Mysore Dussehra Festival: ದಸರಾ ನಾಡ ಕುಸ್ತಿಗೆ 220 ಜೋಡಿ ಸಿದ್ಧ


Team Udayavani, Oct 9, 2023, 2:39 PM IST

Mysore Dussehra Festival: ದಸರಾ ನಾಡ ಕುಸ್ತಿಗೆ 220 ಜೋಡಿ ಸಿದ್ಧ

ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ನಾಡ ಕುಸ್ತಿಗೆ ಭಾನುವಾರ ಜೋಡಿ ಕಟ್ಟುವ ಪ್ರಕ್ರಿಯೆ ಮೈಸೂರಿನ ವಸ್ತುಪ್ರದರ್ಶನ ಆವರಣದ ಪಿ.ಕಾಂಳಿಂಗರಾವ್‌ ಗಾನ ಮಂಟಪದಲ್ಲಿ ನಡೆಯಿತು.

ಅ.15 ರಿಂದ 21 ರವರೆಗೆ ನಾಡ ಕುಸ್ತಿ ನಡೆಯಲಿದೆ. ಈ ಹಿನ್ನೆಲೆ ಪೂರ್ವಭಾವಿಯಾಗಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ 500 ಕ್ಕೂ ಹೆಚ್ಚು ಕುಸ್ತಿ ಪಟುಗಳಿಗೆ ಜತೆ ಕಟ್ಟುವ ಪ್ರಕ್ರಿಯೆಗೆ ಶಾಸಕರಾದ ಕೆ.ಹರೀಶ್‌ಗೌಡ, ಟಿ.ಎಸ್‌. ಶ್ರೀವತ್ಸ ಚಾಲನೆ ನೀಡಿದರು.

30ಜೋಡಿಗೆ ಸ್ಪರ್ಧೆ: ಕುಸ್ತಿಪಟುಗಳ ಹಿರಿತನ, ವಯಸ್ಸು, ತೂಕದ ಆಧಾರದಲ್ಲಿ 220 ಜತೆ(ಒಂದು ಜೋಡಿಗೆ ಇಬ್ಬರಂತೆ) ಕಟ್ಟಿದರು. ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಅಂದಾಜು ನೂರಕ್ಕೂ ಹೆಚ್ಚು ಮಂದಿ ಕುಸ್ತಿಪಟುಗಳು ಆಗಮಿಸಿದ್ದರು. ರಾಜ್ಯದ ನಾನಾ ಗರಡಿಗಳ 70ಕ್ಕೂ ಹೆಚ್ಚು ಮಂದಿ 17 ವರ್ಷದ ಒಳಪಟ್ಟ ಉದಯೋನ್ಮುಖ ಕುಸ್ತಿಪಟುಗಳು ಉತ್ಸಾಹದಿಂದ ಆಗಮಿಸಿದ್ದರು. ಆದರೆ, ಆಗಮಿಸಿದವರಲ್ಲಿ ಎಲ್ಲರಿಗೂ ಅವಕಾಶ ಸಿಗುವುದಿಲ್ಲ. 7 ದಿನ ದಸರಾ ಕುಸ್ತಿ ಪಂದ್ಯಾವಳಿಯಲ್ಲಿ ಪ್ರತೀ ದಿನ 30 ಜೋಡಿಗೆ ಸ್ಪರ್ಧೆ ನಡೆಸಲಾಗುತ್ತದೆ. ಅದರ ಆಧಾರದಲ್ಲಿ 220 ಜೋಡಿ ಗುರುತಿಸಲಾಯಿತು.

ಅವಕಾಶ ದೊರೆಯಲಿಲ್ಲ: ಕೆಲ ಬಲಶಾಲಿ ಕುಸ್ತಿಪಟುಗಳಿಗೆ ನಾಡಕುಸ್ತಿಯಲ್ಲಿ ಪಾಲ್ಗೊಳ್ಳಲು ಆಸಕ್ತಿ ಇದ್ದರೂ ಅವರ ವಿರುದ್ಧ ಸೆಣೆಸಲು ಮತ್ತೂಬ್ಬ ಅಷ್ಟೇ ಸಾಮರ್ಥ್ಯದ ಕುಸ್ತಿ ಪಟು ಸಿಗದ ಹಿನ್ನೆಲೆ ಅವರಿಗೆ ನಾಡ ಕುಸ್ತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗದೇ ನಿರಾಶರಾದರು. ಮತ್ತಷ್ಟು ಮಂದಿಗೆ ಕಾಲಾವಕಾಶದ ಕೊರತೆಯಿಂದಾಗಿ ದಸರಾ ನಾಡಕುಸ್ತಿಯಲ್ಲಿ ಸೆಣಸುವ ಅವಕಾಶ ದೊರೆಯಲಿಲ್ಲ. ಶಾಸಕ ಟಿ.ಎಸ್‌.ಶ್ರೀವತ್ಸ ಮಾತನಾಡಿ, ಕುಸ್ತಿ ಮೈಸೂರಿನ ಹಿರಿಮೆಯಾಗಿದ್ದು ದಸರಾ ಮಹೋತ್ಸವದಲ್ಲಿ ಮಾತ್ರ ಮನ್ನಣೆ ಸಿಗುತ್ತಿದೆ. ಹೀಗಾಗಿ ಕುಸ್ತಿ ಚಟುವಟಿಕೆ ವರ್ಷಪೂರ್ತಿ ನಡೆಯುವ ವಾತಾವರಣ ಸೃಷ್ಟಿಸಬೇಕಿದೆ ಎಂದರು.

ಬಹುಮಾನ: ಕುಸ್ತಿ ಉಪ ಸಮಿತಿ ಉಪ ವಿಶೇಷಾಧಿಕಾರಿ ನಂದಿನಿ ಮಾತನಾಡಿ, ನಾಡ ಕುಸ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದವರಿಗೆ ಸಾಹುಕಾರ ಚೆನ್ನಯ್ಯ ಕಪ್‌, ಮೇಯರ್‌ ಕಪ್‌, ಮೈಸೂರು ಮಹಾರಾಜ ಒಡೆಯರ್‌ ಕಪ್‌, ನಗದು ಬಹುಮಾನ ನೀಡಲಾಗುತ್ತದೆ. ಇದೇ ರೀತಿ, ಪಂಜ ಕುಸ್ತಿ, ಪಾಯಿಂಟ್‌, ಮಾರ್ಫಿಟ್‌ ಕುಸ್ತಿ ಪಂದ್ಯ ಆಯೋಜಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌, ಸಿಇಒ ಕೆ.ಎಂ.ಗಾಯತ್ರಿ, ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್‌, ಡಿಸಿಪಿಗಳಾದ ಮುತ್ತುರಾಜ್‌, ಜಾನ್ಹವಿ, ಕುಸ್ತಿ ಉಪ ಸಮಿತಿ ಕಾರ್ಯದರ್ಶಿ ರವಿಶಂಕರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.