Rain ಕರಾವಳಿಯ ವಿವಿಧೆಡೆ ಸಿಡಿಲು ಸಹಿತ ಮಳೆ, ಕೆಲವೆಡೆ ಹಾನಿ
Team Udayavani, Oct 8, 2023, 11:15 PM IST
ಮಂಗಳೂರು/ಉಡುಪಿ: ಕರಾವಳಿಯ ಕೆಲವು ಭಾಗಗಳಲ್ಲಿ ರವಿವಾರ ಸಂಜೆಯ ವೇಳೆಗೆ ಉತ್ತಮ ಮಳೆಯಾಗಿದೆ. ಕೆಲವು ಕಡೆ ಹಾನಿ ಕೂಡ ಸಂಭವಿಸಿದೆ. ಕಡಬ ತಾಲೂಕಿನ ಕೊಂಬಾರು ಪರಿಸರದಲ್ಲಿ ಸಂಜೆ 4.30ರಿಂದ 6ರ ವರೆಗೆ ಗುಡುಗು, ಸಿಡಿಲು, ಗಾಳಿ ಸಹಿತ ಧಾರಾಕಾರ ಮಳೆ ಬಂದಿದೆ.ಕೈಕಂಬ ಸೇತುವೆ ಮೇಲೆ ನೀರು ಹರಿದು ಸ್ವಲ್ಪ ಕಾಲ ವಾಹನ ಸಂಚಾರಕ್ಕೆ ತಡೆಯುಂಟಾಯಿತು.
ಬೆಳ್ತಂಗಡಿ ತಾಲೂಕಿನ ನಾರಾವಿ ಪರಿಸರದಲ್ಲಿ, ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಕಾರ್ಕಳ ನಗರ, ಮಾಳ, ಬಜಗೋಳಿ, ಬೈಲೂರು ಇರ್ವತ್ತೂರು, ನಕ್ರೆ, ಪಳ್ಳಿ, ಕೆರ್ವಾಸೆ, ಮುಂಡ್ಲಿ ಮತ್ತಿತರ ಪ್ರದೇಶಗಳಲ್ಲಿ ಮಧ್ಯಾಹ್ನದ ಬಳಿಕ ಉತ್ತಮ ಮಳೆಯಾಗಿದೆ.
ಉಡುಪಿ, ಮಣಿಪಾಲ, ಪರ್ಕಳ, ಕುಂದಾಪುರ, ಕುಂಭಾಶಿ, ತೆಕ್ಕಟ್ಟೆ, ಕೋಟೇಶ್ವರ, ಬೀಜಾಡಿ, ಗೋಪಾಡಿ, ವಕ್ವಾಡಿ ಪರಿಸರದಲ್ಲಿಯೂ ಸಂಜೆ ಬಳಿಕ ಸ್ವಲ್ಪ ಸಮಯ ಉತ್ತಮ ಮಳೆ ಸುರಿಯಿತು.
ಮಂಗಳೂರು ನಗರದಲ್ಲಿ ಸಂಜೆ ವೇಳೆ ಮೋಡ ಕವಿದ ವಾತಾವರಣ ಕಂಡು ಬಂದಿತ್ತು. ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 30.8 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ಎರಡು ದಿನ ಜಿಲ್ಲೆಯ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.