![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 16, 2023, 8:46 PM IST
ದಾವಣಗೆರೆ: ವರದಕ್ಷಿಣೆ ಕಿರುಕುಳದಿಂದ ಬೇಸತ್ತ ತಾಯಿ ಐದು ವರ್ಷದ ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ಸೂಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದ ಮಂಜುನಾಥ್ ಎಂಬುವರ ಪತ್ನಿ ಕವಿತಾ(27), ನಿಹಾರಿಕಾ ಆತ್ಮಹತ್ಯೆ ಮಾಡಿಕೊಂಡವರು.
ಕಳೆದ ಶುಕ್ರವಾರ ಕವಿತಾ ಮತ್ತು ನಿಹಾರಿಕಾ ಹೊನ್ನೆಬಾಗಿ ಗ್ರಾಮದಿಂದ ಕಾಣೆಯಾಗಿದ್ದರು. ಈ ಸಂಬಂಧ ಮಂಜುನಾ ಥ್ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಸೋಮವಾರ ಸೂಳೆಕೆರೆಯಲ್ಲಿ ತಾಯಿ-ಮಗಳು ಶವ ವಾಗಿ ಪತ್ತೆಯಾಗಿದ್ದಾರೆ. ಪತಿಯ ಮನೆಯವರ ವರದಕ್ಷಿಣೆ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ.ಕೆರೆಗೆ ಹಾರುವ ಮುನ್ನ ಮಗಳನ್ನು ವೇಲ್ನಿಂದ ಸೊಂಟಕ್ಕೆ ಕಟ್ಟಿಕೊಂಡು ಕವಿತಾ ಕೆರೆಗೆ ಹಾರಿದ್ದರು ಎಂಬುದು ಬೆಳಕಿಗೆ ಬಂದಿದೆ.
ಮೂಲತ ಎರೇಹಳ್ಳಿಯ ನಿವಾಸಿ ಕವಿತಾ ವಿವಾಹ ಆರು ವರ್ಷದ ಹಿಂದೆ ಹೊನ್ನೆಬಾಗಿ ಮಂಜುನಾಥ್ನೊಂದಿಗೆ ನಡೆದಿತ್ತು. ಹಲವಾರು ವರ್ಷಗಳಿಂದ ಪತಿ ಹಾಗೂ ಅವರ ಮನೆಯವರಿಂದ ನಿರಂತರ ವರದಕ್ಷಿಣೆ ಕಿರುಕಳ ನೀಡುತ್ತಿದ್ದರು ಎನ್ನಲಾಗುತ್ತಿದೆ. ಪತಿ ಹಾಗೂ ಮನೆಯವರ ಕಿರುಕಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕವಿತಾ ಮನೆಯವರು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.