Bangalore: ಕೆಲಸದಿಂದ ತೆಗೆದಿದ್ದಕ್ಕೆ ಕಂಪನಿಗೆ ಬೆಂಕಿ ಇಟ್ಟರು
Team Udayavani, Oct 9, 2023, 12:05 PM IST
ಬೆಂಗಳೂರು: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಆಕ್ರೋಶ ಗೊಂಡ ಉದ್ಯೋಗಿಗಳು ಕಂಪನಿಯ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಪುಟ್ಟೇನಹಳ್ಳಿಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಪುಟ್ಟೇನಹಳ್ಳಿಯ ರಿಯಲ್ ಎಸ್ಟೇಟ್ ಕಂಪನಿಯೊಂ ದರಲ್ಲಿ ಈ ಘಟನೆ ನಡೆದಿದ್ದು, ಕಂಪನಿಯ ಮಾಜಿ ಉದ್ಯೋಗಿಗಳಾದ ರಾಹುಲ್ ಪೂಜಾರಿ ಮತ್ತು ಲ್ಯಾವ್ಸನ್ ಪೀಟರ್ ಜಾನ್ ಎಂಬವರ ವಿರುದ್ಧ ಪುಟ್ಟೇನ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ 11 ಲಕ್ಷ ರೂ. ಮೌಲ್ಯದ ಪೀಠೊಪಕರಣಗಳಿಗೆ ಹಾನಿಯಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಉಮಾಶಂಕರ್ ಮತ್ತು ರೂಪಾ ಎಂಬವರ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ಆರೋಪಿ ಗಳು ಸೇಲ್ಸ್ ಮ್ಯಾನೇಜರ್ಗಳಾಗಿ ಕೆಲಸ ಮಾಡುತ್ತಿದ್ದರು. ಆದರೆ, ಬ್ಯೂಸಿನೆಸ್ ಟಾರ್ಗೆಟ್ ಸಾಧಿಸದ ಕಾರಣಕ್ಕೆ ಈ ಇಬ್ಬರನ್ನು ಇತ್ತೀಚೆಗೆ ಕೆಲಸದಿಂದ ವಜಾಗೊಳಿಸಲಾಗಿತ್ತು. ಆರೋಪಿಗಳು ಕಂಪನಿಯ ರೂಪಾ ಎಂಬವರಿಗೆ ಕರೆ ಮಾಡಿ ಸಂಬಳ ಕೊಡುವಂತೆ ಕೇಳಿದ್ದರು. ಆದರೆ, ರೂಪಾ ಮತ್ತು ಉಮಾಶಂಕರ್ ಸಂಬಳ ಕೊಡಲು ನಿರಾಕರಿಸಿದ್ದರು. ಅದರಿಂದ ಮತ್ತಷ್ಟು ಆಕ್ರೋಗೊಂಡಿದ್ದ ಆರೋಪಿಗಳು ಸೆ.27ರಂದು ಬೆಳಗ್ಗೆ ಕಚೇರಿಗೆ ಬಂದು ಹೌಸ್ ಕೀಪಿಂಗ್ ಕೆಲಸದವರನ್ನು ಹೊರಗೆ ಕಳುಹಿಸಿ, ಪೆಟ್ರೋಲ… ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಕಂಪನಿಯ ಗೋಡೆ, ಕಂಪ್ಯೂಟರ್ ಟೇಬ ಲ್ಗಳು ಹಾಗೂ ಇತರೆ ವಸ್ತುಗಳು ಬೆಂಕಿಗಾಹುತಿಯಾಗಿವೆ. ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.