SEP ಸಮಿತಿಗೆ ಥೋರಟ್‌ ಅಧ್ಯಕ್ಷತೆ

ರಾಜ್ಯ ಶಿಕ್ಷಣ ನೀತಿ ಕರಡು ರಚನೆಗೆ ಕೊನೆಗೂ ಆಯೋಗ ರಚನೆ

Team Udayavani, Oct 11, 2023, 11:21 PM IST

THORAT

ಬೆಂಗಳೂರು: ಜನ್ಮ ತಾಳುವುದಕ್ಕೆ ಮುನ್ನವೇ ವಿವಾದವನ್ನು ಗರ್ಭೀಕರಿಸಿಕೊಂಡಿರುವ ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಕರಡು ರಚನೆಗೆ ರಾಜ್ಯ ಸರಕಾರ ಕೊನೆಗೂ ಆಯೋಗವನ್ನು ರಚಿಸಿದೆ. ಯುಜಿಸಿ ಮಾಜಿ ಅಧ್ಯಕ್ಷ, ಶಿಕ್ಷಣ ಹಾಗೂ ಆರ್ಥಿಕ ತಜ್ಞ ಪ್ರೊ| ಸುಖದೇವ್‌ ಥೋರಟ್‌ ಅಧ್ಯಕ್ಷತೆಯಲ್ಲಿ 15 ಸದಸ್ಯರನ್ನು ಒಳಗೊಂಡ ಆಯೋಗ ರಚಿಸಲಾಗಿದ್ದು, ಪ್ರೊ| ಯೋಗೇಂದ್ರ ಯಾದವ್‌ ಸೇರಿದಂತೆ 8 ಜನರನ್ನು ಸಲಹೆಗಾರರನ್ನಾಗಿ ನೇಮಿಸಲಾಗಿದೆ.

ಎಸ್‌ಇಪಿ ರಚನೆಗೆ ಸಂಬಂಧಪಟ್ಟಂತೆ ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ. ವರದಿ ಸಲ್ಲಿಕೆಗೆ ಯಾವುದೇ ಕಾಲಮಿತಿ ವಿಧಿಸಿಲ್ಲವಾದರೂ ಡಿಸಿಇಆರ್‌ಟಿ, ಉನ್ನತ ಶಿಕ್ಷಣ ಪರಿಷತ್‌ ಈ ಆಯೋಗಕ್ಕೆ ಅಗತ್ಯವಾದ ಎಲ್ಲ ಸಹಕಾರ ನೀಡುವಂತೆ ಸ್ಪಷ್ಟವಾಗಿ ಆದೇಶಿಸಲಾಗಿದೆ.

ಸದಸ್ಯರು
ಪ್ರೊ| ಸುಖದೇವ್‌ ಥೋರಟ್‌ ಅಧ್ಯಕ್ಷತೆಯ ಈ ಸಮಿತಿಯಲ್ಲಿ ಕೇಂದ್ರ ಶಿಕ್ಷಣ ಇಲಾಖೆ ಮಾಜಿ ಕಾರ್ಯದರ್ಶಿ ಸಂಜಯ್‌ ಕೌಲ್‌, ಬೆಂಗಳೂರು ವಿವಿ ವಿಶ್ರಾಂತ ಕುಲಪತಿ ಪ್ರೊ| ಎಸ್‌.ಜಾಫೆಟ್‌, ಕುವೆಂಪು ವಿ.ವಿ. ವಿಶ್ರಾಂತ ಕುಲಪತಿ ಪ್ರೊ| ಜೋಗನ್‌ ಶಂಕರ್‌, ಕುವೆಂಪು ವಿ.ವಿ. ಮಾಜಿ ಇಂಗ್ಲಿಷ್‌ ಪ್ರಾಧ್ಯಾಪಕ ಪ್ರೊ| ರಾಜೇಂದ್ರ ಚೆನ್ನಿ, ಲೇಖಕ ಡಾ| ನಟರಾಜ್‌ ಬೂದಾಳು, ಶಿಕ್ಷಣ ತಜ್ಞ ಡಾ| ವಿ.ಪಿ.ನಿರಂಜನಾರಾಧ್ಯ, ಬೆಂಗಳೂರು ವಿ.ವಿ. ನಿವೃತ್ತ ಪ್ರಾಧ್ಯಾಪಕ ಡಾ| ಎಂ.ಎಸ್‌.ತಳವಾರ್‌, ಕರ್ನಾಟಕ ಮುಕ್ತ ವಿ.ವಿ. ನಿವೃತ್ತ ಪ್ರಾಧ್ಯಾಪಕ ಡಾ| ಸಂತೋಷ್‌ ನಾಯ್ಕ, ಲೇಖಕಿ ಡಾ| ವಿನಯಾ ಒಕ್ಕುಂದ ಸಹಿತ 15 ಮಂದಿಯನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಉನ್ನತ ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿ ಡಾ| ಭಾಗ್ಯವಾನ್‌ ಎಸ್‌. ಮುದಿಗೌಡರ್‌ ಅವರನ್ನು ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಇದರ ಜತೆ ಹೊಸದಿಲ್ಲಿಯ ಸೆಂಟರ್‌ ಫಾರ್‌ ದಿ ಸ್ಟಡಿ ಆಫ್ ಡೆವಲಪ್ಪಿಂಗ್‌ ಸೊಸೈಟಿಯ ಪ್ರೊ| ಯೋಗೇಂದ್ರ ಯಾದವ್‌, ರಾಜೀವ್‌ ಗಾಂಧಿ ಆರೋಗ್ಯ ವಿ.ವಿ. ವಿಶ್ರಾಂತ ಕುಲಪತಿ ಡಾ| ಎಸ್‌.ಚಂದ್ರಶೇಖರ್‌ ಶೆಟ್ಟಿ, ಅಕ್ಕಮಹಾದೇವಿ ಮಹಿಳಾ ವಿ.ವಿ. ವಿಶ್ರಾಂತ ಕುಲಪತಿ ಪ್ರೊ| ಸಬೀಹಾ ಭೂಮಿಗೌಡ ಸಹಿತ 8 ಮಂದಿಯನ್ನು ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.
ಈ ಆದೇಶವು ತತ್‌ಕ್ಷಣದಿಂದಲೇ ಜಾರಿಗೆ ಬರಲಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಆಯೋಗಕ್ಕೆ ಅಗತ್ಯವಾದ ಸಹಕಾರವನ್ನು ನೀಡಬೇಕೆಂದು ಸೂಚಿಸಲಾಗಿದೆ. ಸಾಕ್ಷರತೆ ಮತ್ತು ಶಾಲಾ ಶಿಕ್ಷಣ ಮತ್ತು ಹಾಗೂ ಉನ್ನತ ಶಿಕ್ಷಣ ಇಲಾಖೆಯಿಂದ ಆಯೋಗಕ್ಕೆ ನೋಡಲ್‌ ಅಧಿಕಾರಿ ನೇಮಕ ಮಾಡುವಂತೆಯೂ ಸೂಚಿಸಲಾಗಿದೆ.

ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ| ಸುಖದೇವ್‌ ಥೋರಟ್‌ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿ ರಚಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ಈ ಸಮಿತಿ ನೀಡಲಿದೆ ಎಂಬ ಭರವಸೆ ಇದೆ. ರಾಜ್ಯ ಶಿಕ್ಷಣ ನೀತಿ ದೇಶಕ್ಕೆ ಮಾದರಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ.
-ಸಿದ್ದರಾಮಯ್ಯ, ಸಿಎಂ

ರಾಜ್ಯದ ಶಿಕ್ಷಣ ನೀತಿಯನ್ನು ದಿಲ್ಲಿಯ ಕಾಣದ ಕೈಗಳು ರೂಪಿಸಲು ಹೊರಟಿವೆ. ಇದು ಕರ್ನಾಟಕದ ದುರಾದೃಷ್ಟ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ಹೆಮ್ಮೆಯ ಕನ್ನಡಿಗರು ರೂಪಿಸಿದರೆ ರಾಜ್ಯ ಶಿಕ್ಷಣ ನೀತಿಗೆ ದಿಲ್ಲಿಯಿಂದ ತಜ್ಞರನ್ನು ಆಮದು ಮಾಡಿಕೊಂಡಿದ್ದಾರೆ. ಇದು ಮಕ್ಕಳ ಮೇಲೆ ನಿರ್ದಿಷ್ಟ ವಿಚಾರಧಾರೆಯನ್ನು ಹೇರುವ ಪ್ರಯತ್ನವಲ್ಲದೇ ಮತ್ತೇನು ಅಲ್ಲ.
-ಬಿ.ಸಿ.ನಾಗೇಶ್‌, ಮಾಜಿ ಶಿಕ್ಷಣ ಸಚಿವ

 

ಟಾಪ್ ನ್ಯೂಸ್

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.