NEP ಹಿಂಪಡೆದರೆ ಭವಿಷ್ಯಕ್ಕೆ ಹೊಡೆತ: ಕ್ಯಾ| ಗಣೇಶ್‌ ಕಾರ್ಣಿಕ್‌


Team Udayavani, Oct 11, 2023, 11:35 PM IST

NEP ಹಿಂಪಡೆದರೆ ಭವಿಷ್ಯಕ್ಕೆ ಹೊಡೆತ: ಕ್ಯಾ| ಗಣೇಶ್‌ ಕಾರ್ಣಿಕ್‌

ಮಂಗಳೂರು: “ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)-2020’ನ್ನು ಹಿಂಪಡೆದರೆ ರಾಜ್ಯದ ಮಕ್ಕಳ ಭವಿಷ್ಯಕ್ಕೆ ಪೆಟ್ಟು ಬೀಳಲಿದೆ ಎಂದು ಪೀಪಲ್ಸ್‌ ಪೋರಂ ಫಾರ್‌ ಕರ್ನಾಟಕದ ಪ್ರಮುಖರಾದ ವಿಧಾನಪರಿಷತ್‌ ಮಾಜಿ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಬದಲು ಎಸ್‌ಇಪಿ (ರಾಜ್ಯ ಶಿಕ್ಷಣ ನೀತಿ) ಜಾರಿಗೆ ತರಲು ರಾಜ್ಯದ ಕಾಂಗ್ರೆಸ್‌ ಸರಕಾರ ನಿರ್ಧರಿಸಿರುವುದು ಖಂಡನೀಯ. ಇದರ ವಿರುದ್ಧ ಆಂದೋಲನ ನಡೆಸಲಾಗುವುದು. ಮುಖ್ಯಮಂತ್ರಿ, ಸಚಿವರು ಮೊದಲು ಎನ್‌ಇಪಿಯ ಕರಡು ಪ್ರತಿಗಳನ್ನು ಓದಲಿ. ಆಗ ಅದರಲ್ಲಿರುವ ಒಳ್ಳೆಯ ಅಂಶಗಳು ತಿಳಿಯುತ್ತವೆ. ಕೇವಲ ರಾಜಕೀಯ ಕಾರಣಕ್ಕಾಗಿ ನಿರ್ಧಾರ ತೆಗೆದುಕೊಂಡು ಮಕ್ಕಳ ಭವಿಷ್ಯದ ಮೇಲೆ ಕಲ್ಲು ಹಾಕಬಾರದು. ಸರಕಾರದ ನಿರ್ಧಾರ ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ ನೀತಿಯಾಗುತ್ತದೆ ಎಂದರು.

ಎನ್‌ಇಪಿ ಜಾರಿಯಿಂದ ಶಿಕ್ಷಣಕ್ಕೆ ಜಿಡಿಪಿಯ ಶೇ. 6ರಷ್ಟು ವಿನಿಯೋಗವಾಗುತ್ತದೆ. ಎನ್‌ಇಪಿ ಮಕ್ಕಳಲ್ಲಿ ಕುತೂಹಲ, ಸಂಶೋಧನೆ ಉಳಿಸಿಕೊಂಡು ಕೌಶಲಯುತವಾದ ಶಿಕ್ಷಣ ನೀಡುತ್ತದೆ. ವ್ಯಕ್ತಿತ್ವ ವಿಕಸನ ದೊಂದಿಗೆ ಜಗತ್ತಿನ ಉದ್ಯೋಗ ಅವಕಾಶಕ್ಕೆ ಪೂರಕವಾಗಿ ವ್ಯಕ್ತಿಯನ್ನಾಗಿ ರೂಪಿಸುತ್ತದೆ. ಭವಿಷ್ಯದ ದೃಷ್ಟಿಯಿಂದ ಎನ್‌ಇಪಿ ಅಗತ್ಯ. ಒಂದು ವೇಳೆ ಅಗತ್ಯವಿದ್ದರೆ ಎನ್‌ಇಪಿಯಲ್ಲಿಯೇ ಬದಲಾವಣೆ ಮಾಡಿಕೊಳ್ಳಲು ಅವಕಾಶ ವಿದೆ. ಆದರೆ ಅಧ್ಯಾಯಗಳನ್ನು ಕಿತ್ತೆಸೆಯುವುದರಿಂದ ಅದು ಎಸ್‌ಇಪಿ ಆಗದು ಎಂದು ಹೇಳಿದರು.

ಅವೈಜ್ಞಾನಿಕ ಪರಿಷ್ಕರಣೆ
ಕಾಂಗ್ರೆಸ್‌ ಸರಕಾರ ಪಠ್ಯಪುಸ್ತಕಗಳ ಅವೈಜ್ಞಾನಿಕ ಪರಿಷ್ಕರಣೆಗೆ ಮುಂದಾಗಿದ್ದು ಮಕ್ಕಳ ಮನಸ್ಸನ್ನು ವಿಭಿಜಿಸಲು ಪ್ರಯತ್ನಿಸುತ್ತಿದೆ. ಜಾತೀಯತೆಯ ಪಾಠ ಅಳವಡಿಸಿದೆ. ಸುಳ್ಳು ಇತಿಹಾಸಗಳನ್ನು ಪ್ರತಿಪಾದಿಸಿದೆ ಎಂದು ಕಾರ್ಣಿಕ್‌ ಹೇಳಿದರು.

ರಾಜಕೀಯ ಬೇಡ
ನಿವೃತ್ತ ಪ್ರಾಧ್ಯಾಪಕ ಪ್ರೊ| ರವಿಶಂಕರ ರಾವ್‌ ಮಾತನಾಡಿ, 1968, 1986ರ ಅನಂತರ 34 ವರ್ಷಗಳ ಬಳಿಕ 2020ರಲ್ಲಿ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗಿದೆ. ಶಿಕ್ಷಣವನ್ನು ರಾಜಕೀಯಗೊಳಿಸಬಾರದು. ಪುನರವಲೋಕಿಸಿ ಒಳ್ಳೆಯದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

ಯಶಸ್ವಿಯಾಗಿ ಜಾರಿ
ನಿವೃತ್ತ ಪ್ರಾಂಶುಪಾಲ ಪ್ರೊ| ರಾಜಶೇಖರ ಹೆಬ್ಬಾರ್ ಮಾತನಾಡಿ, ರಾಜ್ಯದಲ್ಲಿ 2 ವರ್ಷಗಳಿಂದ ಎನ್‌ಇಪಿ ಯಶಸ್ವಿಯಾಗಿ ಜಾರಿಯಾಗಿದೆ. ಕನಿಷ್ಠ 5 ವರ್ಷ ನೋಡಿ ಅನಂತರ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.
ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಎನ್‌ಇಪಿ ಅಂಗನವಾಡಿ ನೌಕರರನ್ನು ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ತರುವ ಅವಕಾಶ ಮಾಡಿ ಕೊಟ್ಟಿದೆ. ಹಿಂಪಡೆಯುವುದರಿಂದ ಅಂಗನವಾಡಿ ನೌಕರರಿಗೂ ಅನ್ಯಾಯ ವಾಗಲಿದೆ ಎಂದರು. ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌, ವಿಕಾಸ್‌ ಪುತ್ತೂರು ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.