![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 18, 2023, 7:55 PM IST
ಬೆಳ್ತಂಗಡಿ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದು ಬಾಲಕನೋರ್ವ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಅ.18ರಂದು ಲಾೖಲದಲ್ಲಿ ನಡೆದಿದೆ. ಮಹಮ್ಮದ್ ರಂಝಿನ್ (10) ಮೃತ ಬಾಲಕ.
ಪಾರೆಂಕಿ ಗ್ರಾಮದ ಅರ್ತಿಲಾ ಮನೆಯ ರಂಝಿನ್ ಶಾಲಾ ರಜೆಯ ಹಿನ್ನೆಲೆ ಸಂಬಂಧಿಕರ ಮನೆಗೆ ಬಂದಿದ್ದು, ಬುಧವಾರ ಬೆಳಗ್ಗೆ ಅಂಗಡಿಗೆ ಹೋಗಿ ಮರಳಿ ರಸ್ತೆ ದಾಟುವಾಗ ಲಾೖಲ ಜಂಕ್ಷನ್ ಬಳಿ ಉಜಿರೆಯಿಂದ ಬಂದ ಪಿಕಪ್ ಢಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾನೆ.
ತತ್ಕ್ಷಣ ಸ್ಥಳೀಯರು ಬಾಲಕನನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಪಿಕಪ್ ವಾಹನ ಚಾಲಕ ವೇಣೂರಿನ ನಿವಾಸಿ ಜಯ ವಿರುದ್ಧ ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆ: ದೂರು ದಾಖಲು
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಶಾಂತಿಗುಡ್ಡೆ ಎಂಬಲ್ಲಿ ವ್ಯಕ್ತಿಯೋರ್ವರಿಗೆ ಹಲ್ಲೆ ನಡೆಸಿದ ಪ್ರಕರಣ ನಡೆದಿದೆ. ಈ ಸಂಬಂಧ ಮೋಹನ ಎಂಬವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅವರು ಅ. 18ರಂದು ಬೆಳಗ್ಗೆ ಮನೆಯಿಂದ ಕೂಲಿ ಕೆಲಸಕ್ಕೆಂದು ಹೊರಟು ಶಾಂತಿಗುಡ್ಡೆ ಎಂಬಲ್ಲಿ ಒಬಯ್ಯ ಪೂಜಾರಿ ಎಂಬವರೊಂದಿಗೆ ಮಾತನಾಡುತ್ತಿದ್ದಾಗ, ಸದಾಶಿವ ಯಾನೆ ಮೇದಪ್ಪ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮರದ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎಂದು ಮೋಹನ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.