Belthangady ಸಿರಿ ಉತ್ಪನ್ನ ಬೆಂಗಳೂರು ಮಾರುಕಟ್ಟೆಗೆ ಬಿಡುಗಡೆ


Team Udayavani, Oct 8, 2023, 11:33 PM IST

Belthangady ಸಿರಿ ಉತ್ಪನ್ನ ಬೆಂಗಳೂರು ಮಾರುಕಟ್ಟೆಗೆ ಬಿಡುಗಡೆ

ಬೆಳ್ತಂಗಡಿ: ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ತಯಾರಾಗುವ ಉತ್ಪನ್ನಗಳ ಹಿಂದೆ ಅನೇಕರ ಶ್ರಮವಿದೆ. ಸಾಮಾಜಿಕವಾಗಿ ಹಲವು ಕುಟುಂಬಗಳು ತಮ್ಮ ಬದುಕು ಕಟ್ಟಿಕೊಳ್ಳಲು ರೂಪಿಸಿದ ಕನಸಿನ ರೆಕ್ಕೆಯಾಗಿರುವ ಈ ಉತ್ಪನ್ನಗಳನ್ನು ಸಮಾಜಕ್ಕೆ ಪರಿಚಯಿಸಲಾಗಿದ್ದು, ಎಲ್ಲರೂ ಖರೀದಿಸುವ ಮೂಲಕ ಸಮುದಾಯಕ್ಕೆ ಶಕ್ತಿ ತುಂಬಿ ಎಂದು ಸಿರಿ ಸಂಸ್ಥೆ ಉತ್ಪನ್ನಗಳ ರಾಯಭಾರಿಯಾಗಿರುವ ನಟ ರಮೇಶ್‌ ಅರವಿಂದ್‌ ಹೇಳಿದರು.

ಬೆಂಗಳೂರಿನಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಧರ್ಮಸ್ಥಳ ಸಿರಿ ಸಂಸ್ಥೆಯಿಂದ ಮಾರುಕಟ್ಟೆಗೆ ಪರಿಚಯಿಸಿರುವ ನೂತನ ವಿವಿಧ ಉತ್ಪನ್ನ ಹಾಗೂ ಟಿ.ವಿ. ಮಾಧ್ಯಮಗಳ ಜಾಹೀರಾತುಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಸಿರಿ ಉತ್ಪನ್ನಗಳ ತಯಾರಿಯ ಹಿಂದಿರುವ ಗ್ರಾಮಾಭಿವೃದ್ಧಿಯ ಕಾಳಜಿ ಹಾಗೂ ಸಮಾಜ ಸೇವೆಯ ಉದ್ದೇಶ ಇಷ್ಟವಾಗಿ ಸಂಸ್ಥೆಯ ರಾಯಭಾರಿಯಾಗಲು ಒಪ್ಪಿಕೊಂಡೆ. ಗ್ರಾಮೀಣ ಭಾಗದಲ್ಲಿ ಮಹಿಳಾ ಸಶಕ್ತೀಕರಣ ಹಾಗೂ ಹಲವು ಉದ್ಯೋಗ ಸೃಷ್ಟಿಗೆ ಸಿರಿ ಸಂಸ್ಥೆ ನೆರವಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಎಲ್‌.ಎಚ್‌. ಮಂಜುನಾಥ್‌ ಮಾತನಾಡಿ, ಗ್ರಾಮೀಣ ಪ್ರದೇಶ ದಲ್ಲಿರುವ ಮಹಿಳೆಯರಿಗೆ ಸ್ವ-ಉದ್ಯೋಗ ಮತ್ತು ರೈತರಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸಲು ಸಿರಿ ಸಂಸ್ಥೆ ಅವಕಾಶ ಮಾಡಿಕೊಡುತ್ತಿದೆ. ಪ್ರಸ್ತುತ ಸಂಸ್ಥೆಯ ಉತ್ಪನ್ನಗಳ ಮಾರುಕಟ್ಟೆ ರಾಷ್ಟ್ರವ್ಯಾಪಿ ವಿಸ್ತರಿಸಿಕೊಳ್ಳುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

2004ರಲ್ಲಿ ಸಂಸ್ಥೆ ಆರಂಭ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆರವಿನೊಂದಿಗೆ 2004ರಲ್ಲಿ ಆರಂಭವಾದ ಸಿರಿ ಸಂಸ್ಥೆಯ ಉತ್ಪನ್ನಗಳು ಸಿರಿ ಬ್ರ್ಯಾಂಡ್‌ನ‌ಲ್ಲಿ ಮಾರಾಟವಾಗುತ್ತಿವೆ. ಪ್ರಸ್ತುತ ರಾಜ್ಯದ 200ಕ್ಕೂ ಅಧಿಕ ಹಿಂದುಳಿದ ಗ್ರಾಮಗಳಲ್ಲಿ ಉತ್ಪಾದನಾ ಘಟಕಗಳನ್ನು ಹೊಂದಿದ್ದು, 3 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗಾವಕಾಶ ಒದಗಿಸಿದೆ ಎಂದು ಡಾ| ಮಂಜುನಾಥ್‌ ತಿಳಿಸಿದರು.

ಎಸ್‌ಕೆಡಿಆರ್‌ಡಿಪಿ ಸಿಒಒ ಅನಿಲ್‌ ಕುಮಾರ್‌, ಕೊಡಗು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ| ಆಲೂರ್‌ ಮುಖ್ಯ ಅತಿಥಿಗಳಾಗಿದ್ದ‌ರು.ಸಿರಿ ಗ್ರಾಮೋದ್ಯೋಗ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್‌. ಜನಾರ್ದನ ಪ್ರಸ್ತಾವನೆಗೈದು, ಸ್ವಾಗತಿಸಿದರು. ನಿರೂಪಕಿ ಅಪರ್ಣಾ ಕಾರ್ಯಕ್ರಮ ನಿರ್ವಹಿಸಿದರು.

ನೂತನ ಉತ್ಪನ್ನಗಳು
ಮಿಲೆಟ್‌ ಬಿಸಿಬೇಳೆ ಬಾತ್‌, ಮಿಲೆಟ್‌ ನ್ಯೂಟ್ರಿ ಅಟಾ ಪ್ಯಾಕೆಟ್‌, ಮಿಲೆಟ್‌ ಕಷಾಯ, ಡಯಾಬೆಟಿಕ್‌ ಹೆಲ್ತ್‌ ಡ್ರಿಂಕ್‌, ಮಿಲೆಟ್‌ ಖಡಕ್‌ ರೋಟಿ, ಮಿಲೆಟ್‌ ಮುರುಕು, ಸಿರಿ ಅಡಿಕ್ಟೆಡ್‌ ಶರ್ಟ್‌ ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು.

ಗ್ರಾಮೀಣ ಭಾಗದ ಸಾವಿರಾರು ಮಹಿಳೆಯರು ಸಿರಿ ಸಂಸ್ಥೆಯ ನೆರವಿನೊಂದಿಗೆ ಬದುಕು ಕಟ್ಟಿಕೊಂಡಿದ್ದಾರೆ. ಸಂಸ್ಥೆಯ ವಿವಿಧ ಉತ್ಪನ್ನಗಳು ರಾಷ್ಟ್ರ ಮಟ್ಟದಲ್ಲಿ ದೊರಕುವಂತೆ ಮಾಡುವ ಗುರಿ ಇದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಹೊಸ ಉತ್ಪನ್ನಗಳು ಮಾರುಕಟ್ಟೆ ಪ್ರವೇಶಿಸಲಿವೆ.
– ಕೆ.ಎನ್‌. ಜನಾರ್ದನ, ವ್ಯವಸ್ಥಾಪಕ ನಿರ್ದೇಶಕ, ಸಿರಿ ಗ್ರಾಮೋದ್ಯೋಗ ಸಂಸ್ಥೆ

ಟಾಪ್ ನ್ಯೂಸ್

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

vidhana-Soudha

Karnataka Government: 21 ಐಎಎಸ್‌ ಅಧಿಕಾರಿಗಳ ವರ್ಗ

rahul gandhi (2)

UP; ಹಾಥರಸ್‌ ಕಾಲ್ತುಳಿತಕ್ಕೆ ಆಡಳಿತ ವೈಫ‌ಲ್ಯ ಕಾರಣ: ರಾಹುಲ್‌

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Sullia: ಕಂಟೈನರ್‌ ಗೂಡ್ಸ್ ವಾಹನ ಪಲ್ಟಿ

Sullia: ಕಂಟೈನರ್‌ ಗೂಡ್ಸ್ ವಾಹನ ಪಲ್ಟಿ

4-punjalkatte

Ajilamogaru: ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

1-ree

Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್‌ಪಾಲ್‌, ರಶೀದ್‌ ಸಂಸದರಾಗಿ ಪ್ರಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.