Murdeshwar: ಸಮುದ್ರ ಪಾಲಾಗುತ್ತಿದ್ದ ಮೂವರು ಯುವಕರ ರಕ್ಷಣೆ
Team Udayavani, Oct 13, 2023, 6:32 PM IST
ಭಟ್ಕಳ: ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಮುರ್ಡೇಶ್ವರ ಕಡಲಿಗೆ ಇಳಿಯಬಾರದು ಎನ್ನುವ ಆದೇಶವನ್ನು ಹಿಂಪಡೆಯಲಾಗಿದ್ದು ಶುಕ್ರವಾರ ಕಡಲಿಗಿಳಿದ ಮೂವರು ಯುವಕರು ನೀರು ಪಾಲಾಗುವ ಹಂತದಲ್ಲಿ ಪಾರಾಗಿ ಬಂದ ಘಟನೆ ವರದಿಯಾಗಿದೆ.
ಕಡಲಿನಲ್ಲಿ ಅಪಾಯಕ್ಕೆ ಸಿಲುಕಿದ್ದ ಯುವಕರನ್ನು ಹಾವೇರಿ ಜಿಲ್ಲೆಯ ಹಂಸನಬಾವಿ ಗ್ರಾಮದ ಸಿದ್ದಾರ್ಥ (24), ದಿಕ್ಷೀತ್ (2೦) ಹಾಗೂ ಸಂತೋಷ (24) ಎಂದು ಗುರುತಿಸಲಾಗಿದೆ.
ಹಾವೇರಿ ಜಿಲ್ಲೆಯಿಂದ 5 ಜನ ಯುವಕರು ಸೇರಿಕೊಂಡು ಪ್ರವಾಸಕ್ಕೆ ಹೊರಟಿದ್ದು ಧರ್ಮಸ್ಥಳಕ್ಕೆ ಹೋಗಿ ದೇವರ ದರ್ಶನವನ್ನು ಪಡೆದು ಮುರ್ಡೇಶ್ವರಕ್ಕೆ ಆಗಮಿಸಿದ್ದರು. ಮುರ್ಡೇಶ್ವರಕ್ಕೆ ಆಗಮಿಸಿದ್ದ ಇವರನ್ನು ಕಡಲು ಆಕರ್ಷಿಸಿದ್ದು ಕಡಲಿನ ಬಗ್ಗೆ ಅರಿವಿಲ್ಲದ ಇವರು ನೀರಿನಲ್ಲಿ ಇಳಿದು ಆಟವಾಡುತ್ತಿದ್ದಾಗ ಅಲೆಯ ಹೊಡೆತಕ್ಕೆ ಸಿಲುಕಿದ್ದರು. ಅಲೆಯ ಅಬ್ಬರಕ್ಕೆ ಕೊಚ್ಚಿಕೊಂಡು ಹೋಗುತ್ತಿದ್ದ ಇವರನ್ನು ಸ್ಥಳದಲ್ಲಿಯೇ ಇದ್ದ ಲೈಫ್ ಗಾರ್ಡ್ ಗಳು ರಕ್ಷಣೆ ಮಾಡಿ ಮೇಲಕ್ಕೆ ಕರೆ ತಂದರು ಎನ್ನಲಾಗಿದೆ.
ಲೈಫ್ ಗಾರ್ಡ್ ಸಿಬ್ಬಂದಿ ಚಂದ್ರಶೇಖರ ದೇವಾಡಿಗ, ಜಯರಾಮ ಹಾಗೂ ಪಾಂಡು ಇವರ ಸಮಯೋಚಿತ ಸಹಕಾರದಿಂದ ಮೂವರು ಅಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ
Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?
Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್ ಬೆಳ್ಳಿ’ ತೆರೆಗೆ
Space Wonder: ಇಂದು ವಿಶೇಷ ಸೂಪರ್ಮೂನ್
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.