Water Scheme ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಯಾವುದೇ ಕಾರಣಕ್ಕೂ ರದ್ದು ಆಗಬಾರದು

ರದ್ದು ಆಗಲು ನಾವು ಬಿಡುವುದಿಲ್ಲ :ಗ್ರಾ.ಪಂ ಒಕ್ಕೂಟ

Team Udayavani, Oct 13, 2023, 6:11 PM IST

Water Scheme ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಯಾವುದೇ ಕಾರಣಕ್ಕೂ ರದ್ದು ಆಗಬಾರದು

ತೀರ್ಥಹಳ್ಳಿ : ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಲುವಾಗಿ ಭೀಮೇಶ್ವರ ಸಂಗಮದಿಂದ ಹೋರಾಟ ನಡೆಯುತ್ತಿದೆ. ಆದರೆ ಈ ಯೋಜನೆಯಿಂದ ತಾಲೂಕಿಗೆ ಅನುಕೂಲವಿದೆ.

ಈ ಯೋಜನೆಗೆ ಯಾರು ಕೂಡ ಅಡ್ಡಿ ಪಡಿಸಬಾರದು. ಯಾವುದೇ ಕಾರಣಕ್ಕೂ ರದ್ದು ಆಗಬಾರದು ರದ್ದು ಆಗಲು ನಾವು ಬಿಡುವುದಿಲ್ಲ.ಅವರು ಜೀವನ ಉಳಿಸಿ ಅಂದರೆ ನಾವು ಜೀವ ಉಳಿಸಿ ಎಂದು ಹೋರಾಟ ಮಾಡಬೇಕಾಗುತ್ತದೆ ಎಂದು ಗ್ರಾ.ಪಂ ಒಕ್ಕೂಟ ಅಧ್ಯಕ್ಷರಾದ ಟಿ ಜೆ ಅನಿಲ್ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಭೀಮೇಶ್ವರ ಸಂಗಮದ ಹೋರಾಟ ಬೇರೆ ದಿಕ್ಕಿಗೆ ಹೋಗುತ್ತಿದೆ ಎಂಬ ಆತಂಕ ಇದೆ. ತಾಲೂಕಿನಲ್ಲಿ 36 ಗ್ರಾಮ ಪಂಚಾಯಿತಿ ಇದರ ಫಲ ಅನುಭವಿಸುತ್ತದೆ. 32 ಗ್ರಾಮಪಂಚಾಯಿತಿ ಈಗಾಗಲೇ ಇದಕ್ಕೆ ಒಪ್ಪಿಗೆ ಸೂಚಿಸಿವೆ. ಸಿಂಗನಬಿದರೆ ಮತ್ತು ಮಂಡಗದ್ದೆ ಈ ಯೋಜನೆಯಲ್ಲಿ ಬರುವುದಿಲ್ಲ. ಉಳಿದಂತೆ ಹೊಸಳ್ಳಿ, ಮೇಲಿನಕುರುವಳ್ಳಿ ಹೆಗ್ಗೋಡು, ತೀರ್ಥಮುತ್ತೂರು ಇಲ್ಲಿಯವರೆಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ. ತಟಸ್ಥ ಹೊಂದಿದ್ದಾರೆ. ಅನುಷ್ಠಾನ ಮಾಡಿ ಅಥವಾ ಮಾಡಬೇಡಿ ಎನ್ನುವುದರ ಬಗ್ಗೆ ಹೇಳಿಲ್ಲ ಎಂದರು.

ಹೋರಾಟದ ಆರಂಭದಲ್ಲಿ ರೈತರಿಗೆ ತೊಂದರೆ ಆಗುತ್ತದೆ ಎಂದು ಹೇಳುತ್ತಿದ್ದರು. ನಮ್ಮಲ್ಲಿ ಕೆಲವು ಗ್ರಾಮ ಪಂಚಾಯಿತಿಗಳು ನದಿಯ ನೀರನ್ನು ಅವಲಂಬಿಸಿದ್ದರೆ ಉಳಿದ ಕೆಲವು ಗ್ರಾಮ ಪಂಚಾಯಿತಿಗಳು ಬೋರ್ ವೆಲ್ ನೀರನ್ನು ಅವಲಂಬಿಸಿದೆ. ವರ್ಗ 1 ನ್ನು ಬಳಸಿ ಬೋರ್ ತೆಗೆಯುವ ಪರಿಸ್ಥಿತಿಯಲ್ಲಿ ನಾವಿಲ್ಲ, ಈ ಯೋಜನೆ ಜಾರಿಯಾಗಬೇಕು. ಶುದ್ಧ ನೀರು ಕೊಡುವ ಜೊತೆಗೆ ಯೋಜನೆ ಜಾರಿಯಾದರೆ 1 ಲಕ್ಷ ಹಣ ಪ್ರತಿಯೊಂದು ಗ್ರಾಮಪಂಚಾಯಿತಿಗೆ ಉಳಿಯುತ್ತದೆ ಎಂದರು.

ತಾಲೂಕಿನಲ್ಲಿ ಪಟ್ಟಣ ಹೊರತು ಪಡಿಸಿ ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ನೀರು ಸಿಗುತ್ತಿಲ್ಲ. ನದಿಯ ಪಕ್ಕದಲ್ಲಿ ಗ್ರಾಮಗಳು ಇದ್ದರೂ ಎರಡು ದಿನಕ್ಕೆ ಒಂದು ಬಾರಿ ನೀರು ಬಿಡುತ್ತಿದ್ದೇವೆ. ಶುದ್ಧ ಕುಡಿಯುವ ನೀರು ಸಿಕ್ಕಿದರೆ ಮೋಟರ್ ಅವಶ್ಯಕತೆ ಇಲ್ಲ, ವಿದ್ಯುತ್ ಉಳಿಯುತ್ತದೆ. ರೈತರ ಮಾರಣಹೋಮ ಆಗುತ್ತಿದೆ ಎಂದು ಬೀದಿಗೆ ಇಳಿಯುವುದು ಸರಿಯಲ್ಲ. ದಲಿತ ಕೇರಿಗಳಿಗೆ ಶುದ್ಧ ಕುಡಿಯುವ ನೀರೇ ಸರಿ ಸಿಗುತ್ತಿಲ್ಲ, ಇಂತಹ ಯೋಜನೆ ಜಾರಿಯಾದರೆ ಎಲ್ಲರಿಗೂ ಸಿಗುತ್ತದೆ.ಈ ಯೋಜನೆ ಜಾರಿ ಆಗಬಾರದು ಎಂದು ಇವರ ಹಿಂದೆ ಯಾರೋ ಇದ್ದಾರೆ ಎಂಬ ಸಂಶಯ ಹುಟ್ಟುತ್ತಿದೆ ಎಂದರು.

ಈ ಸಂದರ್ಭದಲ್ಲಿ ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರಾಗಿರುವ ನವೀನ್ ಹೊಸಕೆರೆ, ಚಂದ್ರಶೇಖರ, ನವೀನ್ ಆರ್, ಸುಬ್ರಮಣ್ಯ, ಕವಿತಾ ಭಾಸ್ಕರ್, ಚಂದ್ರಶೇಖರ ಲೋಕೇಶ್, ರಾಘವೇಂದ್ರ ಪವಾರ್ ಸೇರಿ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sagara

Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು

5

Anandapura ಗ್ರಾಮ ಪಂಚಾಯತ್ ಗಳ ಸೇವೆ ಸಂಪೂರ್ಣ ಬಂದ್

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Sagara: ತಾಯಿಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತು; ಸುಧೀಂದ್ರ ಆಗ್ರಹ

Sagara: ತಾಯಿ ಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತುಗೊಳಿಸುವಂತೆ ಆಗ್ರಹ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.