Channagiri; ಮೊರಾರ್ಜಿ ದೇಸಾಯಿ ಶಾಲೆಗೆ ಶಾಸಕರ ದಿಢೀರ್ ಭೇಟಿ; ಕೆಂಡಾಮಂಡಲ


Team Udayavani, Oct 9, 2023, 7:59 PM IST

1-sadsadsa

ಚನ್ನಗಿರಿ : ಕೆರೆಬಿಳಚಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ವಿದ್ಯಾರ್ಥಿಗಳ ವಸತಿ ಗೃಹಕ್ಕೆ ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ ರವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಶಾಸಕರು ಕಾಲಿಡುತ್ತಿದ್ದಂತೆ ದೂರುಗಳ ಸುರಿಮಳೆ ಕೇಳಿ ಬಂದವು.

ಶಾಲೆಯ ಅವ್ಯವಸ್ಥೆ ಕಂಡು ಕೆಂಡಾ ಮಂಡಲರಾದ ಶಾಸಕರು ಪ್ರಾಂಶುಪಾಲರಿಗೆ, ವಸತಿ ನಿಲಯದ ವಾರ್ಡನ್ ರವರಿಗೆ ತೀವ್ರ ತರಾಟೆ ತೆಗೆದುಕೊಂಡರು.

ಕಬೋರ್ಡ್ ಗಳ ರಿಪೇರಿಗೆ 5 ಲಕ್ಷ ರೂ. ಅನುದಾನ ಬಳಕೆಯಾಗಿದೆ.ಶಿಕ್ಷಕರಿಗೆ ಹಾಗೂ ಅತಿಥಿ ಶಿಕ್ಷಕರಿಗೆ ಸರಿಯಾಗಿ ಯಾವುದೇ ವಿಚಾರಗಳಿಗೆ ಸ್ಪಂದಿಸುವುದಿಲ್ಲ. ಶಾಲಾ ದಾಖಲಾತಿಯಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಅವಕಾಶ ನೀಡದೆ ಬೇರೆ ಜಿಲ್ಲೆ ಮತ್ತು ತಾಲೂಕುಗಳ ವಿದ್ಯಾರ್ಥಿಗಳನ್ನು ದಾಖಲಿಸಲಾಗಿದೆ. ಅತಿಥಿ ಶಿಕ್ಷಕರ ಸಂಬಳ ಮೂರು ನಾಲ್ಕು ತಿಂಗಳಗಳಾದರೂ ಸಹ ಆಗಿರುವುದಿಲ್ಲ.30 ರಿಂದ 40 ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಶಾಸಕರ ಹಾಗೂ ಮೇಲಾಧಿಕಾರಿಗಳ ಹೆಸರುಗಳನ್ನು ಬಳಸಿ ವಿದ್ಯಾರ್ಥಿಯಿಂದ 30 ರಿಂದ 40,000 ರೂ ವಸೂಲಿ ಮಾಡಲಾಗಿದೆ. ಸೀಟುಗಳನ್ನು ಮಾರಾಟ ಮಾಡಿರುವುದರ ಬಗ್ಗೆ ಆರೋಪಗಳು ಕೇಳಿ ಬಂದವು.

ಪ್ರತಿದಿನ ಬದನೆಕಾಯಿ, ಸೋರೆಕಾಯಿ, ಹೆಸರುಕಾಳಿನದ್ದೇ ಸಾಂಬಾರು ಮಾಡುತ್ತಾರೆ, ಅದು ರುಚಿಯೂ ಇಲ್ಲ, ತೆಂಗಿನ ಕಾಯಿಯೂ ಹಾಕುವುದಿಲ್ಲ, ಮಜ್ಜಿಗೆ, ಮುದ್ದೆ, ಚಪಾತಿ, ದೋಸೆ ನೀಡುತ್ತಿಲ್ಲ, ಬರೀ ಚಿತ್ರಾನ್ನ , ವಾಂಗಿಬಾತ್‌, ಉಪ್ಪಿಟ್ಟು ಕೊಡುತ್ತಾರೆ. ಸ್ನಾನಕ್ಕೆ ಬಿಸಿನೀರಿಲ್ಲ
ಗುಣಮಟ್ಟದ ಆಹಾರ ಕೊಡುತ್ತಿಲ್ಲ. ವಾರಕ್ಕೊಮ್ಮೆ ಹದಿನೈದು ದಿನಕ್ಕೊಮ್ಮೆ ವಿಶೇಷ ಆಹಾರ ನೀಡಲಾಗುತ್ತಿದೆ. ಚಾರ್ಟ್ ಪ್ರಕಾರ ಆಹಾರ ಪೂರೈಕೆ ಮಾಡುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು. ಬೆಡ್ ಶೀಟ್ ಹಾಗೂ ತಲೆದಿಂಬು ಗುಣಮಟ್ಟದಿಂದ ಕೂಡಿಲ್ಲ ಈ ಬಗ್ಗೆ ಯಾರೂ ಕೂಡ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ವಿದ್ಯಾರ್ಥಿಗಳು ಶಾಸಕರ ಸಮ್ಮುಖದಲ್ಲಿ ಆರೋಪ ಮಾಡಿ, ಮೂಲಸೌಕರ್ಯಗಳ ಕೊರತೆ, ಊಟ, ಉಪಚಾರದ ಅವ್ಯವಸ್ಥೆ ಸರಿಪಡಿಸುವಂತೆ ಕೋರಿದರು.

ಪ್ರಾಂಶುಪಾಲರು ಸಹ ಸರಿಯಾದ ಸಮಯಕ್ಕೆ ಶಾಲೆಗೆ ಬರುವುದಿಲ್ಲ. ಯಾವುದೇ ಪೋಷಕರು ಬಂದರು ಸಹ ಸರಿಯಾಗಿ ಸ್ಪಂದಿಸುವುದಿಲ್ಲ.ಇಲ್ಲಿ ನಡೆಯುವ ಅವ್ಯವಸ್ಥೆ ಬಗ್ಗೆ ವಾರ್ಡನ್‌ಗೆ ಯಾರೇ ಪ್ರಶ್ನಿಸಿದರೆ ಪೋಷಕರಿಗೆ ಫೋನ್‌ ಮಾಡಿ ನಮ್ಮ ವಿರುದ್ಧ ಇಲ್ಲಸಲ್ಲದ ವಿಷಯ ಹೇಳಿ ಅವರಿಂದ ಬೈಯಿಸುತ್ತಾರೆ. ಅಲ್ಲದೇ ಹಾಸ್ಟೆಲ್ ನಿಂದ ಹೊರ ಹಾಕುತ್ತೇವೆ ಅಂತ ಬೆದರಿಸ್ತಾರೆ. ಯಾವುದೇ ಅಧಿಕಾರಿಗಳು ಬಂದರೂ ನಮ್ಮ ಸಮಸ್ಯೆ ಕೇಳಲ್ಲ. ನಮ್ಗೆ ಗುಣಮಟ್ಟದ ಊಟ-ತಿಂಡಿ, ಬಿಸಿನೀರು ಬರುವಂತೆ ಮಾಡಬೇಕು. ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ವಿದ್ಯಾರ್ಥಿಗಳು ತಮ್ಮ ಸಮಸ್ಯೆ ಹೇಳಿಕೊಂಡರು.

ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳಿಗೆ ಶಾಸಕರು ಮೊರಾರ್ಜಿ ಶಾಲೆ ಮತ್ತು ವಸತಿ ನಿಲಯದ ಅವ್ಯವಸ್ಥೆಯನ್ನು ಮನವರಿಕೆ ಮಾಡಿಕೊಟ್ಟು ಕ್ರಮ ವಹಿಸಲು ಒತ್ತಾಯಿಸಿದರು.

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.