Alnavar: ಜಿಲ್ಲೆಗೆ 35 ಕೋಟಿ ಬೆಳೆವಿಮೆ ಪರಿಹಾರ ನಿರೀಕ್ಷೆ
ಬೆನಕನಟ್ಟಿಗೆ ಬಸ್ ತಂಗುದಾಣ ಮುಂತಾದ ಸಮಸ್ಯೆಗಳು ಕೇಳಿಬಂದವು
Team Udayavani, Oct 18, 2023, 1:44 PM IST
ಅಳ್ನಾವರ: ಪ್ರಸಕ್ತ ಸಾಲಿನ ಮಳೆಗಾಲದ ವೈಪರೀತ್ಯದಿಂದ ರೈತರ ಬೆಳೆ ಸರಿಯಾಗಿ ಬಂದಿಲ್ಲ. ರೈತರು ತಾವು ಬೆಳೆದ ಬೆಳೆಗೆ ವಿಮೆ ಕಟ್ಟಿದ್ದು, ಜಿಲ್ಲೆಗೆ ಬೆಳೆ ವಿಮೆ ಪರಿಹಾರ 35 ಕೋಟಿ ರೂ. ಬರುವ ನಿರೀಕ್ಷೆ ಇದೆ. ಇದರಿಂದ ಇನ್ಸೂರೆನ್ಸ್ ತುಂಬಿದ ರೈತರಿಗೆ ಅನುಕೂಲ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಸಮೀಪದ ನಿಗದಿ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಮಾತನಾಡಿ, ಕೃಷಿ ಹಾಗೂ ತೋಟಗಾರಿಕೆ ಬೆಳೆಗೆ ಪರಿಹಾರ ದೊರೆಯಲಿದೆ. ಜಿಲ್ಲೆಯ ಬಹುತೇಕ ಭಾಗವನ್ನು ಬರಗಾಲ ಪ್ರದೇಶ ಎಂದು ಸರ್ಕಾರ ಘೋಷಣೆ ಮಾಡಿದೆ. ರಾಜ್ಯ ಸರ್ಕಾರ ಸದಾ ಬಡವರ ಹಾಗೂ ಕೃಷಿಕರ ಪರವಾಗಿದೆ ಎಂದರು.
ಜನರ ಸಮಸ್ಯೆಗೆ ಪರಿಹಾರ ಒದಗಿಸಲು ನೇರವಾಗಿ ಗ್ರಾಪಂ ಮಟ್ಟದಲ್ಲಿ ಬಂದು ಸಭೆ ಆಯೋಜಿಸಿ ಪರಿಹಾರ ನೀಡಲು ಮುಂದಾಗಿದ್ದೇನೆ. ಸಮಸ್ಯೆಗಳಿಗೆ ಸ್ಥಳದಲ್ಲಿಯೆ ಪರಿಹಾರ ಒದಗಿಸಲಾಗುತ್ತಿದೆ. ನಿಗದಿ ಗ್ರಾಮದ ಹಿರೇಕೆರೆಯನ್ನು 2.50 ಕೋಟಿ ರೂ.
ವೆಚ್ಚದಲ್ಲಿ ಅಭಿವೃದ್ಧಿ ಮಾಡುವ ಕಾಮಗಾರಿ ಶೀಘ್ರದಲ್ಲಿ ಆರಂಭಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಿದ್ದೇನೆ. ಈ ಭಾಗದ ಎಲ್ಲ ಕೆರೆಗಳ ಅಭಿವೃದ್ಧಿ, ರಸ್ತೆ, ಶಾಲೆಗಳ ದುರಸ್ತಿ, ಚರಂಡಿ ನಿರ್ಮಾಣ ಸೇರಿದಂತೆ ಮೂಲಸೌಲಭ್ಯ ಒದಗಿಸಲು ಶ್ರಮಿಸುವುದಾಗಿ ಹೇಳಿದರು.
ಸರ್ಕಾರ ಘೋಷಣೆ ಮಾಡಿದ ಐದು ಉಚಿತ ಭಾಗ್ಯದ 56 ಸಾವಿರ ಕೋಟಿ ರೂ. ಅನುದಾನ ನೇರವಾಗಿ ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಶಕ್ತಿ ಯೋಜನೆಯಡಿ ಪ್ರವಾಸ ಮಾಡುವ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಹಿಂದಿದ್ದ 80
ಲಕ್ಷ ಪ್ರವಾಸಿಗರ ಸಂಖ್ಯೆ ಈಗ 1.20 ಕೋಟಿಗೆ ತಲುಪಿ, 40 ಲಕ್ಷ ಹೆಚ್ಚಿನ ಜನ ಬಸ್ ಸೇವೆ ಪಡೆಯುತ್ತಿದ್ದಾರೆ.
ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2000 ರೂ. ನೀಡಲಾಗುತ್ತಿದೆ. ಈ ಭಾಗದಲ್ಲಿ ಇನ್ನೂ 117 ಮಹಿಳೆಯರಿಗೆ ತಾಂತ್ರಿಕ ದೋಷದಿಂದ ಹಣ ಬಿಡುಗಡೆ ಆಗಿಲ್ಲ. ಶೀಘ್ರದಲ್ಲಿಯೆ ಅದನ್ನು ಬಗೆಹರಿಸಿ ಅವರ ಖಾತೆಗೆ ಹಣ ದೊರಕಿಸಿಕೊಡುವ ಭರವಸೆ
ನೀಡಿದರು.
ಕೇಳಿದ ಸಮಸ್ಯೆಗಳು: ನಿಗದಿ ಗ್ರಾಮದ ಹಿರೆಕೆರೆಯ ಅಭಿವೃದ್ಧಿ, ಹಳ್ಳಕ್ಕೆ ಬಾಂದಾರ ನಿರ್ಮಾಣ, ನರೇಗಾ ಯೋಜನೆಯಡಿ ನಮ್ಮ ಹೊಲ ನಮ್ಮ ರಸ್ತೆ ನಿರ್ಮಾಣ, ನಿಗದಿ ಗ್ರಾಮದ ಕೆಂಪು ಕೆರೆಗೆ ಸೇರುವ ಹೊಲಸು ನೀರು ಬೇರೆಡೆ ರವಾನೆ, 19 ಬಡ ಕುಟುಂಬಗಳ ಮನೆ ಹಕ್ಕುಪತ್ರ ವಿತರಣೆ, ಬಸ್ ವ್ಯವಸ್ಥೆ, ಮುಖ್ಯ ರಸ್ತೆಯಲ್ಲಿ ಹಂಪ್ ನಿರ್ಮಾಣ, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಶಾಲಾ ಮೈದಾನ, ಬೆನಕನಟ್ಟಿಗೆ ಬಸ್ ತಂಗುದಾಣ ಮುಂತಾದ ಸಮಸ್ಯೆಗಳು ಕೇಳಿಬಂದವು.
ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುನಂದಾ ಬಡಿಗೇರ, ತಾಪಂ ಇಒ ಗಂಗಾಧರ ಕಂದಕೂರ, ತಹಶೀಲ್ದಾರ್ ದೊಡ್ಡಪ್ಪ ಹೂಗಾರ, ಪಿಡಿಒ ವೆಂಕಟೇಶ ಮುರಗೋಡ, ಹನಮಂತ ಅಜ್ಜನ್ನವರ, ಸಂತೋಷ ದಾಸನಕೊಪ್ಪ, ಸುಧಾ ನಾಯ್ಕರ, ಕಸ್ತೂರಿ ಪಾಟೀಲ, ನಾಗಪ್ಪ ಜೋಡಳ್ಳಿ, ಮೌನೇಶ ಬಿಡಗೇರ, ಪುಷ್ಪಾ ಅಳಗವಾಡಿ, ಸುವರ್ಣಾ ಬಾಡದ ಇದ್ದರು.
ಇದೇ ಸಂದರ್ಭದಲ್ಲಿ ಗ್ರಾಪಂ ವತಿಯಿಂದ ಸಚಿವರ ಸನ್ಮಾನ ನಡೆಯಿತು. ವಿವಿಧ ಫಲಾನುಭವಿಗಳಿಗೆ ಮಾಸಾಶನ ನೀಡಲಾಯಿತು. ಮನಸೂರು, ಮನಗುಂಡಿಯಲ್ಲಿ ಕೂಡಾ ಜನಸಂಪರ್ಕ ಸಭೆ ನಡೆಯಿತು. ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್-ಯುವಕನಿಗೆ ಮರುಜನ್ಮ
Minister V. Somanna: ಭಾರತೀಯ ರೈಲ್ವೇ ಜತೆ ಕೊಂಕಣ ರೈಲ್ವೇ ಶೀಘ್ರ ವಿಲೀನ
Dharwad: ಖಾಸಗಿ ಬಸ್ನಲ್ಲಿ 77 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಜಪ್ತಿ
MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.