Brahmavar Suger Factory; ಕಾಂಗ್ರೆಸ್‌ ಕಾಲ್ನಡಿಗೆ ಜಾಥಾ, ಪ್ರತಿಭಟನೆ ಸಭೆ

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ವಂಚನೆ ಆರೋಪ

Team Udayavani, Oct 10, 2023, 1:05 AM IST

Brahmavar Suger Factory; ಕಾಂಗ್ರೆಸ್‌ ಕಾಲ್ನಡಿಗೆ ಜಾಥಾ, ಪ್ರತಿಭಟನೆ ಸಭೆ

ಬ್ರಹ್ಮಾವರ: ಇಲ್ಲಿನ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ಬಹುಕೋಟಿ ರೂ. ಹಗರಣ ನಡೆದಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್‌, ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಆಶ್ರಯದಲ್ಲಿ ಸೋಮವಾರ ಬ್ರಹ್ಮಾವರದಲ್ಲಿ ಕಾಲ್ನಡಿಗೆ ಜಾಥಾ, ಪ್ರತಿಭಟನೆ ಸಭೆ ಜರಗಿತು.

ಸುಧೀರ್‌ ಕುಮಾರ್‌ ಮುರೋಳಿ ದಿಕ್ಸೂಚಿ ಭಾಷಣ ಮಾಡಿ, ಕಾರ್ಖಾನೆ ಆಡಳಿತ ಮಂಡಳಿ ಗುಜರಿ ಮಾರಾಟ ನೆಪದಲ್ಲಿ ತಾಮ್ರ, ಬೆಲೆಬಾಳುವ ಮೋಟಾರ್‌, ತಳಪಾಯದ ಕಲ್ಲಿನ ಸಹಿತ ಎಲ್ಲವನ್ನೂ ಮಾರಿದೆ. ಗುಜರಿ ಖರೀದಿಸಿದ ಚೆನ್ನೈ ಮೂಲದ ಕಂಪೆನಿಯ ಜತೆಗೆ ಶಾಮೀಲಾಗಿ ಭ್ರಷ್ಟಾಚಾರ ನಡೆದಿದೆ. ಈ ಕುರಿತು ಜಿಲ್ಲೆಯ ಎಲ್ಲ ಶಾಸಕರು, ಸಂಸದರು ಉತ್ತರಿಸಬೇಕು ಎಂದು ಆಗ್ರಹಿಸಿದರು.

ಮುಖಂಡ ಪ್ರಸಾದ್‌ರಾಜ್‌ ಕಾಂಚನ್‌ ಮಾತನಾಡಿ, ಸರಕಾರದ ನಿಯಮಾನುಸಾರ ಪ್ರಕ್ರಿಯೆ ನಡೆಸದೆ ವಂಚಿಸಲಾಗಿದೆ. 82 ರೂ. ಮೌಲ್ಯದ ವಸ್ತುವನ್ನು 32 ರೂ.ಗೆ ಮಾರಾಟ ಮಾಡಲಾಗಿದೆ. 22 ಲಕ್ಷ ಕೆ.ಜಿ. ಗುಜರಿ ಮಾರಾಟ ಮಾಡಿ 11 ಲಕ್ಷ ಕೆ.ಜಿ. ತೋರಿಸಲಾಗಿದೆ ಎಂದರು.

ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಮಾತನಾಡಿ, ಕರಾವಳಿಯಲ್ಲೂ ಸಕ್ಕರೆ ಕಾರ್ಖಾನೆಯನ್ನು ಲಾಭದಾಯಕ ವಾಗಿ ನಡೆಸಬಹುದುದು ಎನ್ನುವುದನ್ನು ಮಾಜಿ ಸಚಿವ ಆಸ್ಕರ್‌ ಫೆರ್ನಾಂಡಿಸ್‌ ತೋರಿಸಿದ್ದರು. ಈಗ ರೈತರ ಸೊತ್ತಾದ ಕಾರ್ಖಾನೆಯ ಜತೆಗೆ ಜಾಗವನ್ನೂ ಮಾರಾಟ ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ. ಈ ಕುರಿತು ತನಿಖೆ ನಡೆಸಿ ತಾತ್ವಿಕ ಗುರಿ ಮುಟ್ಟಲೇ ಬೇಕು ಎಂದರು.

ಪ್ರಮುಖರಾದ ಅಶೋಕ್‌ ಕುಮಾರ್‌ ಕೊಡವೂರು, ಕಿಶನ್‌ ಹೆಗ್ಡೆ ಕೊಳ್ಕೆಬೈಲ್‌, ಎಂ.ಎ. ಗಫೂರ್‌, ಡಾ| ಅಂಜುಮನ್‌, ಮುನಿಯಾಲು ಉದಯ ಕುಮಾರ್‌ ಶೆಟ್ಟಿ, ದಿನೇಶ್‌ ಹೆಗ್ಡೆ ಮೊಳಹಳ್ಳಿ, ಸರಳಾ ಕಾಂಚನ್‌, ಗೋಪಾಲ ಪೂಜಾರಿ, ದಿನಕರ ಹೇರೂರು, ರಮೇಶ್‌ ಕಾಂಚನ್‌, ಪ್ರಖ್ಯಾತ್‌ ಶೆಟ್ಟಿ, ಹರೀಶ್‌ ಕಿಣಿ, ದಿನೇಶ್‌ ಪುತ್ರನ್‌, ಸದಾಶಿವ ಅಮೀನ್‌, ದಿವಾಕರ ಕುಂದರ್‌, ವಿವಿಧ ಬ್ಲಾಕ್‌ ಅಧ್ಯಕ್ಷರು, ಪ್ರಮುಖರು ಉಪಸ್ಥಿತರಿದ್ದರು.

ಡಾ| ಸುನೀತಾ ಡಿ. ಶೆಟ್ಟಿ, ಜ್ಯೋತಿ ಹೆಬ್ಟಾರ್‌ ನಿರೂಪಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.