Mangaluru ತಣ್ಣೀರುಬಾವಿಯಲ್ಲಿ ಕಡಲಜೀವಿಗಳಿಗೊಂದು ಸಂರಕ್ಷಣ ಕೇಂದ್ರ


Team Udayavani, Oct 9, 2023, 7:30 AM IST

Mangaluru ತಣ್ಣೀರುಬಾವಿಯಲ್ಲಿ ಕಡಲಜೀವಿಗಳಿಗೊಂದು ಸಂರಕ್ಷಣ ಕೇಂದ್ರ

ಮಂಗಳೂರು: ರಾಜ್ಯದಲ್ಲೇ ಮೊದಲ ಬಾರಿಗೆ ಕಡಲಜೀವಿಗಳ ಸಂರಕ್ಷಣ ಕೇಂದ್ರವನ್ನು ಮಂಗಳೂರಿನಲ್ಲಿ ಸ್ಥಾಪಿಸಲಾಗುತ್ತಿದೆ.

ಕಾಂಪಾ ಫಂಡ್‌(ಭಾರತದ ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ)ನಡಿಯಲ್ಲಿ 17 ಲಕ್ಷ ರೂ. ವೆಚ್ಚದಲ್ಲಿ ಈಗಾಗಲೇ ಕೇಂದ್ರವನ್ನು ತಣ್ಣೀರುಬಾವಿ ಕಡಲ ಬಳಿ ನಿರ್ಮಿಸಲಾಗುತ್ತಿದ್ದು ಬಹುತೇಕ ಪೂರ್ಣವಾಗಿದೆ.

ಮಂಗಳೂರಿನ ಸುತ್ತಮುತ್ತ ಸಮುದ್ರದಲ್ಲಿ ಗಾಯಗೊಳ್ಳುವ ಕಡಲ ಜೀವಿಗಳನ್ನು ಇಲ್ಲಿಗೆ ತಂದು ಚಿಕಿತ್ಸೆ ನೀಡಿ ಮತ್ತೆ ಕಡಲಿಗೆ ಬಿಡುವುದು ಉದ್ದೇಶ. ಮೀನುಗಾರರ ಬಲೆಗಳಿಗೆ ಸಿಲುಕಿಯೋ, ಬೋಟ್‌ನ ಪ್ರಾಪೆಲ್ಲರ್‌ ಚಕ್ರಗಳಿಗೆ ಬಡಿದೋ ಡಾಲ್ಫಿನ್‌, ಶಾರ್ಕ್‌, ಕಡಲಾಮೆಗಳಂತಹ ಜೀವಿಗಳು ಗಾಯಗೊಳ್ಳುವ, ಸರಿಯಾದ ಚಿಕಿತ್ಸೆ ಸಿಗದೆ ಪ್ರಾಣ ಕಳೆದುಕೊಳ್ಳುವ ಪ್ರಮೇಯಗಳು ಆಗಾಗ ಬರುತ್ತವೆ.

ಇಂತಹ ಸನ್ನಿವೇಶಗಳಲ್ಲಿ ಚಿಕಿತ್ಸೆ ನೀಡುವಂತಹ ಮೂಲಸೌಕರ್ಯ ಗಳಾಗಲೀ, ತಜ್ಞರಾಗಲೀ ನಮ್ಮಲ್ಲಿಲ್ಲ. ಇದನ್ನು ಗಮನದಲ್ಲಿರಿಸಿಕೊಂಡು ತಣ್ಣೀರುಬಾವಿಯಲ್ಲಿ ಈ ಕೇಂದ್ರವನ್ನು ನಿರ್ಮಾಣ ಮಾಡಲಾಗುತ್ತಿದೆ.

ರಾಜ್ಯಕ್ಕೆ ಮೊದಲ ಕೇಂದ್ರ
ಪ್ರಸ್ತುತ ರಾಜ್ಯದಲ್ಲೆಲ್ಲೂ ಇಂತಹ ಕಡಲ ಜೀವಿಗಳ ಸಂರಕ್ಷಣ ಕೇಂದ್ರವಿಲ್ಲ. ಒಡಿಶಾ, ತಮಿಳುನಾಡು, ಗುಜರಾತ್‌ಗಳಲ್ಲಿ ಇವೆ. ನಮ್ಮಲ್ಲಿ 370 ಕಿ.ಮೀ. ಉದ್ದದ ಕಡಲ ತೀರ ಇರುವ ಕಾರಣ ಅಂತಹ ಕೇಂದ್ರ ಸ್ಥಾಪನೆಗೆ ಅರಣ್ಯ ಇಲಾಖೆ ಮುಂದಾಗಿದೆ. ಯೋಜನೆಗೆ ಅನುಮೋದನೆ ಸಿಕ್ಕಿ ಅನುದಾನ ಬಿಡುಗಡೆಯಾದ ಬಳಿಕ ತಜ್ಞರನ್ನು ನಿಯೋಜಿಸಿ ಕೇಂದ್ರವನ್ನು ಕಾರ್ಯಾ ರಂಭಿಸುವುದು ಇಲಾಖೆಯ ಸದ್ಯದ ಗುರಿ.ಮೆರೈನ್‌ ಸೆಲ್‌ಗೆ ಮರು ಜೀವ: 2 ವರ್ಷ ಹಿಂದೆ ಕಾರವಾರದಲ್ಲಿ ಅರಣ್ಯ ಇಲಾಖೆಯ ಅಧೀನದಲ್ಲಿ ಮೆರೈನ್‌ ಸೆಲ್‌ ತೆರೆಯಲಾಗಿತ್ತು. ಕಡಲ ಜೀವಿಗಳು ಗಾಯಗೊಂಡು ಬಂದು ದಡಕ್ಕೆ ಬೀಳುವಾಗ ಅವುಗಳ ಗುರುತಿಸುವಿಕೆ, ಕಡಲಿನಲ್ಲಿ ಬೇಟೆ ತಡೆ ಇತ್ಯಾದಿ ನಿಯಂತ್ರಣದ ಉದ್ದೇಶದಿಂದ ಇದನ್ನು ಆರಂಭಿಸಲಾಗಿದೆ. ಇದು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾದರೆ ಸೂಕ್ತ ತರಬೇತಾದ ಸಿಬಂದಿ ಅಗತ್ಯ.

ಕಡಲ ಬದಿಯಲ್ಲಿದ್ದರೆ ಸೂಕ್ತ
ಸಂರಕ್ಷಣ ಕೇಂದ್ರವು ತಣ್ಣೀರುಬಾವಿಯ ಟ್ರೀಪಾರ್ಕ್‌ನ ಮುಂಭಾಗದಲ್ಲಿದೆ. ಕಡಲಿನಿಂದ ತುಸು ದೂರದಲ್ಲಿರುವುದರಿಂದ ಅಲ್ಲಿಗೆ ಗಾಯಗೊಂಡ ದೊಡ್ಡಗಾತ್ರದ ಜೀವಿಗಳನ್ನು ಸಾಗಿಸುವುದು ಕಷ್ಟವಾಗಬಹುದು. ಕಡಲ ಪಕ್ಕದಲ್ಲೇ ಮಾಡಿದ್ದರೆ ಸುಲಭವವಾಗುತ್ತಿತ್ತು. ಇನ್ನುಳಿದ ದಾರಿಯೆಂದರೆ ಅಲ್ಲಿರುವ ಕೆರೆಯೊಂದನ್ನು ಬಳಸಿಕೊಂಡು ದೊಡ್ಡ ಜೀವಿಗಳಿಗೆ ಚಿಕಿತ್ಸೆ ನೀಡುವುದು ಹಾಗೂ ಸಣ್ಣ ಕಡಲಪ್ರಾಣಿಗಳನ್ನು ಕೇಂದ್ರಕ್ಕೆ ಸಾಗಿಸುವುದು.

ಈಗ ಬರುವ ಕಡಲ ಜೀವಿಗಳನ್ನು ತೀರದಿಂದ ಒಳಗೆ ಕರೆತಂದು ಚಿಕಿತ್ಸೆ ನೀಡುವ ವ್ಯವಸ್ಥೆ ಇನ್ನೂ ಇಲ್ಲ, ಏನಿದ್ದರೂ ತಜ್ಞರನ್ನು ಕರೆಸಿ, ಕಡಲ ಬದಿಯಲ್ಲೇ ತಾತ್ಕಾಲಿಕ ಚಿಕಿತ್ಸೆ ನೀಡುವುದಷ್ಟೇ ನಡೆಯುತ್ತಿದೆ. ಕೇಂದ್ರ ಸ್ಥಾಪನೆಯಾದರೆ ಕೆಲಕಾಲ ಆರೈಕೆ ಮಾಡಿ ಅವುಗಳನ್ನು ರಕ್ಷಿಸಬಹುದಾದ ಸಾಧ್ಯತೆ ಹೆಚ್ಚಾಗಲಿದೆ.
-ಆ್ಯಂಟನಿ ಮರಿಯಪ್ಪ, ಡಿಸಿಎಫ್‌,
ಮಂಗಳೂರು ಅರಣ್ಯ ಇಲಾಖೆ

ಡಾಲ್ಫಿನ್‌ಗಳಿಗೆ ಗಾಯವಾಗುವುದು ಕಡಿಮೆ, ಕಡಲಾಮೆಗಳಿಗೆ ರಕ್ಷಣೆ ಅಗತ್ಯವಿದೆ, ಕೇಂದ್ರ ಸ್ಥಾಪನೆ ಮಾಡಿದರೆ ಸಾಲದು, ಸಮುದಾಯದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ
ಕೆಲಸವೂ ಆಗಬೇಕಿದೆ.
– ಯತೀಶ್‌ ಬೈಕಂಪಾಡಿ, ಬೀಚ್‌ ಪ್ರವಾಸೋದ್ಯಮ ತಜ್ಞ

-ವೇಣುವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.