BJP-JDS: ಸಿಡಿದೆದ್ದ ಸಿ.ಎಂ. ಇಬ್ರಾಹಿಂ- ಬಿಜೆಪಿ ಜತೆಗಿನ ಮೈತ್ರಿ ಒಪ್ಪಲಾರೆ
- ಜೆಡಿಎಸ್ ರಾಜ್ಯಾಧ್ಯಕ್ಷರ ಘೋಷಣೆ
Team Udayavani, Oct 16, 2023, 9:02 PM IST
ಬೆಂಗಳೂರು: “ನಮ್ಮದೇ ಅಸಲಿ ಜೆಡಿಎಸ್, ನಾನು ಪಕ್ಷದ ರಾಜ್ಯಾಧ್ಯಕ್ಷ. ಬಿಜೆಪಿ ಜತೆಗಿನ ಮೈತ್ರಿಯನ್ನು ಒಪ್ಪುವುದಿಲ್ಲ, ಎನ್ಡಿಎಗೆ ನಮ್ಮ ಬೆಂಬಲ ಇಲ್ಲ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಸ್ಪಷ್ಟವಾಗಿ ಹೇಳುವ ಮೂಲಕ ಬಿಜೆಪಿ-ಜೆಡಿಎಸ್ ಸ್ನೇಹಕ್ಕೆ ಹೊಸ ತಿರುವು ಕೊಟ್ಟಿದ್ದು, ಮುಂದೇನು ಎಂಬ ಕೌತುಕ ಮೂಡಿದೆ.
ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಮುನಿಸಿಕೊಂಡಿದ್ದ ಸಿ.ಎಂ. ಇಬ್ರಾಹಿಂ ತಮ್ಮ ಮುಂದಿನ ನಡೆ ಬಗ್ಗೆ ಚರ್ಚಿಸಲು ಸೋಮವಾರ ಬೆಂಗಳೂರಿನ ಸಿಎಂಎ ಗ್ರ್ಯಾಂಡ್ ಕನ್ವೆನ್ಶನ್ ಹಾಲ್ನಲ್ಲಿ ಚಿಂತನ-ಮಂಥನ ಸಭೆ ಕರೆದಿದ್ದರು. ಬಿಜೆಪಿ ಜತೆಗಿನ ಮೈತ್ರಿ ಪಕ್ಷದ ತೀರ್ಮಾನ ಅಲ್ಲ; ಎಚ್.ಡಿ. ಕುಮಾರಸ್ವಾಮಿಯವರು ಒಬ್ಬರೇ ಹೋಗಿ ವೈಯಕ್ತಿಕವಾಗಿ ಮೈತ್ರಿ ಮಾಡಿಕೊಂಡು ಬಂದಿದ್ದಾರೆ. ಪಕ್ಷವು ಒಂದು ಕುಟುಂಬದ ಸೊತ್ತಲ್ಲ, ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷವು ಎನ್ಡಿಎ ಜತೆ ಹೋಗುವುದಿಲ್ಲ ಎಂದು ನಾವು ಸ್ಪಷ್ಟ ತೀರ್ಮಾನ ಮಾಡಿದ್ದೇವೆ ಎಂಬುದಾಗಿ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ಕುಮಾರಸ್ವಾಮಿ ಅವರನ್ನು ಉಚ್ಛಾಟಿಸುವ ಬಗ್ಗೆಯೂ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ. ಆದರೆ ಸಭೆಯಲ್ಲಿ ಜೆಡಿಎಸ್ನ ಹಾಲಿ ಶಾಸಕರಾಗಲಿ, ಪ್ರಮುಖ ಮಾಜಿಗಳಾಗಲಿ ಇರಲಿಲ್ಲ. ಆದರೆ ಜೆಡಿಯು ಪಕ್ಷದ ಎಂ.ಪಿ. ನಾಡಗೌಡ ಹಾಗೂ ಮಹಿಮಾ ಪಟೇಲ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.