BJP: ನಮ್ಮವರೇ ನನ್ನನ್ನು ವ್ಯವಸ್ಥಿತವಾಗಿ ಮುಗಿಸುವ ಕೆಲಸ ಮಾಡುತ್ತಿದ್ದಾರೆ: ರೇಣುಕಾಚಾರ್ಯ

ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂಬ ಹೇಳಿಕೆ ನೀಡಿದ್ದೇ ತಪ್ಪಾ..?

Team Udayavani, Oct 18, 2023, 5:55 PM IST

renukacharya

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂಬ ಹೇಳಿಕೆ ನೀಡಿದ ನಂತರ ನಮ್ಮ ಪಕ್ಷದವರೇ ನನ್ನನ್ನು ಬಹಳ ವ್ಯವಸ್ಥಿತವಾಗಿ ಮುಗಿಸುವ ಕೆಲಸ ಮಾಡುತ್ತಿದ್ದಾರೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರವೀಂದ್ರನಾಥ್,ಮಾಡಾಳ್ ವಿರೂಪಾಕ್ಷಪ್ಪ, ಗುರು ಸಿದ್ದನಗೌಡ ಎಲ್ಲರನ್ನೂ ಮುಗಿಸುವ ಕೆಲಸ ಸಿದ್ದೇಶ್ವರ್ ಮಾಡಿದ್ದಾರೆ ಎಂದರು.
ನಾನು ಸಹ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಅಂದಾಕ್ಷಣ ನನ್ನನ್ನು ಮುಗಿಸುವ ಕೆಲಸ ಮಾಡುತ್ತಿದ್ದಾರೆ. ಪಕ್ಷದಲ್ಲಿನ ಸರ್ವಾಧಿಕಾರಿ ಧೋರಣೆ ಖಂಡಿಸಿದ್ದೇನೆ. ವಿನಾಕಾರಣ ನನ್ನ ವಿರುದ್ಧ ಅಪಪ್ರಚಾರ ಮಾಡ ಲಾಗುತ್ತಿದೆ. ಅತ್ಯಂತ ವ್ಯವಸ್ಥಿತವಾಗಿ ನನ್ನನ್ನು ಮುಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಹೋಗುವವರು ಹೋಗಲಿ ಎಂಬುದಾಗಿ ಸಂಸದ ಸಿದ್ದೇಶ್ವರ ಹೇಳಿದ್ದಾರೆ. ಈವರೆಗೆ ಅಧಿಕೃತವಾಗಿ ಯಾರಿಗೂ ಲೋಕ ಸಭಾ ಟಿಕೆಟ್ ಘೋಷಣೆ ಮಾಡಿಲ್ಲ.ಪಕ್ಷದಲ್ಲಿ ಸಿದ್ದೇಶ್ವರ ಅವರಗಿಂತಲೂ ನಾನು ಸೀನಿಯರ್. ಸಿದ್ದೇಶ್ವರ ಅವರ ಬಗ್ಗೆ ಗೌರವ ಇದೆ. ನನಗಿಂತಲೂ ವಯಸ್ಸಿನಲ್ಲಿ ಹಿರಿಯರು.ಅವರ ತಂದೆ ಮಲ್ಲಿಕಾರ್ಜುನಪ್ಪ ಅವರ ಪರವಾಗಿ ಮೂರು, ಸಿದ್ದೇಶ್ವರ ಅವರ ಪರವಾಗಿ ನಾಲ್ಕು ಚುನಾವಣೆ ಮಾಡಿದ್ದೇನೆ. ಆದರೆ, ಬಹಳಷ್ಟು ಜನರನ್ನೂ ಮೂಲೆ ಗುಂಪು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ನನಗೆ ಫೋನ್ ಕರೆ ಮಾಡಿ ಪಕ್ಷ ಬಿಡುವ ಕುರಿತು ಮಾತನಾಡುತ್ತಿದ್ದಾರೆ. ಪಕ್ಷದಲ್ಲಿ ಸಮರ್ಥ ನಾಯಕತ್ವ ಇಲ್ಲದೇ ಇರು ವುದೇ ಇದಕ್ಕೆ ಕಾರಣ. ಹೊನ್ನಾಳಿ, ನ್ಯಾಮತಿ ಎರಡು ತಾಲೂಕುಗಳನ್ನು ಬರಗಾಲ ಪಟ್ಟಿಗೆ ಸೇರ್ಪಡೆಗೆ ಒತ್ತಾಯಿ ಸಿ ದ್ದೇನೆ. ಬಾಕಿ ಇರುವ ಅನುದಾನ ಮರು ಚಾಲನೆ ಕೊಡುವಂತೆ ಕಾಂಗ್ರೆಸ್ ನಾಯಕರನ್ನೂ ಭೇಟಿಯಾಗಿದ್ದೇನೆಯೇ ಹೊರತು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ನಮ್ಮವರಿಗೇ ನಾನು ಬೇಡವೇನೋ ಅನಿಸುತ್ತೇ ಎಂದು ಬೇಸರದಿಂದ ಹೇಳಿದರು.

ಪಕ್ಷದ ನಾಯಕರ ಮೇಲೆ ನೋವಾಗಿದೆ. ಸರ್ಕಾರ ಇದ್ದಾಗ ಆರು ಸ್ಥಾನ ಖಾಲಿ ಇದ್ದರೂಸಚಿವ ಸ್ಥಾನ ಕೊಡಲಿಲ್ಲ. ಕಾಂಗ್ರೆಸ್ ನವರು ಏಕ ಕಾಲದಲ್ಲಿ ಮಂತ್ರಿ ಮಾಡಿದರು.ರಾಜೂ ಗೌಡ ಮತ್ತು ನನಗೂ ಅನ್ಯಾಯ ಮಾಡಿದರು. ದಾವಣಗೆರೆ ಜಿಲ್ಲೆಯಲ್ಲಿ ಎಸ್. ಎ.ರವೀಂದ್ರನಾಥ್ ಅವರಿಗೆ ಸಚಿವ ಸ್ಥಾನ ಕೊಡಬಹುದಿತ್ತು ಎಂದರು.

ಇದನ್ನೂ ಓದಿ: MSP ; ಗೋಧಿಗೆ ದಾಖಲೆಯ ಕ್ವಿಂಟಲ್‌ಗೆ 150 ರೂ.ಹೆಚ್ಚಿಸಿದ ಕೇಂದ್ರ ಸರಕಾರ

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.