Politics: ಅದಾನಿ ಗ್ರೂಪ್‌ನಿಂದ 12,000 ಕೋಟಿ ರೂ. ವಂಚನೆ- ರಾಹುಲ್‌ ಆರೋಪ

ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಮತ್ತೂಂದು ಸುತ್ತಿನ ವಾಕ್‌ ಸಮರ

Team Udayavani, Oct 18, 2023, 9:02 PM IST

rahul gandhi 1

ನವದೆಹಲಿ: ಅದಾನಿ ಗ್ರೂಪ್‌ಗೆ ಸಂಬಂಧಪಟ್ಟಂತೆ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಮತ್ತೂಂದು ಸುತ್ತಿನ ವಾಕ್‌ ಸಮರ ಏರ್ಪಟ್ಟಿದೆ.

“ನಿಜವಾದ ದರಕ್ಕಿಂತ ಹೆಚ್ಚಿನ ಬೆಲೆಗೆ ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗಿದೆ ಎಂದು ತೋರಿಸಿ, ವಿದ್ಯುತ್‌ ದರವಾಗಿ ಜನರಿಂದ ಹೆಚ್ಚುವರಿಯಾಗಿ 12,000 ಕೋಟಿ ರೂ.ಗಳನ್ನು ಅದಾನಿ ಗ್ರೂಪ್‌ ಸಂಗ್ರಹಿಸಿದೆ’ ಎಂದು ಮಾಧ್ಯಮಗಳ ವರದಿಯನ್ನು ಉಲ್ಲೇಖೀಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಅವರು, “ಈ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ತನಿಖೆಗೆ ಒಳಪಡಿಸಬೇಕು’ ಎಂದು ಆಗ್ರಹಿಸಿದರು.
“2024ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಈ ಪ್ರಕರಣದ ತನಿಖೆಗೆ ಆದೇಶಿಸಲಾಗುವುದು’ ಎಂದು ಭರವಸೆ ನೀಡಿದ ಅವರು, “ಈ ವಿಚಾರದಲ್ಲಿ ಪ್ರಧಾನಿ ಮೋದಿ ಏಕೆ ಮೌನ ತಾಳಿದ್ದಾರೆ?. ತಮ್ಮ ವಿಶ್ವಾಸರ್ಹತೆಯನ್ನು ಕಾಪಾಡಿಕೊಳ್ಳಲು ಈ ಪ್ರಕರಣದ ತನಿಖೆಯನ್ನು ಏಕೆ ಆರಂಭಿಸುತ್ತಿಲ್ಲ’ ಎಂದು ಪ್ರಶ್ನಿಸಿದರು.

ವಿಶ್ವದ ಅತ್ಯಂತ ಭ್ರಷ್ಟ ಕುಟುಂಬ:
ಅದಾನಿ ಗ್ರೂಪ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್‌ ಟೀಕೆ ಮಾಡಿದ ಬೆನ್ನಲ್ಲೇ ಅವರ ವಿರುದ್ಧ ಬಿಜೆಪಿ ಮುಗಿಬಿದ್ದಿದೆ. ಈ ಬಗ್ಗೆ ಮಾತನಾಡಿದ ಬಿಜೆಪಿ ವಕ್ತಾರ ಗೌರವ್‌ ಭಾಟಿಯಾ “ವಿಶ್ವದಲ್ಲೇ ಗಾಂಧಿ ಕುಟುಂಬವು ಅತ್ಯಂತ ಭ್ರಷ್ಟ ಕುಟುಂಬವಾಗಿದೆ. ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಸ್ವತಃ ರಾಹುಲ್‌ ಗಾಂಧಿ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ತಮ್ಮ ಭಾವ ರಾಬರ್ಟ್‌ ವಾದ್ರಾ ಅವರ ವಿರುದ್ಧದ ಆರೋಪಗಳ ಕುರಿತು ಅವರು ಎಂದೂ ಮಾತನಾಡುವುದಿಲ್ಲ’ ಎಂದು ಟೀಕಿಸಿದರು. ಅದಾನಿ ಗ್ರೂಪ್‌ ವಿರುದ್ಧದ ಕೇಸು ಇನ್ನೂ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ ಎಂದರು.

ಶರದ್‌ ಪ್ರಧಾನಿಯಲ್ಲ…
ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಉದ್ಯಮಿ ಗೌತಮ್‌ ಅದಾನಿಯವರನ್ನು ಯಾಕೆ ಭೇಟಿ ಮಾಡಿದ್ದರು ಎಂಬುದನ್ನು ಪ್ರಶ್ನಿಸಿಲ್ಲ ಎಂದು ರಾಹುಲ್‌ ಹೇಳಿದ್ದಾರೆ. “ಶರದ್‌ ಪವಾರ್‌ ಪ್ರಧಾನಿ ಅಲ್ಲ. ಹೀಗಾಗಿ, ಅವರು ಅದಾನಿಯವರನ್ನು ಭೇಟಿ ಮಾಡುವುದರಲ್ಲಿ ತಪ್ಪು ಇಲ್ಲ. ಪವಾರ್‌ ಅವರು ಅದಾನಿಯವರನ್ನು ರಕ್ಷಿಸುತ್ತಿಲ್ಲ. ಆದರೆ, ಮೋದಿಯವರು ಅವರನ್ನು ಬೆಂಬಲಿಸಿ, ರಕ್ಷಿಸುತ್ತಿದ್ದಾರೆ’ ಟೀಕಿಸಿದರು.

 

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.