Belagavi: ವೀರಶೈವ ಲಿಂಗಾಯತ ಒಳಪಂಗಡಗಳನ್ನು ಒಬಿಸಿ ಪಟ್ಟಿಗೆ ಸೇರ್ಪಡೆಗೆ ಹಕ್ಕೊತ್ತಾಯ
Team Udayavani, Oct 8, 2023, 5:49 PM IST
ಬೆಳಗಾವಿ: ಇಲ್ಲಿನ ಗಾಂಧಿಭವನದಲ್ಲಿ ನಡೆದ ಶ್ರೀಶೈಲ ಪೀಠದ ಜಗದ್ಗುರುಗಳ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ವೀರಶೈವ ಲಿಂಗಾಯತ ಒಳಪಂಗಡಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರ್ಪಡೆಗೆ ಹಕ್ಕೊತ್ತಾಯ ಮಾಡಲಾಯಿತು.
ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮಠಾಧೀಶರು ಒತ್ತಾಯಿಸಿದರು. ಶಿಫಾರಸು ಮಾಡಲು ವಿಳಂಬ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಹೋರಾಟ ಮಾಡುವ ನಿರ್ಣಯ ವೀರಶೈವ ಲಿಂಗಾಯತ ಮಠಾಧೀಶರು ಕೈಗೊಂಡರು.
ರಾಜ್ಯ ಸರ್ಕಾರ ಮಾಡುವ ಶಿಫಾರಸನ್ನು ತಕ್ಷಣವೇ ಅಂಗೀಕಾರ ಮಾಡಬೇಕೆಂದು ಕೇಂದ್ರಕ್ಕೂ ಒತ್ತಾಯ ಮಾಡಲಾಯಿತು. ದಾವಣಗೆರೆಯಲ್ಲಿ ನಡೆಯುವ ವೀರಶೈವ ಮಹಾಸಭಾದ ಸಮಾವೇಶದಲ್ಲಿ ಪ್ರತಿಭಟನೆಯ ದಿನಾಂಕ ಘೋಷಣೆ ಮಾಡಲು ನಿರ್ಧರಿಸಲಾಯಿತು.
ಶ್ರೀಶೈಲ ಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಜಗದ್ಗುರು, ಶಿರಹಟ್ಟಿಯ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
25ಕ್ಕೂ ಅಧಿಕ ವೀರಶೈವ ಲಿಂಗಾಯತ ಸ್ವಾಮೀಜಿಗಳು ಸಮಾವೇಶದಲ್ಲಿ ಭಾಗಿಯಾಗಿದ್ದರು. ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಶಾಸಕ ಮಹಾಂತೇಶ ಕೌಜಲಗಿ, ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕರಾದ ಮಹಾದೇವಪ್ಪ ಯಾದವಾಡ, ಡಾ. ವಿಶ್ವನಾಥ ಪಾಟೀಲ ಸಮಾವೇಶದಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.