![Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?](https://www.udayavani.com/wp-content/uploads/2024/07/vijayapura-3-415x249.jpg)
New Jersey: ಜಗತ್ತಿನ ದೊಡ್ಡ ಹಿಂದೂ ದೇವಾಲಯ ಲೋಕಾರ್ಪಣೆ
Team Udayavani, Oct 8, 2023, 11:30 PM IST
![aksharadhama nj](https://www.udayavani.com/wp-content/uploads/2023/10/aksharadhama-nj-620x355.jpg)
ನ್ಯೂಜೆರ್ಸಿ: ಆಧುನಿಕ ಜಗತ್ತಿನಲ್ಲೇ ಅತ್ಯಂತ ದೊಡ್ಡದು ಎಂದೇ ಖ್ಯಾತಿ ಹೊಂದಿರುವ, ಅಮೆರಿಕದ ನ್ಯೂಜೆರ್ಸಿಯಲ್ಲಿ ನಿರ್ಮಾಣಗೊಂಡಿರುವ ಅಕ್ಷರಧಾಮ ದೇಗುಲವನ್ನು ರವಿವಾರ ಲೋಕಾರ್ಪಣೆ ಮಾಡಲಾಗಿದ್ದು, ಸೋಮವಾರದಿಂದ ಭಕ್ತರಿಗಾಗಿ ತೆರೆಯಲಿದೆ. ಆಧುನಿಕ ಕಾಲದಲ್ಲಿ ಭಾರತದಿಂದ ಹೊರಗೆ ನಿರ್ಮಿಸಲಾಗಿರುವ ಅತ್ಯಂತ ದೊಡ್ಡ ದೇಗುಲ ಎಂಬ ವಿಶೇಷವೂ ಇದಕ್ಕಿದೆ.
ಈ ದೇಗುಲವನ್ನು 12 ಸಾವಿರ ಸ್ವಯಂ ಸೇವಕರೇ ನಿರ್ಮಾಣ ಮಾಡಿದ್ದಾರೆ ಎಂಬುದು ವಿಶೇಷ. 183 ಎಕ್ರೆ ವಿಸ್ತೀರ್ಣದಲ್ಲಿ ಈ ಬಿಎಪಿಎಸ್ ಸ್ವಾಮಿನಾರಾಯಣ್ ಅಕ್ಷರಧಾಮ ದೇಗುಲವನ್ನು ನಿರ್ಮಿಸಲಾಗಿದೆ. ಒಟ್ಟಾರೆಯಾಗಿ 4.7 ದಶಲಕ್ಷ ಗಂಟೆ ಸಮಯವನ್ನು ಈ ದೇಗುಲದ ನಿರ್ಮಾಣಕ್ಕಾಗಿ ವಿನಿಯೋಗಿಸಲಾಗಿದೆ. ಇಟಲಿ ಮತ್ತು ಬಲ್ಗೇರಿಯಾದಿಂದ ಮಾರ್ಬಲ್ ಅನ್ನು ಭಾರತಕ್ಕೆ ತೆಗೆದುಕೊಂಡು ಹೋಗಿ, ಅಲ್ಲಿಂದ ಅಮೆರಿಕಕ್ಕೆ ತರಲಾಗಿದೆ. 2011ರಲ್ಲಿ ಈ ದೇಗುಲದ ನಿರ್ಮಾಣ ಕಾರ್ಯ ಆರಂಭವಾಗಿದ್ದು, ಈಗ ಮುಗಿದಿದೆ.
ಸದ್ಯ ಜಗತ್ತಿನಲ್ಲೇ ಅತ್ಯಂತ ದೊಡ್ಡ ಹಿಂದೂ ದೇಗುಲ ಸಂಕೀರ್ಣ ಎಂದು ಕಾಂಬೋಡಿಯಾದಲ್ಲಿರುವ ಆಂಗ್ಕರ್ ವಾಟ್ ಅನ್ನು ಗುರುತಿಸಲಾಗುತ್ತದೆ. ಇದನ್ನು 12ನೇ ಶತಮಾನದಲ್ಲಿ ನಿರ್ಮಿಸಲಾಗಿದೆ. ಇದು ಯುನೆಸ್ಕೋದ 1,119 ಪಾರಂಪರಿಕ ತಾಣಗಳಲ್ಲಿ ಒಂದಾಗಿದೆ. ಈಗ ಅಮೆರಿಕದ ನ್ಯೂಜೆರ್ಸಿಯ ರಾಬಿನ್ಸ್ವಿಲ್ಲೆಯಲ್ಲಿ ಬೋಚಾಸನ್ವಾಸಿ ಶ್ರೀ ಅಕ್ಷರ ಪುರುಷೋತ್ತಮ್ ಸ್ವಾಮಿನಾರಾಯಣ ಸಂಸ್ಥಾ ಅಥವಾ ಬಿಎಪಿಎಸ್ನವರು ಈ ದೇಗುಲವನ್ನು ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
![Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?](https://www.udayavani.com/wp-content/uploads/2024/07/vijayapura-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ](https://www.udayavani.com/wp-content/uploads/2024/07/17-1-150x90.jpg)
Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ
![Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?](https://www.udayavani.com/wp-content/uploads/2024/07/vijayapura-3-150x90.jpg)
Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?
![Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?](https://www.udayavani.com/wp-content/uploads/2024/07/Hemanth-150x86.jpg)
Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?
![ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?](https://www.udayavani.com/wp-content/uploads/2024/07/16-1-150x90.jpg)
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
![5-tavaragera](https://www.udayavani.com/wp-content/uploads/2024/07/5-tavaragera-150x90.jpg)
Tavaragera: ಕಾರು ಅಡ್ಡಗಟ್ಟಿ ಹಾಡಹಗಲೇ 5 ಲಕ್ಷ ರೂ. ದರೋಡೆ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.