PM ಸ್ವ-ನಿಧಿ ಯೋಜನೆ- ಯಾರು ಅರ್ಹರು? 


Team Udayavani, Oct 16, 2023, 12:02 AM IST

pm swanidhi

ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲ ಮತ್ತು ಸ್ವಾವಲಂಬಿಯಾಗಿ ಬದುಕಲು ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ್‌ ನಿಧಿ (ಪಿಎಂ ಸ್ವ-ನಿಧಿ ಯೋಜನೆ)ಯನ್ನು ಜಾರಿಗೆ ತರಲಾಗಿದೆ.

ಯಾರು ಅರ್ಹರು?
ನಗರ ಪ್ರದೇಶ ವ್ಯಾಪ್ತಿಯಲ್ಲಿ ಅಂದರೆ, ಪಟ್ಟಣ ಪಂಚಾಯತ್‌, ಪುರಸಭೆ, ನಗರಸಭೆ, ಮಹಾ ನಗರ ಪಾಲಿಕೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ, ಗೂಡಂಗಡಿ, ಪೆಟ್ಟಿಗೆ ಅಂಗಡಿ, ಸ್ಥಳದಿಂದ ಸ್ಥಳಕ್ಕೆ ರಸ್ತೆ ಮೂಲಕ ಚಲಿಸುವ, ಕಾಲುದಾರಿ, ಪಾದಚಾರಿ ಮಾರ್ಗ, ಆಟೋ, ಸೈಕಲ್‌, ತಳ್ಳುವ ಬಂಡಿಗಳಲ್ಲಿ ಸರಕುಗಳ ಮಾರಾಟಗಾರರು, ಹಾಲು ಮಾರಾಟ ಮತ್ತು ಹಂಚಿಕೆ ಮಾಡುವ ವರು, ತರಕಾರಿ, ಹಣ್ಣುಗಳ ವ್ಯಾಪಾರಿಗಳು, ದಿನಪತ್ರಿಕೆ ವಿತರಕರು ಹಾಗೂ ರಸ್ತೆಬದಿಗಳಲ್ಲಿ ಇಸಿŒ ಮಾಡುವವರು (ಪೆಟ್ಟಿಗೆ ಅಂಗಡಿಯಲ್ಲಿ ಮಾಡುತ್ತಿದ್ದರೆ ಮಾತ್ರ), ಬೇರೆ ಗ್ರಾಮದವರಾಗಿ ದ್ದರೂ ನಗರದಲ್ಲಿ ಬೀದಿ ವ್ಯಾಪಾರಿಗಳಾಗಿದ್ದರೆ, ರಸ್ತೆ ಬದಿ ಗಿಡ ಮಾರುವವರು ಸೇರಿದಂತೆ ಇನ್ನಿತರರು ಈ ಯೋಜನೆಯಡಿ ಬರುತ್ತಾರೆ.

ಸಾಲ ನೀಡುವ ಹಂತ ಮತ್ತು ವಿಧಾನ ಹೇಗೆ?
10,000 ರೂ.: ಮೊದಲನೇ ಹಂತದಲ್ಲಿ ತಮ್ಮ ವ್ಯಾಪ್ತಿಯ ಸ್ಥಳೀಯ ಸಂಸ್ಥೆ (ನಗರಸಭೆ, ಪ.ಪಂ, ಪುರಸಭೆ, ಮಹಾನಗರ ಪಾಲಿಕೆ, ಬಿಬಿಎಂಪಿ)ಯಿಂದ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ಪಡೆದಿರುವ ಬೀದಿಬದಿ ವ್ಯಾಪಾರಸ್ಥರಿಗೆ ಬ್ಯಾಂಕ್‌ ಮೂಲಕ 10,000 ಸಾವಿರ ರೂ. ಸಾಲ ನೀಡಲಾಗುತ್ತದೆ.

20,000: ಎರಡನೇ ಹಂತದಲ್ಲಿ 20,000 ಸಾಲ ನೀಡಲಾಗುತ್ತದೆ. ಮೊದಲನೇ ಹಂತದಲ್ಲಿ ಪಡೆದ 10,000 ರೂ. ಸಾಲವನ್ನು ನಿಗದಿತ ಸಮಯದಲ್ಲಿ ಪ್ರತೀ ತಿಂಗಳು ಮರು ಪಾವತಿ ಎನ್‌ಒಸಿ ಪ್ರತಿಯನ್ನು ಬ್ಯಾಂಕ್‌ನಿಂದ ಪಡೆದು ತಮ್ಮ ವ್ಯಾಪ್ತಿಯ ಸ್ಥಳೀಯ ಸಂಸ್ಥೆಯ ಡೇ ನಲ್ಮ್ ವಿಭಾಗಕ್ಕೆ ಸಲ್ಲಿಸಿದರೆ ಅಂತಹ ಅರ್ಹ ಫ‌ಲಾನುಭವಿಗಳಿಗೆ 20,000 ರೂ. ಸಾಲ ನೀಡಲಾಗುತ್ತದೆ.

50,000: ಮೂರನೇ ಹಂತದಲ್ಲಿ 50,000 ರೂ. ಸಾಲ ನೀಡಲಾಗುತ್ತದೆ. ಎರಡನೇ ಹಂತದಲ್ಲಿ ಪಡೆದ 20,000 ರೂ. ಸಾಲವನ್ನು ನಿಗದಿತ ಸಮಯದಲ್ಲಿ ಪ್ರತೀ ತಿಂಗಳು ಮರು ಪಾವತಿ ಎನ್‌ಒಸಿ ಪ್ರತಿಯನ್ನು ಬ್ಯಾಂಕ್‌ನಿಂದ ಪಡೆದು ತಮ್ಮ ವ್ಯಾಪ್ತಿಯ ಸ್ಥಳೀಯ ಸಂಸ್ಥೆಯ ಡೇ ನಲ್ಮ್ ವಿಭಾಗಕ್ಕೆ ಸಲ್ಲಿಸಿದರೆ ಅಂತಹ ಅರ್ಹ ಫ‌ಲಾನುಭವಿಗಳಿಗೆ 50,000 ರೂ. ಸಾಲ ನೀಡಲಾಗುತ್ತದೆ. c

ದಾಖಲೆಗಳು
ಆಧಾರ್‌, ಬಿಪಿಎಲ್‌, ಚುನಾವಣ ಗುರುತಿನ ಚೀಟಿ, ಬ್ಯಾಂಕ್‌ ಪಾಸ್‌ಬುಕ್‌, 2 ಪಾಸ್‌ ಫೋಟೊ, ಬೀದಿಬದಿ ವ್ಯಾಪಾರಸ್ಥರ ಗುರುತಿನ ಚೀಟಿ, ಮಾರಾಟ ಪ್ರಮಾಣ ಪತ್ರ.

ಅರ್ಜಿ ಸಲ್ಲಿಕೆ ಹೇಗೆ?
ಸ್ಥಳೀಯ ಸಂಸ್ಥೆ ಪ.ಪಂ., ಪುರಸಭೆ, ನಗರಸಭೆಗಳಲ್ಲಿ ಡೇ ನಲ್ಮ್ ವಿಭಾಗದಲ್ಲಿ ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕು. ಬಿಬಿಎಂಪಿ, ಮಹಾನಗರ ಪಾಲಿಕೆ ವ್ಯಾಪ್ತಿಯ ವೆಲ್ಫೆರ್‌ ಸೆಕ್ಷನ್‌ನ ಸಮುದಾಯ ಸಂಘಟನಾಧಿಕಾರಿ ಹಾಗೂ ಸಮುದಾಯ ಸಂಘಟಕರನ್ನು ಸಂಪರ್ಕಿಸಬೇಕು. ಸ್ಥಳೀಯ ಸಂಸ್ಥೆ ಯಿಂದ ನೀಡಲಾದ ಮಾರಾಟ ಮತ್ತು ಗುರುತಿನ ಚೀಟಿ ಇತ್ಯಾದಿ ದಾಖಲೆಗಳನ್ನು ಸಲ್ಲಿಸಬೇಕು.

ನಾಗಪ್ಪ ಹಳ್ಳಿಹೊಸೂರು

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.