Bagalkote: ದೇವಿ ಆರಾಧನೆಯಿಂದ ದುಷ್ಟಶಕ್ತಿ ದೂರ: ಸ್ವಾಮೀಜಿ


Team Udayavani, Oct 17, 2023, 3:40 PM IST

Bagalkote: ದೇವಿ ಆರಾಧನೆಯಿಂದ ದುಷ್ಟಶಕ್ತಿ ದೂರ: ಸ್ವಾಮೀಜಿ

ಮಹಾಲಿಂಗಪುರ: ದೇವಿಯನ್ನು ಸ್ಮರಿಸುತ್ತಾ ತಪಸ್ಸು ಮಾಡುವುದರಿಂದ ದುಷ್ಟಶಕ್ತಿಗಳ ಕಾಟ ದೂರಾಗಿ ಆಯುಷ್ಯ, ಆರೋಗ್ಯ, ಸಂಪತ್ತು ಪ್ರಾಪ್ತಿಯಾಗುವುದು ಎಂದು ಸ್ಥಳೀಯ ಸಿದ್ದಾರೂಢ ಬ್ರಹ್ಮವಿದ್ಯಾಶ್ರಮದ ಸಹಜಾನಂದ ಸ್ವಾಮೀಜಿ ಹೇಳಿದರು.

ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ನವರಾತ್ರಿ ನಿಮಿತ್ತ ಆರಂಭಗೊಂಡ 33ನೇ ವರ್ಷದ ದೇವಿ ಪುರಾಣ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಪ್ರತಿವರ್ಷ ವಿಜೃಂಭಣೆಯಿಂದ ದೇವಿ ಪುರಾಣ ಮತ್ತು ದಸರಾ ಸಾಂಸ್ಕೃತಿಕ ಉತ್ಸವ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಒಂಭತ್ತು ದಿನಗಳ ಕಾಲ ದೇವಿಯ ಪುರಾಣ ಹೇಳಲಿರುವ ರನ್ನಬೆಳಗಲಿ ಪಟ್ಟಣದ ಮಹಾಲಿಂಗಶಾಸ್ತ್ರಿಗಳು ಚಿದಾನಂದ ಅವಧೂತರು ಬರೆದ 18 ಅಧ್ಯಾಯಗಳ ದೇವಿ ಪುರಾಣಕ್ಕೆ ಚಾಲನೆ ನೀಡಿ, ಪೀಠಿಕಾ ಅಧ್ಯಾಯವನ್ನು ವಿವರಿಸಿ ಮಾತನಾಡಿದರು.

ದೇವಿಯ ಪುರಾಣ ಓದುವುದರಿಂದ ಹಾಗೂ ಕೇಳುವದರಿಂದ ಸರ್ವ ಸಂಕಷ್ಟಗಳು ದೂರಾಗಿ ಜೀವನ ಪಾವನವಾಗುವುದು. ದೇವಿಯ ಪುರಾಣವು ದೇಹದ ಪುರಾಣವೆಂದು ತಿಳಿದು, ಒಂಭತ್ತು ದಿನಗಳ ಕಾಯ ಭಯ-ಭಕ್ತಿಯಿಂದ ದೇವಿಯನ್ನು ಆರಾಧಿಸಿ, ನಮ್ಮಲ್ಲಿರುವ ನವವಿಧ ದುಷ್ಟರನ್ನು ಸಂಹರಿಸುವ ಮೂಲಕ ಸನ್ಮಾರ್ಗದಲ್ಲಿ ನಡೆದು ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಬನಶಂಕರಿ ಸಾಂಸ್ಕೃತಿಕ ಭವನದಲ್ಲಿ ಬೆಳ್ಳಿಯ ದೇವಿಯ ಮೂರ್ತಿಯನ್ನು ಪ್ರತಿಷ್ಟಾಪಿಸಿ ಪೂಜೆ ಸಲ್ಲಿಸಿ, ವಿವಿಧ ಸಮಾಜಗಳ ಹಿರಿಯರ ಸಮ್ಮುಖದಲ್ಲಿ ದೇವಿಗೆ ಪೂಜೆ ಸಲ್ಲಿಸಿ ಒಂಭತ್ತು ದಿನಗಳ ದೇವಿ ಪುರಾಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪ್ರವಚನದ ನಂತರ ಸ್ಥಳೀಯ ಬಸವಾನಂದ ಶಾಲೆ, ಜೆಸಿ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಹಿರಿಯರಾದ ಮಹಾಂತೇಶ ಹಿಟ್ಟಿನಮಠ, ಮಹಾಲಿಂಗಪ್ಪ ಜಕ್ಕನ್ನವರ, ಮಹಾಲಿಂಗಪ್ಪ  ಕೋಳಿಗುಡ್ಡ, ಮಲ್ಲನಗೌಡ ಪಾಟೀಲ, ಮಹಾಲಿಂಗಪ್ಪ ತಟ್ಟಿಮನಿ, ಗುರುಪಾದಯ್ಯ ಛಟ್ಟಿಮಠ, ಕುಮಾರ ಮನ್ನಯ್ಯನವರಮಠ, ಗೌಡಪ್ಪಗೌಡ ಪಾಟೀಲ, ಮಲ್ಲಪ್ಪ ಭಾಂವಿಕಟ್ಟಿ, ಡಾ| ಬಿ.ಡಿ.ಸೋರಗಾಂವಿ, ಸಿದಗಿರೆಪ್ಪ ಕಾಗಿ, ಲಕ್ಕಪ್ಪ ಚಮಕೇರಿ, ನಾರಾಯಣ ಕಿರಗಿ, ಶ್ರೀಶೈಲಪ್ಪ ಬಾಡನವರ, ಪ್ರಭು ಬೆಳಗಲಿ, ಸಂಜು ಜಮಖಂಡಿ, ಮಹಾದೇವ ಹುಣಶ್ಯಾಳ, ಈಶ್ವರ ಚಮಕೇರಿ, ಎಂ.ಎಸ್‌.ದಢೂತಿ, ಸುನೀಲ ಜಮಖಂಡಿ, ಬಸವರಾಜ ಹುಲ್ಯಾಳ, ವಿನೋದ ಚಮಕೇರಿ, ಗುರುಪಾದ ಅಂಬಿ, ಬಿ.ಸಿ. ಪೂಜಾರಿ, ಸತೀಶ ಸೋರಗಾಂವಿ, ಸಿದ್ದು ಧಡೂತಿ, ಪ್ರಕಾಶ ಬಾಡನವರ, ಅಶೋಕ ಬಾಣಕಾರ, ಸುದರ್ಶನ ಹಿಕಡಿ, ಶಿವಾನಂದ ಕಿತ್ತೂರ, ಮಂಜುನಾಥ ಭಾವಿಕಟ್ಟಿ ಇದ್ದರು.

ಕುಂಕುಮಾರ್ಚನೆ: ಮಂಗಳವಾರ ಸಂಜೆ ದೇವಿ ಪುರಾಣ ನಿಮಿತ್ತ ಅನ್ನಪೂರ್ಣೇಶ್ವರಿ ನೇಕಾರ ಮಹಿಳಾ ಸಂಘದಿಂದ ದೇವಿಗೆ ಕುಂಕುಮಾರ್ಚನೆ ಕಾರ್ಯಕ್ರಮ ಜರುಗಲಿದೆ. ಮಹಾಲಿಂಗಪುರದ ವಿ.ಕೆ. ಡ್ಯಾನ್ಸ್‌ ಮತ್ತು ಫಿಟ್‌ನೆಸ್‌ ಅಕಾಡೆಮಿಯ ಮಕ್ಕಳಿಂದ ನೃತ್ಯ ಕಾರ್ಯಕ್ರಮ ಜರುಗಲಿದೆ.

ಟಾಪ್ ನ್ಯೂಸ್

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Adulltrate-Milk

Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ

Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.