ, “ಇದೊಂದು ಗರ್ಭಿಣಿಯ ಸುತ್ತ ನಡೆಯುವ ಸಿನಿಮಾ. ನಾಯಕಿ ಮಮತಾ ರಾಹುತ್‌ ತುಂಬು ಗರ್ಭಿಣಿ ಇರುವಾಗಲೇ ಈ ಸಿನಿಮಾದ ಪಾತ್ರವನ್ನು ನಿರ್ವಹಿಸಿರು ವುದು ವಿಶೇಷ. ಅಷ್ಟೇ ಅಲ್ಲದೇ ಮಗುವಾದ ನಂತರದ ಸನ್ನಿವೇಶಗಳೂ ಈ ಸಿನಿಮಾ ದಲ್ಲಿದ್ದು, ಆ ದೃಶ್ಯಗಳಲ್ಲೂ ಮಮತಾ ರಾಹುತ್‌ ಮತ್ತು ಅವರ ಮಗು ಇಬ್ಬರೂ ಸಿನಿಮಾದಲ್ಲಿ ಅಭಿನಯಿಸಿದ್ದಾರೆ’ ಎಂದು ತೆರೆಹಿಂದಿನ ಕಥೆ ವಿವರಿಸಿದರು.

“ನಿರ್ದೇಶಕರು ಹೇಳಿದ ಕಥೆ ಕೇಳಿ ತುಂಬ ಇಷ್ಟವಾಯಿತು. ಹಾಗಾಗಿ ಏಳು ತಿಂಗಳ ಗರ್ಭಿಣಿ ಇದ್ದಾಗಲೇ ಈ ಪಾತ್ರವನ್ನು ಮಾಡಬೇಕೆಂದು ನಿರ್ಧರಿಸಿದ್ದೆ. ಅದರಂತೆ ಶೂಟಿಂಗ್‌ನಲ್ಲೂ ಪಾಲ್ಗೊಂಡೆ. ಕೆಲವು ದಿನಗಳ ಚಿತ್ರೀಕರಣ ನಂತರ ನನಗೆ ಅವಧಿಗೂ ಮುನ್ನವೇ ಹೆರಿಗೆ ಆಯಿತು. ಆನಂತರ ಕೂಡ ನಾನು ಚಿತ್ರೀಕರಣದಲ್ಲಿ ಭಾಗಿಯಾದೆ. ನನ್ನ ಮಗು ಕೂಡ ಈ ಚಿತ್ರದಲ್ಲಿ ಅಭಿನಯಿಸಿದೆ’ ಎನ್ನುವುದು ನಟಿ ಮಮತಾ ರಾಹುತ್‌ ಮಾತು.

ಹೆಣ್ಣು ಭ್ರೂಣ ಹತ್ಯೆ ಮಾಡಬೇಡಿ ಎಂಬ ಸಾಮಾಜಿಕ ಸಂದೇಶವಿರುವ ಈ ಚಿತ್ರವನ್ನು ಮಮತಾ ರಾಹುತ್‌ ಪತಿ ಸುರೇಶ್‌ ಕೊಟ್ಯಾನ್‌ ಚಿತ್ರಾಪು “ಶ್ರೀಗಜನಿ ಪ್ರೊಡಕ್ಷನ್ಸ್‌’ ಲಾಂಛನದಲ್ಲಿ ನಿರ್ಮಿಸಿದ್ದಾರೆ. ಮಮತಾ ರಾಹುತ್‌ ಜೊತೆಗೆ ರೋಹಿತ್‌, ಭವಾನಿ ಪ್ರಕಾಶ್‌, ಸುಧಾ ಪ್ರಸನ್ನ, ಡಾ. ಸುರೇಶ್‌ ಚಿತ್ರಾಪು, ಪ್ರಮಿಳಾ ಸುಬ್ರಹ್ಮಣ್ಯಂ, ವಿಜಯಲಕ್ಷ್ಮೀ, ದೀಪಿಕಾ ಗೌಡ, ಸನ್ನಿ, ತೇಜಸ್ವಿನಿ, ಕವಿತಾ ಕಂಬಾರ್‌, ಬೇಬಿ ನಿಶಿತಾ, ಬೇಬಿ ರಿಧಿ, ಪ್ರಿನ್ಸ್‌ ಜಿತಿನ್‌ ಕೋಟ್ಯಾನ್‌, ಮಟಿಲ್ಡಾ ಡಿಸೋಜ, ಅರ್ಚನಾ ಗಾಯ ಕ್ವಾಡ್‌, ಶೀಬಾ ಮೂರ್ತಿ, ಶ್ವೇತಾ, ಚೈತ್ರಾ, ಮಂಜು ನಂಜನಗೂಡು, ರಘು ಸಮರ್ಥ್ ಮುಂತಾ ದವರು “ತಾರಿಣಿ’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.