Shri Rajasekharananda Swamiji: ಧರ್ಮಕ್ಕೆ ಎಂದೂ ಅಪಚ್ಯುತಿ ಬರಬಾರದು: ವಜ್ರದೇಹಿ ಶ್ರೀ


Team Udayavani, Oct 16, 2023, 11:33 AM IST

tdy-12

ಕಾರ್ಕಳ: ಶ್ರೀ ಕ್ಷೇತ್ರ ಧರ್ಮ ಸ್ಥಳದ ಹೆಗ್ಗಡೆಯವರು ಒಂದು ಕ್ಷೇತ್ರವನ್ನು ಕೇಂದ್ರವಾಗಿ ಇಟ್ಟು ಕೊಂಡು ನೂರಾರು ಸಾಮಾಜಿಕ ಕೆಲಸ ಕಾರ್ಯ ಮಾಡುತ್ತ ಬಂದಿದ್ದಾರೆ. ಉಪಕಾರ ಸ್ಮರಣೆಯನ್ನು ಸಮಾಜ ಮರೆತರೆ ಆ ಸಮಾಜದ ಅಂತಃಸತ್ವ ಕಡಿಮೆಯಾಗುತ್ತದೆ. ಧರ್ಮಕ್ಕೆ ಎಂದೂ ಅಪಚ್ಯುತಿ ಬರಬಾರದು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಹಿತರಕ್ಷಣ ಸಮಿತಿ ವತಿಯಿಂದ ಕಾರ್ಕಳದ ಕುಕ್ಕುಂದೂರು ಪಂ.ಮೈದಾನದಲ್ಲಿ ರವಿವಾರ ನಡೆದ ಧರ್ಮ ಸಂರಕ್ಷಣ ಸಮಾವೇಶದಲ್ಲಿ ಅವರು ಮಾತನಾಡಿದರು.

ಸತ್ಯದ ಅನ್ವೇಷಣೆ ಆಗಬೇಕು. ಸೌಜನ್ಯಾ ಎನ್ನುವ ಮುಗ್ಧ ಮಗುವಿಗೆ ನ್ಯಾಯ ಸಿಗಬೇಕು. ಧರ್ಮ ರಕ್ಷಣೆಯಾಗಬೇಕು, ಕಾನೂನಿಗೂ ಬೆಲೆ ಬರುವಂತಾಗಲಿ ಎಂದರು.

ಧರ್ಮಸ್ಥಳ ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತ ವಾಗದೆ ಹಿಂದೂ, ಜೈನ ಧರ್ಮ ದವರ ಜತೆ ಕ್ರಿಸ್ತ ಹಾಗೂ ಮುಸ್ಲಿಂ ಸಮು ದಾಯದವರಿಗೂ ನೆರವನ್ನು ನೀಡುವ ಸರ್ವಧರ್ಮದ ಕ್ಷೇತ್ರವಾಗಿದೆ ಎಂದು ಮೂಡಬಿದಿರೆ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.

ಮೂಡುಬಿದಿರೆ ಕರಿಂಜ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ಧರ್ಮ ಜಾಗೃತಿಯಾಗುವವರೆಗೂ ವಿರಮಿಸಬಾರದು. ಆಗ ಮಾತ್ರ ಧರ್ಮ ಸಂರಕ್ಷಣೆ ಸಾಧ್ಯ. ಸೌಜನ್ಯಾಳಿಗೆ ನ್ಯಾಯ ಸಿಗಬೇಕು. ಸತ್ಯ ಹೊರಗೆ ಬರಬೇಕು. ಆದರೆ ಅದಕ್ಕೆ ಬೇಕಾದ ಪ್ರಾಮಾಣಿಕ ವ್ಯವಸ್ಥೆಯಾಗಬೇಕು. ಎಲ್ಲರೂ ಜತೆಯಾಗಿ ಧರ್ಮ ಸಂರಕ್ಷಣೆ ಮಾಡೋಣ ಎಂದರು.

ಪ್ರೇಕ್ಷಕರ ಸಾಲಿನಲ್ಲಿ ಕುಳಿತಿದ್ದ ಶಾಸಕ ವಿ. ಸುನಿಲ್‌ ಕುಮಾರ್‌ ಮಾತನಾಡಿ, ಧಾರ್ಮಿಕ ನಂಬಿಕೆಗಳಿಗೆ ನಿರಂತರ ಅವಹೇಳನ ಮಾಡುತ್ತಿರುವ ಪ್ರಯತ್ನಗಳು ದೇಶದಲ್ಲಿ ನಡೆಯುತ್ತಿದೆ. ಧಾರ್ಮಿಕ ಭಾವನೆಗೆ ಅಪಪ್ರಚಾರ ಮಾಡಿದರೆ ಅದು ತಪ್ಪು. ಸೌಜನ್ಯಾಳಿಗೆ ನ್ಯಾಯ ಸಿಗಬೇಕು ಎನ್ನುವ ಹೋರಾಟ ದಲ್ಲಿ ಭಾಗವಹಿಸಿದ್ದೇವೆ. ಮುಂದೆಯೂ ಭಾಗವಹಿಸುತ್ತೇನೆ ಎಂದರು.

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಮೋಹನ್‌ ಆಳ್ವ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನೂರಾರು ಒಳ್ಳೆಯ ಕೆಲಸ ಕಾರ್ಯವನ್ನು ಮಾಡಿರುವ ಧರ್ಮಸ್ಥಳದ ಹೆಗ್ಗಡೆಯವರನ್ನು ಅವಹೇಳನ ಮಾಡುವುದು ಸರಿಯಲ್ಲ. ಸೌಜನ್ಯಾಳಿಗೆ ಆದ ಅನ್ಯಾಯ ಎಲ್ಲೂ ಈ ನಾಡಿನಲ್ಲಿ ಆಗಬಾರದು ಎಂದು ಹೇಳಿದರು.

ಸಾಣೂರು ದೇಂದಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀರಾಮ್‌ ಭಟ್‌, ಜಂಗಮ ಸಂಸ್ಥಾನ ಮಠದ ರುದ್ರಮಣಿ ಮಹಾಸ್ವಾಮಿ, ಉಜಿರೆ ಅಶೋಕ್‌ ಭಟ…, ಸಹನಾ ಕುಂದರ್‌ ಸೂಡ, ನ್ಯಾಯವಾದಿಗಳಾದ ಅರುಣ್‌ ಬಂಗೇರ, ಎಂ.ಕೆ. ವಿಜಯ ಕುಮಾರ್‌, ಜ್ಞಾನಸುಧಾ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಡಾ| ಸುಧಾಕರ ಶೆಟ್ಟಿ, ಶ್ರೀಪತಿ ಭಟ್‌ ಪುತ್ತಿಗೆ, ವಸಂತ ಗಿಳಿಯಾರ್‌, ರಾಕೇಶ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ನೀರೆ ಕೃಷ್ಣ ಶೆಟ್ಟಿ ಸ್ವಾಗತಿಸಿದರು.

 

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.